ಬ್ರೇಕಿಂಗ್ ನ್ಯೂಸ್
28-04-21 01:03 pm Headline Karnataka News Network ದೇಶ - ವಿದೇಶ
ಅಗರ್ತಲಾ, ಎ.28: ಕೋವಿಡ್ ನಿಯಮ ಉಲ್ಲಂಘಿಸಿ ಅದ್ದೂರಿ ಮದುವೆ ಸಮಾರಂಭ ನಡೆಸುತ್ತಿದ್ದ ವೇಳೆ ಜಿಲ್ಲಾಧಿಕಾರಿಯೇ ಸ್ವತಃ ರೈಡ್ ಮಾಡಿ, ವರ ಸೇರಿದಂತೆ ಸೇರಿದ್ದ ಜನರನ್ನು ಬಂಧಿಸಲು ಆದೇಶ ಮಾಡಿದ ಘಟನೆಯ ವಿಡಿಯೋ ವೈರಲ್ ಆಗಿದ್ದು ಅಧಿಕಾರಿಯ ದರ್ಪದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.
ತ್ರಿಪುರಾದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ರಾತ್ರಿ 10ರಿಂದ ಬೆಳಗ್ಗೆ 5 ರ ವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಮದುವೆಗಳಿಗೆ ನೂರು ಜನಕ್ಕೆ ಸೀಮಿತಗೊಳಿಸಿ ಸಮಾರಂಭ ನಡೆಸುವಂತೆ ಸೂಚಿಸಲಾಗಿದೆ.

ಈ ನಡುವೆ, ಪಶ್ಚಿಮ ತ್ರಿಪುರಾದಲ್ಲಿ ರಾತ್ರಿ ಹತ್ತು ಗಂಟೆ ನಂತರವೂ ಮದುವೆ ಸಮಾರಂಭ ಏರ್ಪಡಿಸಿದ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಶೈಲೇಶ್ ಕುಮಾರ್ ಯಾದವ್ ಸಮಾರಂಭ ನಡೆಯುತ್ತಿದ್ದ ವೇಳೆ ದಾಳಿ ನಡೆಸಿದ್ದಾರೆ. ಮದುವೆ ಹಾಲ್ ಗೆ ಪೊಲೀಸರ ಜೊತೆ ನುಗ್ಗಿದ ಜಿಲ್ಲಾಧಿಕಾರಿ, ಸಮಾರಂಭದಲ್ಲಿ ಸೇರಿದ್ದ ಅತಿಥಿಗಳನ್ನು ದಬಾಯಿಸಿ ಹೊರಗೆ ಕಳಿಸಿದ್ದಾರೆ. ಈ ವೇಳೆ, ಅತಿಥಿಗಳು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದ್ದು ಕೂಡಲೇ ಅಲ್ಲಿಂದ ಜಾಗ ಖಾಲಿ ಮಾಡುವಂತೆ ಅಧಿಕಾರಿ ಸೂಚಿಸಿದ್ದಾರೆ.
ಮದುವೆ ಗಂಡು ಸೇರಿದಂತೆ ಜೊತೆಗಿದ್ದ ಸಂಬಂಧಿಕರನ್ನು ಜಿಲ್ಲಾಧಿಕಾರಿಯೇ ಕುತ್ತಿಗೆ ಕೈಹಾಕಿ ದೂಡಿದ್ದು ಪೊಲೀಸರಲ್ಲಿ ಅರೆಸ್ಟ್ ಮಾಡುವಂತೆ ಹೇಳಿದ್ದಾರೆ. ಮದುವೆ ನಡೆಸಲು ಅನುಮತಿ ಪಡೆದಿದ್ದೇವೆ ಎಂದು ವರನ ಕಡೆಯವರು ಹೇಳಿದರೂ, ರಾತ್ರಿ ಹತ್ತರ ವರೆಗೆ ಮಾತ್ರ ಅನುಮತಿ ಇರುವುದು. ಆನಂತರವೂ ನೀವು ಇಷ್ಟು ಜನರನ್ನು ಸೇರಿಸಿದ್ದೀರಿ. ಕೋವಿಡ್ ರೂಲ್ ಮತ್ತು 144 ಸೆಕ್ಷನ್ ಉಲ್ಲಂಘಿಸಿದ್ದಕ್ಕೆ ಇವರನ್ನೆಲ್ಲ ಬಂಧಿಸಿ ಎನ್ನುತ್ತಲೇ ದರ್ಪದಿಂದ ನಡೆದುಕೊಂಡಿದ್ದಾರೆ.

ಪೊಲೀಸರು 19 ಮಹಿಳೆಯರು ಸೇರಿದಂತೆ 31 ಮಂದಿಯನ್ನು ಬಂಧಿಸಿದ್ದಾರೆ. " ಇವರೆಲ್ಲ ಒಳ್ಳೆ ಎಜುಕೇಟೆಡ್ ಮಂದಿ. ಕೋವಿಡ್ ಸೋಂಕು ಹೆಚ್ಚುತ್ತಿದ್ದರೂ, ನಿಯಮ ಪಾಲಿಸುತ್ತಿಲ್ಲ. ಇದ್ರ ನಡುವೆ ಸರಕಾರ ಏನೂ ಮಾಡಲ್ಲ ಎಂದು ಜನರು ಆರೋಪ ಮಾಡುತ್ತಾರೆ. ಆದರೆ ಸೆಕ್ಷನ್ ಹಾಕಿದ್ದರೂ, ಅದನ್ನು ಪಾಲನೆ ಮಾಡದೆ ಸೋಂಕು ಹೆಚ್ಚಲು ಕಾರಣವಾಗುತ್ತಿದ್ದಾರೆ. ವೆಸ್ಟ್ ಅಗರ್ತಲಾ ಪೊಲೀಸ್ ಠಾಣೆಯ ಠಾಣಾಧಿಕಾರಿಯನ್ನು ಸಸ್ಪೆಂಡ್ ಮಾಡ್ತೀನಿ ಎಂದು ವಿಡಿಯೋದಲ್ಲಿ ಜಿಲ್ಲಾಧಿಕಾರಿ ಶೈಲೇಶ್ ಯಾದವ್ ಹೇಳಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಅಧಿಕಾರಿಯ ವರ್ತನೆ ಬಗ್ಗೆ ಆಕ್ರೋಶ, ಟೀಕೆ ಕೇಳಿಬಂದಿದೆ. ಸ್ಥಳೀಯ ಬಿಜೆಪಿ ಶಾಸಕ ಕೂಡ ಅಧಿಕಾರಿಯ ವರ್ತನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಅಲ್ಲಿ ಸೇರಿದ್ದ ಅತಿಥಿಗಳಿಗೆ ಕಿರುಕುಳ ಕೊಟ್ಟಿದ್ದಾರೆ. ಅರ್ಚಕರನ್ನು ದೂಡಿದ್ದಾರೆ. ವರನ ಕುತ್ತಿಗೆ ಹಿಡಿದು ತಳ್ಳಿದ್ದಾರೆ. ಈ ಪರಿ ದರ್ಪ ತೋರಬೇಕಿತ್ತೇ ಎಂದು ಅಧಿಕಾರಿಯ ಬಗ್ಗೆ ಶಾಸಕ ಸುಶಾಂತ್ ಚೌಧರಿ ಹೇಳಿದ್ದಾರೆ. ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಅಧಿಕಾರಿ ತನ್ನ ವರ್ತನೆ ಬಗ್ಗೆ ಕ್ಷಮೆ ಕೇಳಿದ್ದು ತಾನು ಕರ್ತವ್ಯ ಮಾಡಿದ್ದೇನಷ್ಟೇ ಎಂದಿದ್ದಾರೆ.

ಸ್ಥಳೀಯ ಪೊಲೀಸರು ಮದುವೆ ಆಯೋಜಕರಿಂದ ಹಣ ಪಡೆದು ಈ ರೀತಿಯ ಸಮಾರಂಭಕ್ಕೆ ಅವಕಾಶ ನೀಡಿದ್ದಾರೆಂದು ಆರೋಪ ಕೇಳಿಬಂದಿದ್ದು ಜಿಲ್ಲಾಧಿಕಾರಿ ಸ್ಥಳೀಯ ಠಾಣಾಧಿಕಾರಿಯನ್ನು ಸಸ್ಪೆಂಡ್ ಮಾಡಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm