ಬ್ರೇಕಿಂಗ್ ನ್ಯೂಸ್
28-04-21 01:03 pm Headline Karnataka News Network ದೇಶ - ವಿದೇಶ
ಅಗರ್ತಲಾ, ಎ.28: ಕೋವಿಡ್ ನಿಯಮ ಉಲ್ಲಂಘಿಸಿ ಅದ್ದೂರಿ ಮದುವೆ ಸಮಾರಂಭ ನಡೆಸುತ್ತಿದ್ದ ವೇಳೆ ಜಿಲ್ಲಾಧಿಕಾರಿಯೇ ಸ್ವತಃ ರೈಡ್ ಮಾಡಿ, ವರ ಸೇರಿದಂತೆ ಸೇರಿದ್ದ ಜನರನ್ನು ಬಂಧಿಸಲು ಆದೇಶ ಮಾಡಿದ ಘಟನೆಯ ವಿಡಿಯೋ ವೈರಲ್ ಆಗಿದ್ದು ಅಧಿಕಾರಿಯ ದರ್ಪದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.
ತ್ರಿಪುರಾದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ರಾತ್ರಿ 10ರಿಂದ ಬೆಳಗ್ಗೆ 5 ರ ವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಮದುವೆಗಳಿಗೆ ನೂರು ಜನಕ್ಕೆ ಸೀಮಿತಗೊಳಿಸಿ ಸಮಾರಂಭ ನಡೆಸುವಂತೆ ಸೂಚಿಸಲಾಗಿದೆ.

ಈ ನಡುವೆ, ಪಶ್ಚಿಮ ತ್ರಿಪುರಾದಲ್ಲಿ ರಾತ್ರಿ ಹತ್ತು ಗಂಟೆ ನಂತರವೂ ಮದುವೆ ಸಮಾರಂಭ ಏರ್ಪಡಿಸಿದ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಶೈಲೇಶ್ ಕುಮಾರ್ ಯಾದವ್ ಸಮಾರಂಭ ನಡೆಯುತ್ತಿದ್ದ ವೇಳೆ ದಾಳಿ ನಡೆಸಿದ್ದಾರೆ. ಮದುವೆ ಹಾಲ್ ಗೆ ಪೊಲೀಸರ ಜೊತೆ ನುಗ್ಗಿದ ಜಿಲ್ಲಾಧಿಕಾರಿ, ಸಮಾರಂಭದಲ್ಲಿ ಸೇರಿದ್ದ ಅತಿಥಿಗಳನ್ನು ದಬಾಯಿಸಿ ಹೊರಗೆ ಕಳಿಸಿದ್ದಾರೆ. ಈ ವೇಳೆ, ಅತಿಥಿಗಳು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದ್ದು ಕೂಡಲೇ ಅಲ್ಲಿಂದ ಜಾಗ ಖಾಲಿ ಮಾಡುವಂತೆ ಅಧಿಕಾರಿ ಸೂಚಿಸಿದ್ದಾರೆ.
ಮದುವೆ ಗಂಡು ಸೇರಿದಂತೆ ಜೊತೆಗಿದ್ದ ಸಂಬಂಧಿಕರನ್ನು ಜಿಲ್ಲಾಧಿಕಾರಿಯೇ ಕುತ್ತಿಗೆ ಕೈಹಾಕಿ ದೂಡಿದ್ದು ಪೊಲೀಸರಲ್ಲಿ ಅರೆಸ್ಟ್ ಮಾಡುವಂತೆ ಹೇಳಿದ್ದಾರೆ. ಮದುವೆ ನಡೆಸಲು ಅನುಮತಿ ಪಡೆದಿದ್ದೇವೆ ಎಂದು ವರನ ಕಡೆಯವರು ಹೇಳಿದರೂ, ರಾತ್ರಿ ಹತ್ತರ ವರೆಗೆ ಮಾತ್ರ ಅನುಮತಿ ಇರುವುದು. ಆನಂತರವೂ ನೀವು ಇಷ್ಟು ಜನರನ್ನು ಸೇರಿಸಿದ್ದೀರಿ. ಕೋವಿಡ್ ರೂಲ್ ಮತ್ತು 144 ಸೆಕ್ಷನ್ ಉಲ್ಲಂಘಿಸಿದ್ದಕ್ಕೆ ಇವರನ್ನೆಲ್ಲ ಬಂಧಿಸಿ ಎನ್ನುತ್ತಲೇ ದರ್ಪದಿಂದ ನಡೆದುಕೊಂಡಿದ್ದಾರೆ.

ಪೊಲೀಸರು 19 ಮಹಿಳೆಯರು ಸೇರಿದಂತೆ 31 ಮಂದಿಯನ್ನು ಬಂಧಿಸಿದ್ದಾರೆ. " ಇವರೆಲ್ಲ ಒಳ್ಳೆ ಎಜುಕೇಟೆಡ್ ಮಂದಿ. ಕೋವಿಡ್ ಸೋಂಕು ಹೆಚ್ಚುತ್ತಿದ್ದರೂ, ನಿಯಮ ಪಾಲಿಸುತ್ತಿಲ್ಲ. ಇದ್ರ ನಡುವೆ ಸರಕಾರ ಏನೂ ಮಾಡಲ್ಲ ಎಂದು ಜನರು ಆರೋಪ ಮಾಡುತ್ತಾರೆ. ಆದರೆ ಸೆಕ್ಷನ್ ಹಾಕಿದ್ದರೂ, ಅದನ್ನು ಪಾಲನೆ ಮಾಡದೆ ಸೋಂಕು ಹೆಚ್ಚಲು ಕಾರಣವಾಗುತ್ತಿದ್ದಾರೆ. ವೆಸ್ಟ್ ಅಗರ್ತಲಾ ಪೊಲೀಸ್ ಠಾಣೆಯ ಠಾಣಾಧಿಕಾರಿಯನ್ನು ಸಸ್ಪೆಂಡ್ ಮಾಡ್ತೀನಿ ಎಂದು ವಿಡಿಯೋದಲ್ಲಿ ಜಿಲ್ಲಾಧಿಕಾರಿ ಶೈಲೇಶ್ ಯಾದವ್ ಹೇಳಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಅಧಿಕಾರಿಯ ವರ್ತನೆ ಬಗ್ಗೆ ಆಕ್ರೋಶ, ಟೀಕೆ ಕೇಳಿಬಂದಿದೆ. ಸ್ಥಳೀಯ ಬಿಜೆಪಿ ಶಾಸಕ ಕೂಡ ಅಧಿಕಾರಿಯ ವರ್ತನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಅಲ್ಲಿ ಸೇರಿದ್ದ ಅತಿಥಿಗಳಿಗೆ ಕಿರುಕುಳ ಕೊಟ್ಟಿದ್ದಾರೆ. ಅರ್ಚಕರನ್ನು ದೂಡಿದ್ದಾರೆ. ವರನ ಕುತ್ತಿಗೆ ಹಿಡಿದು ತಳ್ಳಿದ್ದಾರೆ. ಈ ಪರಿ ದರ್ಪ ತೋರಬೇಕಿತ್ತೇ ಎಂದು ಅಧಿಕಾರಿಯ ಬಗ್ಗೆ ಶಾಸಕ ಸುಶಾಂತ್ ಚೌಧರಿ ಹೇಳಿದ್ದಾರೆ. ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಅಧಿಕಾರಿ ತನ್ನ ವರ್ತನೆ ಬಗ್ಗೆ ಕ್ಷಮೆ ಕೇಳಿದ್ದು ತಾನು ಕರ್ತವ್ಯ ಮಾಡಿದ್ದೇನಷ್ಟೇ ಎಂದಿದ್ದಾರೆ.

ಸ್ಥಳೀಯ ಪೊಲೀಸರು ಮದುವೆ ಆಯೋಜಕರಿಂದ ಹಣ ಪಡೆದು ಈ ರೀತಿಯ ಸಮಾರಂಭಕ್ಕೆ ಅವಕಾಶ ನೀಡಿದ್ದಾರೆಂದು ಆರೋಪ ಕೇಳಿಬಂದಿದ್ದು ಜಿಲ್ಲಾಧಿಕಾರಿ ಸ್ಥಳೀಯ ಠಾಣಾಧಿಕಾರಿಯನ್ನು ಸಸ್ಪೆಂಡ್ ಮಾಡಿದ್ದಾರೆ.
20-03-26 12:02 pm
HK News Staffer
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm