ಬ್ರೇಕಿಂಗ್ ನ್ಯೂಸ್
29-04-21 02:59 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.29: ಭಾರತದಲ್ಲಿ ಕೋವಿಡ್ ಸೋಂಕಿನ ಎರಡನೇ ಅಲೆ ತೀವ್ರ ಗತಿಯಲ್ಲಿ ಹರಡುತ್ತಿದ್ದು ಕಳೆದ 24 ಗಂಟೆಗಳಲ್ಲಿ ದಾಖಲೆ ಎಂಬಂತೆ 3.80 ಲಕ್ಷ ಮಂದಿಗೆ ಸೋಂಕು ತಗಲಿದೆ.
ಕಳೆದ ಒಂದು ವಾರದಲ್ಲಿ ಪ್ರತಿ ದಿನವೂ ಮೂರು ಲಕ್ಷಕ್ಕಿಂತ ಹೆಚ್ಚು ಹೊಸ ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿದೆ. ಎ.22ರಂದು 3,14,835 ಹೊಸ ಪ್ರಕರಣಗಳು ಪತ್ತೆಯಾಗಿದ್ದವು. ಸತತ ಒಂದು ವಾರದಲ್ಲಿ ದಿನವೂ ಮೂರು ಲಕ್ಷಕ್ಕಿಂತ ಹೆಚ್ಚಿನ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಈಗ ದೇಶದಲ್ಲೇ ಅತಿ ಹೆಚ್ಚು ಎಂದರೆ, ದಿನವೊಂದಲ್ಲಿ 3.80 ಲಕ್ಷ ಮಂದಿಗೆ ಸೋಂಕು ಆಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಗುರುವಾರ ಬೆಳಗ್ಗಿನ ವರೆಗೆ 24 ಗಂಟೆಗಳ ಮಾಹಿತಿ ನೀಡಿದ ಸಚಿವಾಲಯ, ಹೊಸ ಪ್ರಕರಣಗಳ ಸಂಖ್ಯೆ 3,79,257 ಎಂದು ನಮೂದಿಸಿತ್ತು. ಇದೇ ವೇಳೆ, 3645 ಮಂದಿ 24 ಗಂಟೆಯಲ್ಲಿ ಸಾವು ಕಂಡಿದ್ದಾರೆಂದು ಮಾಹಿತಿ ನೀಡಿದೆ. ಈವರೆಗೆ ದೇಶದಲ್ಲಿ ಕೊರೊನಾ ಸೋಂಕಿನಿಂದ 2.40 ಲಕ್ಷ ಮಂದಿ ಸಾವಿಗೀಡಾಗಿದ್ದಾರೆ. ಸೋಂಕಿನಿಂದ ಅತಿ ಹೆಚ್ಚು ಸಾವು ದೇಶಗಳಲ್ಲಿ ಭಾರತಕ್ಕೆ ನಾಲ್ಕನೇ ಸ್ಥಾನ ಇದೆ. ಅಮೆರಿಕ, ಬ್ರೆಝಿಲ್, ಮೆಕ್ಸಿಕೋ ಮೊದಲ ಮೂರು ಸ್ಥಾನಗಳಲ್ಲಿದೆ.
ದೇಶದಲ್ಲಿ ಅತಿ ಹೆಚ್ಚು ಸೋಂಕು ಪೀಡಿತರು ಕಾಣಿಸಿಕೊಳ್ಳುತ್ತಿರುವುದು ಮಹಾರಾಷ್ಟ್ರ, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ. ಒಟ್ಟು ಸೋಂಕಿತರ 78 ಶೇ. ಮಂದಿ ಈ ಮೂರು ರಾಜ್ಯಗಳ ಜನರು ಇದ್ದಾರೆ. ಮಹಾರಾಷ್ಟ್ರದಲ್ಲಿ ದಿನದಲ್ಲಿ 66,358 ಮಂದಿಗೆ ಸೋಂಕು ಕಾಣಿಸಿದ್ದರೆ, ಉತ್ತರ ಪ್ರದೇಶದಲ್ಲಿ 32,921 ಮತ್ತು ಕೇರಳದಲ್ಲಿ 32,819 ಮಂದಿಗೆ ಸೋಂಕು ಕಾಣಿಸಿಕೊಂಡಿದೆ.
India's Daily Covid-19 cases saw yet another massive spike yesterday. A total of 3,79,257 new cases were registered in the last 24 hours. Ten states including Maharashtra, Uttar Pradesh, Delhi, Karnataka, Kerala, Chhattisgarh, West Bengal, Tamil Nadu, Andhra Pradesh and Rajasthan report 72.20% of the new cases.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm