ಬ್ರೇಕಿಂಗ್ ನ್ಯೂಸ್
26-08-20 12:20 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್.26: ಭಾರತದಲ್ಲಿ ಒಟ್ಟು 3234475 ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಪೈಕಿ 24,67,759 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 7,07,267 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಕೊರೊನಾವೈರಸ್ ಸೋಂಕಿನ ಅಟ್ಟಹಾಸವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗುಣಮುಖ ಪ್ರಕರಣಗಳು ಹೆಚ್ಚಾಗುವುತ್ತಿರುವುದು ಒಂದು ಕಡೆಯಾದರೆ ಸಾವಿನ ಸಂಖ್ಯೆಯಲ್ಲೂ ಏರಿಕೆ ಕಂಡು ಬರುತ್ತಿದೆ.
ಕಳೆದ 24 ಗಂಟೆಗಳಲ್ಲೇ ಮಹಾಮಾರಿಗೆ 1059 ಜನರು ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಕೊರೊನಾವೈರಸ್ ಸೋಂಕಿಗೆ ಬಲಿಯಾದವರ ಸಂಖ್ಯೆಯು 59449ಕ್ಕೆ ಏರಿಕೆಯಾಗಿದೆ. ಒಂದೇ ದಿನ 67151 ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 3234475ಕ್ಕೆ ಏರಿಕೆಯಾಗಿದೆ.
ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವುದಕ್ಕೆ ತಪಾಸಣೆ ವೇಗವನ್ನು ಹೆಚ್ಚಿಸುವುದೇ ಮದ್ದು ಎನ್ನಲಾಗುತ್ತಿದೆ. ಈ ಹಿನ್ನೆಲೆ ದೇಶದಲ್ಲಿ ಕೊರೊನಾವೈರಸ್ ಸೋಂಕಿನ ತಪಾಸಣೆ ವೇಗವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಇದುವರೆಗೂ 3,76,51,512 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 8,23,992 ಜನರ ರಕ್ತ ಮತ್ತು ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಕೊವಿಡ್-19 ತಪಾಸಣೆಗೊಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ. ವಿಶ್ವದಲ್ಲಿ 2,40,58,358 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ಇದುವರೆಗೂ ಜಗತ್ತಿನಲ್ಲಿ 8,23,510 ಜನರು ಪ್ರಾಣ ಬಿಟ್ಟಿದ್ದಾರೆ. ಇದುವರೆಗೂ 1,66,08,068 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಅಂಕಿ-ಅಂಶಗಳು ಹೇಳುತ್ತಿವೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm