ಬ್ರೇಕಿಂಗ್ ನ್ಯೂಸ್
30-04-21 11:46 am Headline Karnataka News Network ದೇಶ - ವಿದೇಶ
ಛತ್ತೀಸ್ಗಡ: ಎ 30: ಆರೋಗ್ಯ ಕೇಂದ್ರದಲ್ಲಿ ವೆಂಟಿಲೇಟರ್ ಬೆಡ್ ಸಿಗದೆ 8 ತಿಂಗಳ ಗರ್ಭಿಣಿಯಾಗಿದ್ದ ನರ್ಸ್ ಮೃತಪಟ್ಟಿದ್ದಾರೆ.
ಜಿಲ್ಲೆಯ ಪರ್ಪೋಡಿ ಸರ್ಕಾರಿ ಆಸ್ಪತ್ರೆಯಲ್ಲಿ ನೇಮಕಗೊಂಡ ಆರೋಗ್ಯ ಕಾರ್ಯಕರ್ತೆ ದುಲಾರಿ ಧೀಮರ್ ಎಂಬುವರಿಗೆ 29 ವರ್ಷ ವಯಸ್ಸು. ಇವರು ಕೊರೊನಾ ಸೋಂಕಿಗೆ ಒಳಗಾದ ನಂತರ ಏಪ್ರಿಲ್ 26ರಂದು ಏಮ್ಸ್ಗೆ ದಾಖಲಿಸಲಾಯಿತು. 2 ವರ್ಷಗಳಿಂದ ಸಾಜಾ ಬ್ಲಾಕ್ನ ಪರ್ಪೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾದಿಯಾಗಿ ಕೆಲಸ ಮಾಡುತ್ತಿದ್ದರು. ಇವರಿಗೆ 3 ವರ್ಷದ ಮಗಳು ಸಹ ಇದ್ದಾಳೆ. 8 ತಿಂಗಳ ಗರ್ಭಿಣಿಯಾದ ನಂತರ ಆಕೆಗೆ ರಜೆ ನೀಡಲಿಲ್ಲ. ದುರದೃಷ್ಟ ಎಂಬಂತೆ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ.

ಸೋಂಕಿಗೆ ತುತ್ತಾದ ಬಳಿಕ ಇವರನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಯಿತು. ಈ ವೇಳೆ ಬೆಮೆತರಾ ಮತ್ತು ದುರ್ಗ್ನ ಯಾವುದೇ ವೈದ್ಯಕೀಯ ಮಳಿಗೆಗಳಲ್ಲಿ ರೆಮ್ಡಿಸಿವಿರ್ ಚುಚ್ಚುಮದ್ದು ಸಿಗಲಿಲ್ಲ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. 4 ಸಾವಿರ ರೂಪಾಯಿಗಳ ಎರಡು ಚುಚ್ಚುಮದ್ದಿಗೆ 15 ಸಾವಿರ ರೂ. ನೀಡಬೇಕಾಗಿತ್ತು. ಚುಚ್ಚುಮದ್ದಿನ ನಂತರ 2 ದಿನಗಳ ಕಾಲ ದುಲಾರಿ ಚೆನ್ನಾಗಿಯೇ ಇದ್ದರು. ಆದರೆ ಇದ್ದಕ್ಕಿದ್ದಂತೆ ಅವರ ಆರೋಗ್ಯವು ಕ್ಷೀಣಿಸಲು ಪ್ರಾರಂಭಿಸಿತು. ನಂತರ ರಾಯ್ಪುರ ಏಮ್ಸ್ಗೆ ರೆಫರ್ ಮಾಡಲಾಗಿತ್ತು. ಅಲ್ಲಿ ವೆಂಟಿಲೇಟರ್ ಇರಲಿಲ್ಲ. 2 ದಿನಗಳ ಕಾಲ ಕಾದ ನಂತರ ಹಾಸಿಗೆ ಸಿಕ್ಕಿತು. ಆದರೆ ವೆಂಟಿಲೇಟರ್ ಸಿಗಲಿಲ್ಲ. ಇದರಿಂದಾಗಿ ದುಲಾರಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕೊರೊನಾಗೆ 28 ದಿನಗಳಲ್ಲಿ ಬೆಮೆತರಾದಲ್ಲಿ 128 ಜನ ಬಲಿಯಾಗಿದ್ದಾರೆ.
Death of a pregnant nurse from Corona in Chhattisgarh. There was an 8-month-old baby in the stomach, yet duty was put in the treatment of Corona patients; No Remedisvir found or ventilator when infected
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm