ಬ್ರೇಕಿಂಗ್ ನ್ಯೂಸ್
30-04-21 11:46 am Headline Karnataka News Network ದೇಶ - ವಿದೇಶ
ಛತ್ತೀಸ್ಗಡ: ಎ 30: ಆರೋಗ್ಯ ಕೇಂದ್ರದಲ್ಲಿ ವೆಂಟಿಲೇಟರ್ ಬೆಡ್ ಸಿಗದೆ 8 ತಿಂಗಳ ಗರ್ಭಿಣಿಯಾಗಿದ್ದ ನರ್ಸ್ ಮೃತಪಟ್ಟಿದ್ದಾರೆ.
ಜಿಲ್ಲೆಯ ಪರ್ಪೋಡಿ ಸರ್ಕಾರಿ ಆಸ್ಪತ್ರೆಯಲ್ಲಿ ನೇಮಕಗೊಂಡ ಆರೋಗ್ಯ ಕಾರ್ಯಕರ್ತೆ ದುಲಾರಿ ಧೀಮರ್ ಎಂಬುವರಿಗೆ 29 ವರ್ಷ ವಯಸ್ಸು. ಇವರು ಕೊರೊನಾ ಸೋಂಕಿಗೆ ಒಳಗಾದ ನಂತರ ಏಪ್ರಿಲ್ 26ರಂದು ಏಮ್ಸ್ಗೆ ದಾಖಲಿಸಲಾಯಿತು. 2 ವರ್ಷಗಳಿಂದ ಸಾಜಾ ಬ್ಲಾಕ್ನ ಪರ್ಪೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾದಿಯಾಗಿ ಕೆಲಸ ಮಾಡುತ್ತಿದ್ದರು. ಇವರಿಗೆ 3 ವರ್ಷದ ಮಗಳು ಸಹ ಇದ್ದಾಳೆ. 8 ತಿಂಗಳ ಗರ್ಭಿಣಿಯಾದ ನಂತರ ಆಕೆಗೆ ರಜೆ ನೀಡಲಿಲ್ಲ. ದುರದೃಷ್ಟ ಎಂಬಂತೆ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ.

ಸೋಂಕಿಗೆ ತುತ್ತಾದ ಬಳಿಕ ಇವರನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಯಿತು. ಈ ವೇಳೆ ಬೆಮೆತರಾ ಮತ್ತು ದುರ್ಗ್ನ ಯಾವುದೇ ವೈದ್ಯಕೀಯ ಮಳಿಗೆಗಳಲ್ಲಿ ರೆಮ್ಡಿಸಿವಿರ್ ಚುಚ್ಚುಮದ್ದು ಸಿಗಲಿಲ್ಲ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. 4 ಸಾವಿರ ರೂಪಾಯಿಗಳ ಎರಡು ಚುಚ್ಚುಮದ್ದಿಗೆ 15 ಸಾವಿರ ರೂ. ನೀಡಬೇಕಾಗಿತ್ತು. ಚುಚ್ಚುಮದ್ದಿನ ನಂತರ 2 ದಿನಗಳ ಕಾಲ ದುಲಾರಿ ಚೆನ್ನಾಗಿಯೇ ಇದ್ದರು. ಆದರೆ ಇದ್ದಕ್ಕಿದ್ದಂತೆ ಅವರ ಆರೋಗ್ಯವು ಕ್ಷೀಣಿಸಲು ಪ್ರಾರಂಭಿಸಿತು. ನಂತರ ರಾಯ್ಪುರ ಏಮ್ಸ್ಗೆ ರೆಫರ್ ಮಾಡಲಾಗಿತ್ತು. ಅಲ್ಲಿ ವೆಂಟಿಲೇಟರ್ ಇರಲಿಲ್ಲ. 2 ದಿನಗಳ ಕಾಲ ಕಾದ ನಂತರ ಹಾಸಿಗೆ ಸಿಕ್ಕಿತು. ಆದರೆ ವೆಂಟಿಲೇಟರ್ ಸಿಗಲಿಲ್ಲ. ಇದರಿಂದಾಗಿ ದುಲಾರಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕೊರೊನಾಗೆ 28 ದಿನಗಳಲ್ಲಿ ಬೆಮೆತರಾದಲ್ಲಿ 128 ಜನ ಬಲಿಯಾಗಿದ್ದಾರೆ.
Death of a pregnant nurse from Corona in Chhattisgarh. There was an 8-month-old baby in the stomach, yet duty was put in the treatment of Corona patients; No Remedisvir found or ventilator when infected
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm