ಬ್ರೇಕಿಂಗ್ ನ್ಯೂಸ್
30-04-21 11:46 am Headline Karnataka News Network ದೇಶ - ವಿದೇಶ
ಛತ್ತೀಸ್ಗಡ: ಎ 30: ಆರೋಗ್ಯ ಕೇಂದ್ರದಲ್ಲಿ ವೆಂಟಿಲೇಟರ್ ಬೆಡ್ ಸಿಗದೆ 8 ತಿಂಗಳ ಗರ್ಭಿಣಿಯಾಗಿದ್ದ ನರ್ಸ್ ಮೃತಪಟ್ಟಿದ್ದಾರೆ.
ಜಿಲ್ಲೆಯ ಪರ್ಪೋಡಿ ಸರ್ಕಾರಿ ಆಸ್ಪತ್ರೆಯಲ್ಲಿ ನೇಮಕಗೊಂಡ ಆರೋಗ್ಯ ಕಾರ್ಯಕರ್ತೆ ದುಲಾರಿ ಧೀಮರ್ ಎಂಬುವರಿಗೆ 29 ವರ್ಷ ವಯಸ್ಸು. ಇವರು ಕೊರೊನಾ ಸೋಂಕಿಗೆ ಒಳಗಾದ ನಂತರ ಏಪ್ರಿಲ್ 26ರಂದು ಏಮ್ಸ್ಗೆ ದಾಖಲಿಸಲಾಯಿತು. 2 ವರ್ಷಗಳಿಂದ ಸಾಜಾ ಬ್ಲಾಕ್ನ ಪರ್ಪೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾದಿಯಾಗಿ ಕೆಲಸ ಮಾಡುತ್ತಿದ್ದರು. ಇವರಿಗೆ 3 ವರ್ಷದ ಮಗಳು ಸಹ ಇದ್ದಾಳೆ. 8 ತಿಂಗಳ ಗರ್ಭಿಣಿಯಾದ ನಂತರ ಆಕೆಗೆ ರಜೆ ನೀಡಲಿಲ್ಲ. ದುರದೃಷ್ಟ ಎಂಬಂತೆ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ.
ಸೋಂಕಿಗೆ ತುತ್ತಾದ ಬಳಿಕ ಇವರನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಯಿತು. ಈ ವೇಳೆ ಬೆಮೆತರಾ ಮತ್ತು ದುರ್ಗ್ನ ಯಾವುದೇ ವೈದ್ಯಕೀಯ ಮಳಿಗೆಗಳಲ್ಲಿ ರೆಮ್ಡಿಸಿವಿರ್ ಚುಚ್ಚುಮದ್ದು ಸಿಗಲಿಲ್ಲ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. 4 ಸಾವಿರ ರೂಪಾಯಿಗಳ ಎರಡು ಚುಚ್ಚುಮದ್ದಿಗೆ 15 ಸಾವಿರ ರೂ. ನೀಡಬೇಕಾಗಿತ್ತು. ಚುಚ್ಚುಮದ್ದಿನ ನಂತರ 2 ದಿನಗಳ ಕಾಲ ದುಲಾರಿ ಚೆನ್ನಾಗಿಯೇ ಇದ್ದರು. ಆದರೆ ಇದ್ದಕ್ಕಿದ್ದಂತೆ ಅವರ ಆರೋಗ್ಯವು ಕ್ಷೀಣಿಸಲು ಪ್ರಾರಂಭಿಸಿತು. ನಂತರ ರಾಯ್ಪುರ ಏಮ್ಸ್ಗೆ ರೆಫರ್ ಮಾಡಲಾಗಿತ್ತು. ಅಲ್ಲಿ ವೆಂಟಿಲೇಟರ್ ಇರಲಿಲ್ಲ. 2 ದಿನಗಳ ಕಾಲ ಕಾದ ನಂತರ ಹಾಸಿಗೆ ಸಿಕ್ಕಿತು. ಆದರೆ ವೆಂಟಿಲೇಟರ್ ಸಿಗಲಿಲ್ಲ. ಇದರಿಂದಾಗಿ ದುಲಾರಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕೊರೊನಾಗೆ 28 ದಿನಗಳಲ್ಲಿ ಬೆಮೆತರಾದಲ್ಲಿ 128 ಜನ ಬಲಿಯಾಗಿದ್ದಾರೆ.
Death of a pregnant nurse from Corona in Chhattisgarh. There was an 8-month-old baby in the stomach, yet duty was put in the treatment of Corona patients; No Remedisvir found or ventilator when infected
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 03:07 pm
Mangalore Correspondent
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm