ಬ್ರೇಕಿಂಗ್ ನ್ಯೂಸ್
30-04-21 01:50 pm Headline Karnataka News Network ದೇಶ - ವಿದೇಶ
ಇಸ್ರೇಲ್, ಎ 30: ಯಹೂದಿಯರ ಧಾರ್ಮಿಕ ಸ್ಥಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 44 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಉತ್ತರ ಇಸ್ರೇಲ್ ನಲ್ಲಿ ನಡೆದಿದ್ದು, ಭಾರೀ ಜನಸ್ತೋಮದಿಂದಾಗಿ ಗಾಯಗೊಂಡವರನ್ನು ರಕ್ಷಿಸಲು ರಕ್ಷಣಾ ತಂಡಗಳು ಹರಸಾಹಸಪಡುತ್ತಿರುವುದಾಗಿ ವರದಿ ತಿಳಿಸಿದೆ.
ಎರಡನೇ ಶತಮಾನದ ಟಾಲ್ಮುಡಿಕ್ ಸಂತ ರಬ್ಬಿ ಶಿಮೊನ್ ಬಾರ್ ಯೋಚೈ ಅವರ ಸಮಾಧಿ ಸ್ಥಳವಾದ ಮೆರಾನ್ನಲ್ಲಿ ಸಂಪ್ರದಾಯವಾದಿ ಯಹೂದಿಗಳ ಜನಸ್ತೋಮ ಸೇರಿದ ವೇಳೆ ಈ ಕಾಲ್ತುಳಿತ ಸಂಭವಿಸಿದೆ ಎಂದು ವರದಿ ವಿವರಿಸಿದೆ.
ಕಳೆದ ವರ್ಷ ಕೋವಿಡ್ ಹಿನ್ನೆಲೆಯಲ್ಲಿ ನಿರ್ಬಂಧ ವಿಧಿಸಿದ್ದರಿಂದ ಸಾಮೂಹಿಕ ಧಾರ್ಮಿಕ ಕಾರ್ಯಕ್ರಮ ನಡೆದಿರಲಿಲ್ಲವಾಗಿತ್ತು. ಈ ವರ್ಷ ಯಾತ್ರಾರ್ಥಿಗಳು ಅಧಿಕ ಸಂಖ್ಯೆಯಲ್ಲಿ ಆಗಮಿಸಿ ಸಂಭ್ರಮಾಚರಣೆಯನ್ನು ಯಶಸ್ವಿಗೊಳಿಸಲು ಶ್ರಮಿಸಿದ ಸಂದರ್ಭದಲ್ಲಿ ಈ ದುರಂತ ನಡೆದಿದೆ ಎಂದು ವರದಿ ತಿಳಿಸಿದೆ.
ಈ ಬಾರಿಯೂ ಕೋವಿಡ್ ಭೀತಿಯ ನಡುವೆಯೂ ಸಾವಿರಾರು ಸಂಖ್ಯೆಯಲ್ಲಿ ಯಹೂದಿಗಳು ಸೇರಿದ್ದರು. ಪ್ರಾಥಮಿಕ ಮಾಹಿತಿ ಪ್ರಕಾರ, ಆರೋಗ್ಯ ಅಧಿಕಾರಿಗಳು ವಿಧಿಸಿದ್ದ ಕೋವಿಡ್ ನಿಯಮ ಉಲ್ಲಂಘಿಸಿ ಜನಸಮೂಹ ನೆರೆದಿದ್ದು, ಈ ವೇಳೆ ಕುಳಿತುಕೊಳ್ಳಲು ನಿರ್ಮಿಸಿದ್ದ ಸ್ಟೇಡಿಯಂ ಕುಸಿದು ಬಿದ್ದಿದ್ದರಿಂದ ಗಾಬರಿಗೊಂಡ ಜನರು ದಿಕ್ಕಾಪಾಲಾಗಿ ಓಡಲು ಆರಂಭಿಸಿದ್ದು, ಕಾಲ್ತುಳಿತ ಸಂಭವಿಸಲು ಕಾರಣವಾಗಿದೆ ಎಂದು ಹೇಳಿದೆ.
ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತಾನ್ಯಾಹು, 'ಭೀಕರ ದುರಂತ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
A massive stampede at a densely packed Jewish pilgrimage site killed at least 44 people in northern Israel on Friday, with rescue workers facing chaotic crowds while trying to evacuate the injured.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 03:07 pm
Mangalore Correspondent
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm