ಬ್ರೇಕಿಂಗ್ ನ್ಯೂಸ್
02-05-21 11:53 am Headline Karnataka News Network ದೇಶ - ವಿದೇಶ
Photo credits : Vincent Pulickal, EPS
ಕಾಸರಗೋಡು, ಮೇ 2: ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದು ಯಾರು ಗದ್ದುಗೆ ಹಿಡಿಯುತ್ತಾರೆಂದು ಇಂದೇ ನಿರ್ಣಯ ಆಗಲಿದೆ. ಈ ನಡುವೆ, ಕೇರಳದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿರುವ ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಸ್ಪಷ್ಟ ಮುನ್ನಡೆ ಕಾಯ್ದುಕೊಂಡಿದ್ದಾರೆ.
11 ಕ್ಕೆ ದೊರೆತ ಫಲಿತಾಂಶದ ಪ್ರಕಾರ ಸುರೇಂದ್ರನ್ ಹತ್ತು ಸುತ್ತುಗಳ ಬಳಿಕ 1700 ಮತಗಳಿಂದ ಮುನ್ನಡೆ ಗಳಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ಮಂಜೇಶ್ವರದಲ್ಲಿ ಲೀಗ್ ಅಭ್ಯರ್ಥಿ ಎ.ಕೆ.ಎಂ. ಅಶ್ರಫ್ ಮತ್ತು ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ನಡುವೆ ನಿಕಟ ಸ್ಪರ್ಧೆ ಏರ್ಪಟ್ಟಿದೆ. ಕಳೆದ ಎರಡು ಅವಧಿಯಲ್ಲಿ ಲೀಗ್ ಅಭ್ಯರ್ಥಿ ಮಂಜೇಶ್ವರ ಕ್ಷೇತ್ರದಲ್ಲಿ ಗೆಲುವು ಕಂಡಿದ್ದರು.
2016ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಕೇವಲ 87 ಮತಗಳಿಂದ ಸೋತಿದ್ದರು. ಲೀಗ್ ಅಭ್ಯರ್ಥಿ ಅಬ್ದುಲ್ ರಜಾಕ್ ಗೆಲುವು ಕಂಡಿದ್ದರು. ಆದರೆ, ರಜಾಕ್ ನಿಧನದಿಂದ 2018 ರಲ್ಲಿ ಉಪ ಚುನಾವಣೆ ನಡೆದ ವೇಳೆ ಬಿಜೆಪಿ ಈ ಕ್ಷೇತ್ರದಲ್ಲಿ ಸುಮಾರು ಐದು ಸಾವಿರ ಮತಗಳಿಂದ ಸೋಲು ಕಂಡಿತ್ತು. ಆಗ ಬಿಜೆಪಿಯಲ್ಲಿ ಕುಂಟಾರು ರವೀಶ ತಂತ್ರಿ ಅಭ್ಯರ್ಥಿಯಾಗಿದ್ದರು.

ಬಿಜೆಪಿ ಈ ಬಾರಿ ಮತ್ತೆ ಸುರೇಂದ್ರನ್ ಅವರನ್ನು ಕಣಕ್ಕಿಳಿಸಿದ್ದು ಗೆಲುವು ಸಿಗಲೇಬೇಕೆಂದು ಭಾರೀ ಕಸರತ್ತು ನಡೆಸಿದೆ. ಲೀಗ್ ಅಭ್ಯರ್ಥಿ ಕುರಿತ ಅಸಮಾಧಾನ ಮತ್ತು ಒಳಜಗಳ ಬಿಜೆಪಿಗೆ ಈ ಬಾರಿ ಲಾಭವಾಗಬಹುದೆಂಬ ಲೆಕ್ಕಾಚಾರ ಕೆಲವರದ್ದು.
ಈ ನಡುವೆ, ಇಲ್ಲಿ ಸಿಪಿಎಂ ಅಭ್ಯರ್ಥಿ ರಮೇಶನ್ ಎಷ್ಟರ ಮಟ್ಟಿಗೆ ಮತಗಳನ್ನು ಗಳಿಸುತ್ತಾರೆ ಅದು ಕೂಡ ಬಿಜೆಪಿ ಗೆಲುವನ್ನು ನಿರ್ಧರಿಸುತ್ತದೆ ಎನ್ನಲಾಗಿತ್ತು. ಅಂತಿಮ ಕ್ಷಣದಲ್ಲಿ ಯಾರೇ ಗೆದ್ದರೂ ಈ ಬಾರಿ ಅತ್ಯಂತ ಕಡಿಮೆ ಮತಗಳಿಂದ ಎನ್ನುವ ಸಮೀಕ್ಷೆಯ ಸತ್ಯವಾಗುವ ಸಾಧ್ಯತೆಯಿದೆ.
Indian Union Muslim League (IUML)’s AKM Ashraf is facing competition from Bharatiya Janata Party leader (BJP) K Surendran and Left Democratic Front (LDF)’s VV Rameshan.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm