ಬ್ರೇಕಿಂಗ್ ನ್ಯೂಸ್
02-05-21 11:53 am Headline Karnataka News Network ದೇಶ - ವಿದೇಶ
Photo credits : Vincent Pulickal, EPS
ಕಾಸರಗೋಡು, ಮೇ 2: ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದು ಯಾರು ಗದ್ದುಗೆ ಹಿಡಿಯುತ್ತಾರೆಂದು ಇಂದೇ ನಿರ್ಣಯ ಆಗಲಿದೆ. ಈ ನಡುವೆ, ಕೇರಳದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿರುವ ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಸ್ಪಷ್ಟ ಮುನ್ನಡೆ ಕಾಯ್ದುಕೊಂಡಿದ್ದಾರೆ.
11 ಕ್ಕೆ ದೊರೆತ ಫಲಿತಾಂಶದ ಪ್ರಕಾರ ಸುರೇಂದ್ರನ್ ಹತ್ತು ಸುತ್ತುಗಳ ಬಳಿಕ 1700 ಮತಗಳಿಂದ ಮುನ್ನಡೆ ಗಳಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ಮಂಜೇಶ್ವರದಲ್ಲಿ ಲೀಗ್ ಅಭ್ಯರ್ಥಿ ಎ.ಕೆ.ಎಂ. ಅಶ್ರಫ್ ಮತ್ತು ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ನಡುವೆ ನಿಕಟ ಸ್ಪರ್ಧೆ ಏರ್ಪಟ್ಟಿದೆ. ಕಳೆದ ಎರಡು ಅವಧಿಯಲ್ಲಿ ಲೀಗ್ ಅಭ್ಯರ್ಥಿ ಮಂಜೇಶ್ವರ ಕ್ಷೇತ್ರದಲ್ಲಿ ಗೆಲುವು ಕಂಡಿದ್ದರು.
2016ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಕೇವಲ 87 ಮತಗಳಿಂದ ಸೋತಿದ್ದರು. ಲೀಗ್ ಅಭ್ಯರ್ಥಿ ಅಬ್ದುಲ್ ರಜಾಕ್ ಗೆಲುವು ಕಂಡಿದ್ದರು. ಆದರೆ, ರಜಾಕ್ ನಿಧನದಿಂದ 2018 ರಲ್ಲಿ ಉಪ ಚುನಾವಣೆ ನಡೆದ ವೇಳೆ ಬಿಜೆಪಿ ಈ ಕ್ಷೇತ್ರದಲ್ಲಿ ಸುಮಾರು ಐದು ಸಾವಿರ ಮತಗಳಿಂದ ಸೋಲು ಕಂಡಿತ್ತು. ಆಗ ಬಿಜೆಪಿಯಲ್ಲಿ ಕುಂಟಾರು ರವೀಶ ತಂತ್ರಿ ಅಭ್ಯರ್ಥಿಯಾಗಿದ್ದರು.

ಬಿಜೆಪಿ ಈ ಬಾರಿ ಮತ್ತೆ ಸುರೇಂದ್ರನ್ ಅವರನ್ನು ಕಣಕ್ಕಿಳಿಸಿದ್ದು ಗೆಲುವು ಸಿಗಲೇಬೇಕೆಂದು ಭಾರೀ ಕಸರತ್ತು ನಡೆಸಿದೆ. ಲೀಗ್ ಅಭ್ಯರ್ಥಿ ಕುರಿತ ಅಸಮಾಧಾನ ಮತ್ತು ಒಳಜಗಳ ಬಿಜೆಪಿಗೆ ಈ ಬಾರಿ ಲಾಭವಾಗಬಹುದೆಂಬ ಲೆಕ್ಕಾಚಾರ ಕೆಲವರದ್ದು.
ಈ ನಡುವೆ, ಇಲ್ಲಿ ಸಿಪಿಎಂ ಅಭ್ಯರ್ಥಿ ರಮೇಶನ್ ಎಷ್ಟರ ಮಟ್ಟಿಗೆ ಮತಗಳನ್ನು ಗಳಿಸುತ್ತಾರೆ ಅದು ಕೂಡ ಬಿಜೆಪಿ ಗೆಲುವನ್ನು ನಿರ್ಧರಿಸುತ್ತದೆ ಎನ್ನಲಾಗಿತ್ತು. ಅಂತಿಮ ಕ್ಷಣದಲ್ಲಿ ಯಾರೇ ಗೆದ್ದರೂ ಈ ಬಾರಿ ಅತ್ಯಂತ ಕಡಿಮೆ ಮತಗಳಿಂದ ಎನ್ನುವ ಸಮೀಕ್ಷೆಯ ಸತ್ಯವಾಗುವ ಸಾಧ್ಯತೆಯಿದೆ.
Indian Union Muslim League (IUML)’s AKM Ashraf is facing competition from Bharatiya Janata Party leader (BJP) K Surendran and Left Democratic Front (LDF)’s VV Rameshan.
05-12-25 07:26 pm
HK News Desk
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm