ಬ್ರೇಕಿಂಗ್ ನ್ಯೂಸ್
02-05-21 01:09 pm Headline Karnataka News Network ದೇಶ - ವಿದೇಶ
Photo credits : NDTV
ಚೆನ್ನೈ,ಮೇ 2: ತಮಿಳುನಾಡು ವಿಧಾನಸಭಾ ಕ್ಷೇತ್ರದಲ್ಲಿ ಡಿಎಂಕೆ ನೇತೃತ್ವದ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. ಮತ ಎಣಿಕೆ ಆರಂಭವಾಗಿ ಮೂರು ಗಂಟೆ ಕಳೆದಾಗ ಡಿಎಂಕೆ 137 ಸೀಟುಗಳಲ್ಲಿ ಮುನ್ನಡೆ ಸಾಧಿಸಿದೆ.
ಅದೇ ವೇಳೆ ಆಡಳಿತರೂಢ ಎಐಎಡಿಎಂಕೆ 95 ಸೀಟುಗಳಲ್ಲಿ ಮುನ್ನಡೆ ಸಾಧಿಸಿದೆ. 234 ಸೀಟುಗಳಿರುವ ತಮಿಳುನಾಡು ವಿಧಾನಸಭೆಯಲ್ಲಿ ಸರ್ಕಾರ ರಚಿಸಬೇಕಾದರೆ ರಾಜಕೀಯ ಪಕ್ಷಗಳಿಗೆ 118 ಸೀಟುಗಳ ಅಗತ್ಯವಿದೆ. 2011ರ ವಿಧಾನಸಭಾ ಚುನಾವಣೆ ಗೆದ್ದಿದ್ದ ಎಐಎಡಿಎಂಕೆ ಈ ಬಾರಿಯೂ ಅಧಿಕಾರ ಮುಂದುವರಿಸುವ ನಿರೀಕ್ಷೆ ಹೊಂದಿದ್ದು, ಡಿಎಂಕೆ ಈ ಬಾರಿ ಗದ್ದುಗೆಗೇರುವ ಮಹತ್ವಾಕಾಂಕ್ಷೆಯೊಂದಿಗೆ ಚುನಾವಣೆ ಸ್ಪರ್ಧಿಸಿದೆ. ತಮಿಳುನಾಡಿನ ಹಿರಿಯ ರಾಜಕಾರಣಿಗಳಾದ ಎಂ.ಕರುಣಾನಿಧಿ ಮತ್ತು ಜೆ. ಜಯಲಲಿತಾ ಅವರ ಮರಣದ ನಂತರ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ.
ಎಐಎಡಿಎಂಕೆ ನೇತೃತ್ವದ ಎನ್ಡಿಎ ಮತ್ತು ಡಿಎಂಕೆ ನೇತೃತ್ವದ ಸೆಕ್ಯುಲರ್ ಪ್ರೊಗ್ರೆಸ್ಸಿವ್ ಅಲಯನ್ಸ್ ಶೇ 70-80 ಮತಗಳ ಬೆಂಬಲ ಹೊಂದಿದೆ. ಇನ್ನುಳಿದ ಮತಗಳು ಟಿಟಿವಿ ದಿನಕರನ್ ಅವರ ಅಮ್ಮ ಮಕ್ಕಳ್ ಮುನ್ನೇಟ್ರ ಕಳಗಂ, ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮಯ್ಯಂ ಪಕ್ಷಕ್ಕೆ ಸಿಗುವುದಾಗಿ ಅಂದಾಜಿಸಲಾಗಿದೆ. ಏಪ್ರಿಲ 6ರಂದು ನಡೆದ ಚುನಾವಣೆಯಲ್ಲಿ ಶೇ72. 81 ಮತದಾನವಾಗಿತ್ತು.
ಡಿಎಂಕೆ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಮತ ಎಣಿಕೆ ಪ್ರಕ್ರಿಯೆ ಮುಂದುವರಿಯುತ್ತಿದ್ದು ಆರಂಭಿಕ ಮತ ಎಣಿಕೆಯಲ್ಲಿ ಡಿಎಂಕೆ ಮುನ್ನಡೆ ಸಾಧಿಸಿದ ಸುದ್ದಿ ತಿಳಿದು ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.

ಐದು ಸೀಟುಗಳಲ್ಲಿ ಬಿಜೆಪಿ ಮುನ್ನಡೆ
ತಿರುನಲ್ವೇಲಿ, ಧಾರಾಪುರಂ , ಹಾರ್ಬರ್, ನೀಲಗಿರಿ , ಕನ್ಯಾಕುಮಾರಿ ಈ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಎಂ.ಕೆ .ಸ್ಟಾಲಿನ್ ಮುನ್ನಡೆ;
ಕೊಲತ್ತೂರ್ ವಿಧಾನಸಭಾ ಕ್ಷೇತ್ರದಲ್ಲಿ ಡಿಎಂಕೆ ನಾಯಕ ಎಂ.ಕೆ,ಸ್ಟಾಲಿನ್ 1,700 ಮತಗಳ ಮುನ್ನಡೆ ಸಾಧಿಸಿದ್ದಾರೆ. ಇಲ್ಲಿ ಎಐಎಡಿಎಂಕೆ ಪಕ್ಷದ ಆದಿರಾಜಾರಾಂ ಪ್ರತಿಸ್ಪರ್ಧಿಯಾಗಿದ್ದಾರೆ

ಕಮಲ್ ಹಾಸನ್ ಮುನ್ನಡೆ;
ಕೊಯಮತ್ತೂರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ, ನಟ ಕಮಲ್ ಹಾಸನ್ ಮುನ್ನಡೆ ಸಾಧಿಸಿದ್ದಾರೆ.
In Tamil Nadu, the DMK is set to form government but their performance was not as exit polls predicted. According to current leads, the DMK+ alliance is leading in 137 seats.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm