ಬ್ರೇಕಿಂಗ್ ನ್ಯೂಸ್
02-05-21 01:19 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಮೇ 2: ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕದ ಆರ್ಭಟ ಮುಂದುವರಿದಿದ್ದು, ಇದೇ ಮೊದಲ ಬಾರಿಗೆ ದೇಶದಲ್ಲಿ ಒಂದೇ ದಿನ 3,700ಕ್ಕೂ ಅಧಿಕ ಸೋಂಕಿತರು ಮೃತಪಟ್ಟಿದ್ದಾರೆ. ಆದರೆ ಶುಕ್ರವಾರ ಹೊಸ ಪ್ರಕರಣಗಳ ಸಂಖ್ಯೆ ಅಲ್ಪಮಟ್ಟಿಗೆ ಇಳಿಕೆಯಾಗಿದೆ. ಶುಕ್ರವಾರ 4 ಲಕ್ಷದ ಗಡಿ ದಾಟಿದ್ದ ಹೊಸ ಪ್ರಕರಣಗಳು ಶನಿವಾರ 3.92 ಲಕ್ಷಕ್ಕೆ ಇಳಿದಿವೆ.
ಶನಿವಾರ ಒಟ್ಟು 3,728 ಮಂದಿ ಸೋಂಕಿತರು ಕೊನೆಯುಸಿರೆಳೆದಿದ್ದಾರೆ. ಇದುವರೆಗೆ ಒಂದು ದಿನದಲ್ಲಿ ಅತ್ಯಧಿಕ ಅಂದರೆ 3,596 ಮಂದಿ ಬುಧವಾರ ಮೃತಪಟ್ಟಿದ್ದರು. ಈ ವಾರದಲ್ಲಿ ಮೂರನೇ ಬಾರಿಗೆ 3,500ಕ್ಕಿಂತ ಅಧಿಕ ಸಾವು ಸಂಭವಿಸಿದೆ. ದೇಶದ 14 ರಾಜ್ಯಗಳಲ್ಲಿ 100ಕ್ಕೂ ಅಧಿಕ ಸಾವು ವರದಿಯಾಗಿದೆ. ಉತ್ತರಾಖಂಡ (107 ಸಾವು) ಮತ್ತು ಜಾರ್ಖಂಡ್ (159) ನಂಥ ಸಣ್ಣ ರಾಜ್ಯಗಳು ಅಧಿಕ ಮರಣದರದಿಂದ ಕಂಗಾಲಾಗಿವೆ. ಈ ನಡುವೆ ಬಂಗಾಳದಲ್ಲಿ ಮೊದಲ ಬಾರಿಗೆ 100ಕ್ಕೂ ಅಧಿಕ ಸಾವು ಸಂಭವಿಸಿದೆ. ಶನಿವಾರ ರಾಜ್ಯದಲ್ಲಿ 103 ಸಾವು ವರದಿಯಾಗಿದೆ.

ಮಹಾರಾಷ್ಟ್ರ ಹಾಗೂ ದಿಲ್ಲಿ ಕೂಡಾ ಇದುವರೆಗಿನ ಗರಿಷ್ಠ ಸಾವಿನ ಸಂಖ್ಯೆಯನ್ನು ದಾಖಲಿಸಿವೆ. ಉಭಯ ರಾಜ್ಯಗಳಲ್ಲಿ ಕ್ರಮವಾಗಿ 802 ಮತ್ತು 412 ಮಂದಿ ಸೋಂಕಿತರು ಜೀವ ಕಳೆದುಕೊಂಡಿದ್ದಾರೆ. ಉತ್ತರ ಪ್ರದೇಶ (303), ಕರ್ನಾಟಕ(271), ಛತ್ತೀಸ್ಗಢ (282) ಮತ್ತು ಗುಜರಾತ್ (172) ನಂತರದ ಸ್ಥಾನಗಳಲ್ಲಿವೆ.

ದೇಶದಲ್ಲಿ ಒಟ್ಟಾರೆ ಪ್ರಕರಣಗಳ ಸಂಖ್ಯೆ ಶುಕ್ರವಾರಕ್ಕೆ ಹೋಲಿಸಿದರೆ 10 ಸಾವಿರದಷ್ಟು ಕಡಿಮೆಯಾಗಿದ್ದರೂ, ಒಂಭತ್ತು ರಾಜ್ಯಗಳು ಶನಿವಾರ ಗರಿಷ್ಠ ಪ್ರಕರಣಗಳನ್ನು ದಾಖಲಿಸಿವೆ. ತಮಿಳುನಾಡು, ಆಂಧ್ರ ಪ್ರದೇಶ, ರಾಜಸ್ಥಾನ, ಬಂಗಾಳ, ಒಡಿಶಾ, ಪಂಜಾಬ್, ಜಮ್ಮು ಮತ್ತು ಕಾಶ್ಮೀರ ಹಾಗೂ ಪುದುಚೇರಿಯಲ್ಲಿ ಇದುವರೆಗಿನ ಗರಿಷ್ಠ ಪ್ರಕರಣಗಳು ಶನಿವಾರ ದಾಖಲಾಗಿವೆ. ದೇಶದಲ್ಲಿ ಮಹಾರಾಷ್ಟ್ರ 63,282 ಪ್ರಕರಣದೊಂದಿಗೆ ಅಗ್ರಸ್ಥಾನಿಯಾಗಿದ್ದರೆ, ಕರ್ನಾಟಕ 40,990 ಪ್ರಕರಣಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.
India reported its highest single-day Covid death toll on Saturday, with more than 3,700 people succumbing to the virus, even as smaller states like Uttarakhand posted 100-plus fatalities for the second day and Bengal recorded deaths in three figures for the first time.
06-03-26 12:08 pm
HK News Staffer
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 12:17 pm
supritha Jain
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm