ಬ್ರೇಕಿಂಗ್ ನ್ಯೂಸ್
02-05-21 01:19 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಮೇ 2: ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕದ ಆರ್ಭಟ ಮುಂದುವರಿದಿದ್ದು, ಇದೇ ಮೊದಲ ಬಾರಿಗೆ ದೇಶದಲ್ಲಿ ಒಂದೇ ದಿನ 3,700ಕ್ಕೂ ಅಧಿಕ ಸೋಂಕಿತರು ಮೃತಪಟ್ಟಿದ್ದಾರೆ. ಆದರೆ ಶುಕ್ರವಾರ ಹೊಸ ಪ್ರಕರಣಗಳ ಸಂಖ್ಯೆ ಅಲ್ಪಮಟ್ಟಿಗೆ ಇಳಿಕೆಯಾಗಿದೆ. ಶುಕ್ರವಾರ 4 ಲಕ್ಷದ ಗಡಿ ದಾಟಿದ್ದ ಹೊಸ ಪ್ರಕರಣಗಳು ಶನಿವಾರ 3.92 ಲಕ್ಷಕ್ಕೆ ಇಳಿದಿವೆ.
ಶನಿವಾರ ಒಟ್ಟು 3,728 ಮಂದಿ ಸೋಂಕಿತರು ಕೊನೆಯುಸಿರೆಳೆದಿದ್ದಾರೆ. ಇದುವರೆಗೆ ಒಂದು ದಿನದಲ್ಲಿ ಅತ್ಯಧಿಕ ಅಂದರೆ 3,596 ಮಂದಿ ಬುಧವಾರ ಮೃತಪಟ್ಟಿದ್ದರು. ಈ ವಾರದಲ್ಲಿ ಮೂರನೇ ಬಾರಿಗೆ 3,500ಕ್ಕಿಂತ ಅಧಿಕ ಸಾವು ಸಂಭವಿಸಿದೆ. ದೇಶದ 14 ರಾಜ್ಯಗಳಲ್ಲಿ 100ಕ್ಕೂ ಅಧಿಕ ಸಾವು ವರದಿಯಾಗಿದೆ. ಉತ್ತರಾಖಂಡ (107 ಸಾವು) ಮತ್ತು ಜಾರ್ಖಂಡ್ (159) ನಂಥ ಸಣ್ಣ ರಾಜ್ಯಗಳು ಅಧಿಕ ಮರಣದರದಿಂದ ಕಂಗಾಲಾಗಿವೆ. ಈ ನಡುವೆ ಬಂಗಾಳದಲ್ಲಿ ಮೊದಲ ಬಾರಿಗೆ 100ಕ್ಕೂ ಅಧಿಕ ಸಾವು ಸಂಭವಿಸಿದೆ. ಶನಿವಾರ ರಾಜ್ಯದಲ್ಲಿ 103 ಸಾವು ವರದಿಯಾಗಿದೆ.
ಮಹಾರಾಷ್ಟ್ರ ಹಾಗೂ ದಿಲ್ಲಿ ಕೂಡಾ ಇದುವರೆಗಿನ ಗರಿಷ್ಠ ಸಾವಿನ ಸಂಖ್ಯೆಯನ್ನು ದಾಖಲಿಸಿವೆ. ಉಭಯ ರಾಜ್ಯಗಳಲ್ಲಿ ಕ್ರಮವಾಗಿ 802 ಮತ್ತು 412 ಮಂದಿ ಸೋಂಕಿತರು ಜೀವ ಕಳೆದುಕೊಂಡಿದ್ದಾರೆ. ಉತ್ತರ ಪ್ರದೇಶ (303), ಕರ್ನಾಟಕ(271), ಛತ್ತೀಸ್ಗಢ (282) ಮತ್ತು ಗುಜರಾತ್ (172) ನಂತರದ ಸ್ಥಾನಗಳಲ್ಲಿವೆ.
ದೇಶದಲ್ಲಿ ಒಟ್ಟಾರೆ ಪ್ರಕರಣಗಳ ಸಂಖ್ಯೆ ಶುಕ್ರವಾರಕ್ಕೆ ಹೋಲಿಸಿದರೆ 10 ಸಾವಿರದಷ್ಟು ಕಡಿಮೆಯಾಗಿದ್ದರೂ, ಒಂಭತ್ತು ರಾಜ್ಯಗಳು ಶನಿವಾರ ಗರಿಷ್ಠ ಪ್ರಕರಣಗಳನ್ನು ದಾಖಲಿಸಿವೆ. ತಮಿಳುನಾಡು, ಆಂಧ್ರ ಪ್ರದೇಶ, ರಾಜಸ್ಥಾನ, ಬಂಗಾಳ, ಒಡಿಶಾ, ಪಂಜಾಬ್, ಜಮ್ಮು ಮತ್ತು ಕಾಶ್ಮೀರ ಹಾಗೂ ಪುದುಚೇರಿಯಲ್ಲಿ ಇದುವರೆಗಿನ ಗರಿಷ್ಠ ಪ್ರಕರಣಗಳು ಶನಿವಾರ ದಾಖಲಾಗಿವೆ. ದೇಶದಲ್ಲಿ ಮಹಾರಾಷ್ಟ್ರ 63,282 ಪ್ರಕರಣದೊಂದಿಗೆ ಅಗ್ರಸ್ಥಾನಿಯಾಗಿದ್ದರೆ, ಕರ್ನಾಟಕ 40,990 ಪ್ರಕರಣಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.
India reported its highest single-day Covid death toll on Saturday, with more than 3,700 people succumbing to the virus, even as smaller states like Uttarakhand posted 100-plus fatalities for the second day and Bengal recorded deaths in three figures for the first time.
24-04-25 06:39 pm
Bangalore Correspondent
Kalaburagi Accident: ಕಲಬುರಗಿ; ನಾಯಿಯ ಪ್ರಾಣ ಕಾಪ...
24-04-25 04:56 pm
CM Siddaramaiah, DK Shivakumar, Threat Mail:...
23-04-25 10:49 pm
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
24-04-25 04:59 pm
HK News Desk
Pahalgam terror attack: ಉಗ್ರರು ಕನಸಿನಲ್ಲೂ ಊಹಿಸ...
24-04-25 04:21 pm
Robert Vadra, Pahalgam terror attack: ಸರ್ಕಾರ...
24-04-25 01:58 pm
India Pak News: ಭಾರತ- ಪಾಕ್ ಸಂಬಂಧಕ್ಕೆ ಬ್ರೇಕ್ ;...
24-04-25 12:46 pm
Pahalgam terror attack, Pakistani terrorists:...
23-04-25 09:25 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm