ಬ್ರೇಕಿಂಗ್ ನ್ಯೂಸ್
02-05-21 01:19 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಮೇ 2: ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕದ ಆರ್ಭಟ ಮುಂದುವರಿದಿದ್ದು, ಇದೇ ಮೊದಲ ಬಾರಿಗೆ ದೇಶದಲ್ಲಿ ಒಂದೇ ದಿನ 3,700ಕ್ಕೂ ಅಧಿಕ ಸೋಂಕಿತರು ಮೃತಪಟ್ಟಿದ್ದಾರೆ. ಆದರೆ ಶುಕ್ರವಾರ ಹೊಸ ಪ್ರಕರಣಗಳ ಸಂಖ್ಯೆ ಅಲ್ಪಮಟ್ಟಿಗೆ ಇಳಿಕೆಯಾಗಿದೆ. ಶುಕ್ರವಾರ 4 ಲಕ್ಷದ ಗಡಿ ದಾಟಿದ್ದ ಹೊಸ ಪ್ರಕರಣಗಳು ಶನಿವಾರ 3.92 ಲಕ್ಷಕ್ಕೆ ಇಳಿದಿವೆ.
ಶನಿವಾರ ಒಟ್ಟು 3,728 ಮಂದಿ ಸೋಂಕಿತರು ಕೊನೆಯುಸಿರೆಳೆದಿದ್ದಾರೆ. ಇದುವರೆಗೆ ಒಂದು ದಿನದಲ್ಲಿ ಅತ್ಯಧಿಕ ಅಂದರೆ 3,596 ಮಂದಿ ಬುಧವಾರ ಮೃತಪಟ್ಟಿದ್ದರು. ಈ ವಾರದಲ್ಲಿ ಮೂರನೇ ಬಾರಿಗೆ 3,500ಕ್ಕಿಂತ ಅಧಿಕ ಸಾವು ಸಂಭವಿಸಿದೆ. ದೇಶದ 14 ರಾಜ್ಯಗಳಲ್ಲಿ 100ಕ್ಕೂ ಅಧಿಕ ಸಾವು ವರದಿಯಾಗಿದೆ. ಉತ್ತರಾಖಂಡ (107 ಸಾವು) ಮತ್ತು ಜಾರ್ಖಂಡ್ (159) ನಂಥ ಸಣ್ಣ ರಾಜ್ಯಗಳು ಅಧಿಕ ಮರಣದರದಿಂದ ಕಂಗಾಲಾಗಿವೆ. ಈ ನಡುವೆ ಬಂಗಾಳದಲ್ಲಿ ಮೊದಲ ಬಾರಿಗೆ 100ಕ್ಕೂ ಅಧಿಕ ಸಾವು ಸಂಭವಿಸಿದೆ. ಶನಿವಾರ ರಾಜ್ಯದಲ್ಲಿ 103 ಸಾವು ವರದಿಯಾಗಿದೆ.

ಮಹಾರಾಷ್ಟ್ರ ಹಾಗೂ ದಿಲ್ಲಿ ಕೂಡಾ ಇದುವರೆಗಿನ ಗರಿಷ್ಠ ಸಾವಿನ ಸಂಖ್ಯೆಯನ್ನು ದಾಖಲಿಸಿವೆ. ಉಭಯ ರಾಜ್ಯಗಳಲ್ಲಿ ಕ್ರಮವಾಗಿ 802 ಮತ್ತು 412 ಮಂದಿ ಸೋಂಕಿತರು ಜೀವ ಕಳೆದುಕೊಂಡಿದ್ದಾರೆ. ಉತ್ತರ ಪ್ರದೇಶ (303), ಕರ್ನಾಟಕ(271), ಛತ್ತೀಸ್ಗಢ (282) ಮತ್ತು ಗುಜರಾತ್ (172) ನಂತರದ ಸ್ಥಾನಗಳಲ್ಲಿವೆ.

ದೇಶದಲ್ಲಿ ಒಟ್ಟಾರೆ ಪ್ರಕರಣಗಳ ಸಂಖ್ಯೆ ಶುಕ್ರವಾರಕ್ಕೆ ಹೋಲಿಸಿದರೆ 10 ಸಾವಿರದಷ್ಟು ಕಡಿಮೆಯಾಗಿದ್ದರೂ, ಒಂಭತ್ತು ರಾಜ್ಯಗಳು ಶನಿವಾರ ಗರಿಷ್ಠ ಪ್ರಕರಣಗಳನ್ನು ದಾಖಲಿಸಿವೆ. ತಮಿಳುನಾಡು, ಆಂಧ್ರ ಪ್ರದೇಶ, ರಾಜಸ್ಥಾನ, ಬಂಗಾಳ, ಒಡಿಶಾ, ಪಂಜಾಬ್, ಜಮ್ಮು ಮತ್ತು ಕಾಶ್ಮೀರ ಹಾಗೂ ಪುದುಚೇರಿಯಲ್ಲಿ ಇದುವರೆಗಿನ ಗರಿಷ್ಠ ಪ್ರಕರಣಗಳು ಶನಿವಾರ ದಾಖಲಾಗಿವೆ. ದೇಶದಲ್ಲಿ ಮಹಾರಾಷ್ಟ್ರ 63,282 ಪ್ರಕರಣದೊಂದಿಗೆ ಅಗ್ರಸ್ಥಾನಿಯಾಗಿದ್ದರೆ, ಕರ್ನಾಟಕ 40,990 ಪ್ರಕರಣಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.
India reported its highest single-day Covid death toll on Saturday, with more than 3,700 people succumbing to the virus, even as smaller states like Uttarakhand posted 100-plus fatalities for the second day and Bengal recorded deaths in three figures for the first time.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
09-01-26 05:47 pm
Mangalore Correspondent
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm