ಬ್ರೇಕಿಂಗ್ ನ್ಯೂಸ್
03-05-21 11:34 am Headline Karnataka News Network ದೇಶ - ವಿದೇಶ
ನವದೆಹಲಿ,ಮೇ 3: ಕೊರೊನಾ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ರಾಷ್ಟ್ರ ರಾಜಧಾನಿಲ್ಲಿ ಲಾಕ್ಡೌನ್ ಘೋಷಿಸಿದ ಎರಡು ವಾರಗಳ ಬಳಿಕ, ಪರೀಕ್ಷೆಗೆ ಒಳಪಟ್ಟವರ ಪೈಕಿ ಸೋಂಕು ಪತ್ತೆಯಾಗಿರುವ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ.
ಆದರೂ, ಉಸಿರಾಟದ ತೀವ್ರ ಸಮಸ್ಯೆ ಎದುರಿಸುತ್ತಿರುವ ರೋಗಿಗಳು ಆಮ್ಲಜನಕ ದೊರೆಯದೆ ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರಗೆ ಎಡತಾಕುವುದು ಮುಂದುವರಿದಿದೆ.

ಭಾನುವಾರ ಸಂಜೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಪರೀಕ್ಷೆಗೆ ಒಳಪಟ್ಟಿರುವ 71,997 ಜನರ ಪೈಕಿ 20,394 (ಶೇ 28.33) ಜನರಲ್ಲಿ ಸೋಂಕು ದೃಢಪಟ್ಟಿದೆ.
ಕಳೆದ 15 ದಿನಗಳ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಪರೀಕ್ಷೆಗೆ ಒಳಪಟ್ಟವರಲ್ಲಿ ಸೋಂಕಿಗೆ ಒಳಗಾದವರ ಪ್ರಮಾಣ ಶೇ 30ಕ್ಕಿಂತ ಕಡಿಮೆ ಪ್ರಮಾಣಕ್ಕೆ ಇಳಿದಿದೆ. ಶನಿವಾರ ಶೇ 31.61ರಷ್ಟು ಜನರಲ್ಲಿ ಸೋಂಕು ಪತ್ತೆಯಾಗಿತ್ತು.

24,444 ಜನ ಗುಣಮುಖರಾಗಿದ್ದಾರೆ. ಈ ಸಂಖ್ಯೆಯು ಸೋಂಕಿತರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ದಾಖಲಾಗಿರುವುದು ಸ್ವಲ್ಪ ಮಟ್ಟಿನ ಸಮಾಧಾನಕ್ಕೆ ಕಾರಣವಾಗಿದೆ. ಶನಿವಾರದಿಂದ ಹೊಸದಾಗಿ ಸೊಂಕಿಗೆ ಒಳಗಾಗುತ್ತಿರುವವರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬರುತ್ತಿರುವುದೂ ಆತಂಕ ತಗ್ಗಲು ಕಾರಣವಾಗಿದೆ.

ಆದರೆ, ಇದೇ ಅವಧಿಯಲ್ಲಿ ಸಾವಿನ ಪ್ರಮಾಣದಲ್ಲಿ ಸಾಕಷ್ಟು ಪ್ರಮಾಣದ ಸುಧಾರಣೆ ಸಾಧ್ಯವಾಗದೆ, ಒಟ್ಟು 407 ಜನ ಮೃತಪಟ್ಟಿದ್ದಾರೆ. ನಗರದಲ್ಲಿ ಇದುವರೆಗೆ ಕೊರೊನಾಗೆ ಜೀವ ಕಳೆದುಕೊಂಡವರ ಸಂಖ್ಯೆ 16,966ಕ್ಕೆ ತಲುಪಿದೆ.
ಶನಿವಾರ ಒಂದು ಲಕ್ಷಕ್ಕೆ ಸಮೀಪಿಸಿದ್ದ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆಯು 92,290ಕ್ಕೆ ಇಳಿದಿದ್ದರೂ, ಆಸ್ಪತ್ರೆಗಳಲ್ಲಿ ಹಾಸಿಗೆಯ ಕೊರತೆ ಮುಂದುವರಿದಿದೆ.
The Capital on Sunday recorded 407 deaths and 20,394 COVID-19 cases, along with 24,444 recoveries. A health bulletin released by the Delhi government stated that 71,997 tests were conducted and a positivity rate of 28.33% was recorded.
05-12-25 07:26 pm
HK News Desk
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm