ಬ್ರೇಕಿಂಗ್ ನ್ಯೂಸ್
03-05-21 01:04 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಮೇ 3: ಕೇರಳ ಕಾಂಗ್ರೆಸ್ (ಬಿ) ಅಧ್ಯಕ್ಷ ಮತ್ತು ಮಾಜಿ ಸಚಿವ ಆರ್. ಬಾಲಕೃಷ್ಣ ಪಿಳ್ಳೈ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಉಸಿರಾಟದ ತೊಂದರೆ ಕಾಣಿಸಿಕೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಕೊಟ್ಟಾರಕ್ಕರದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ಹೇಳಿವೆ.
ಬಾಲಕೃಷ್ಣ ಪಿಳ್ಳೈ ಅವರಿಗೆ ಮೂರು ಮಕ್ಕಳಿದ್ದಾರೆ. ಮಗ ಗಣೇಶ್ ಕುಮಾರ್ ಮಾಜಿ ಸಚಿವರಾಗಿದ್ದು, ಪತ್ತನಾಪುರಂ ವಿಧಾನಸಭಾ ಕ್ಷೇತ್ರದಿಂದ ಎರಡನೇ ಬಾರಿ ಎಲ್ ಡಿಎಫ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದಾರೆ. ಕೊಟ್ಟಾರಕ್ಕರ ಶ್ರೀಮಂತ ಕುಟುಂಬದಲ್ಲಿ ಜನಿಸಿದ ಪಿಳ್ಳೈ, ವಿದ್ಯಾರ್ಥಿ ದೆಸೆಯಂದಲೇ ರಾಜಕೀಯಕ್ಕೆ ಪ್ರವೇಶಿಸಿದವರು. ಕಾಂಗ್ರೆಸ್ ಸೇರುವುದಕ್ಕಿಂತ ಮುನ್ನ ಎಸ್ಎಫ್ಐ ಸಂಘಟನೆಯಲ್ಲಿದ್ದವರು ಇವರು. ಕೇರಳ ಕಾಂಗ್ರೆಸ್ ನ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿಯಾಗಿದ್ದರು ಪಿಳ್ಳೈ. 1958 ರಿಂದ 1964ರ ವರೆಗೆ ಎಐಸಿಸಿ ಸದಸ್ಯರಾಗಿದ್ದರು.
1960ರಲ್ಲಿ ಪತ್ತನಾಪುರಂ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾದಾಗ ಅವರ ವಯಸ್ಸು 25. 1964ರಲ್ಲಿ ಕಾಂಗ್ರೆಸ್ ತೊರೆದ ಪಿಳ್ಳೈ, ಹಿರಿಯ ನೇತಾರ ಕೆ.ಎಂ.ಜಾರ್ಜ್ ಜತೆ ಕೇರಳ ಕಾಂಗ್ರೆಸ್ ಪಕ್ಷ ಸ್ಥಾಪಿಸಿದರು. 1965ರಲ್ಲಿ ಕೊಟ್ಟಾರಕ್ಕರದಲ್ಲಿ ಗೆದ್ದ ಅವರು 1967 ಮತ್ತು 1970ರಲ್ಲಿ ನಡೆದ ಚುನಾವಣೆಯಲ್ಲಿ ಪರಾಭವಗೊಂಡರು. 1971ರಲ್ಲಿ ಮಾವೇಲಿಕ್ಕರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
ಸಿ.ಅಚ್ಯುತ ಮೆನನ್, ಕೆ.ಕರುಣಾಕರನ್, ಇ.ಕೆ ನಾಯನಾರ್, ಎ.ಕೆ. ಆಂಟನಿ ಮೊದಲಾದವರ ಸರ್ಕಾರದಲ್ಲಿ ಸಚಿವ ಸ್ಥಾನ ಹೊಂದಿದ್ದರು. 6 ದಶಕಗಳ ರಾಜಕೀಯ ಜೀವನದಲ್ಲಿ ಪಿಳ್ಳೈ ಹಲವಾರು ಸೋಲು- ಗೆಲುವುಗಳನ್ನು ಕಂಡಿದ್ದಾರೆ.
ಕೇರಳ ಸರ್ಕಾರವನ್ನು ಕಡೆಗಣಿಸಿದ್ದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಪಂಜಾಬ್ನಲ್ಲಿ ನಡೆಸಿದಂತೆ ಉಗ್ರ ಹೋರಾಟ ನಡೆಸಬೇಕು ಎಂದು 1980ರಲ್ಲಿ ಭಾಷಣವೊಂದರಲ್ಲಿ ಹೇಳಿದ್ದರು. ಚಳವಳಿಗೆ ಕರೆನೀಡಿದ್ದಕ್ಕಾಗಿ ಸಚಿವ ಸ್ಥಾನ ತೊರೆಯಬೇಕಾಗಿ ಬಂದಿತ್ತು. ಭ್ರಷ್ಟಾಚಾರ ಆರೋಪದಲ್ಲಿ ಜೈಲಿಗೆ ಹೋದ ಮೊದಲ ಸಚಿವರಾಗಿದ್ದಾರೆ ಬಾಲಕೃಷ್ಣ ಪಿಳ್ಳೈ.
ಕೆ ಕರುಣಾಕರನ್ ಸಚಿವ ಸಂಪುಟದಲ್ಲಿ 1982-1985ರವರೆಗೆ ವಿದ್ಯುತ್ ಸಚಿವರಾಗಿದ್ದ ಅವಧಿಯಲ್ಲಿ ಇಡಮಾಲಯಾರ್ ಜಲವಿದ್ಯುತ್ ಯೋಜನೆಗೆ ಗುತ್ತಿಗೆ ನೀಡುವ ಸಂದರ್ಭದಲ್ಲಿ ತಮ್ಮ ಸ್ಥಾನಗಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಪಿಳ್ಳೈ ಮತ್ತು ಇತರ ಇಬ್ಬರಿಗೆ ಒಂದು ವರ್ಷದ ಜೈಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ 2011 ರ ಫೆಬ್ರವರಿಯಲ್ಲಿ ವಿಧಿಸಿತ್ತು. 2017 ರಿಂದ ಅವರು ಕ್ಯಾಬಿನೆಟ್ ಶ್ರೇಣಿಯೊಂದಿಗೆ ಕೇರಳ ರಾಜ್ಯ ವೆಲ್ಫೇರ್ ಕಾರ್ಪೊರೇಷನ್ ಫಾರ್ ಫಾರ್ವರ್ಡ್ ಕಮ್ಯೂನಿಟೀಸ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.
ಕೇರಳದ ಸಾರಿಗೆ ಮತ್ತು ವಿದ್ಯುತ್ ಸಚಿವರಾಗಿದ್ದ ಮಾಜಿ ಸಚಿವ ಬಾಲಕೃಷ್ಣ ಪಿಳ್ಳೈ ಅವರ ನಿಧನಕ್ಕೆ ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಸಂತಾಪ ಸೂಚಿಸಿದ್ದಾರೆ.
Veteran politician and Kerala Congress (B) chairman R. Balakrishna Pillai, 87, died at a private hospital at Kottarakara in Kollam district early on Monday.
09-09-25 09:14 pm
Bangalore Correspondent
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 08:01 pm
Mangalore Correspondent
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm