ಬ್ರೇಕಿಂಗ್ ನ್ಯೂಸ್
26-08-20 05:46 pm Headline Karnataka News Network ದೇಶ - ವಿದೇಶ
ಪ್ಯೊಂಗ್ಯಾಂಗ್, ಆಗಸ್ಟ್ 26: ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜೊಂಗ್-ಉನ್ ಕೋಮಾದಲ್ಲಿದ್ದಾರೆಂದು ದಕ್ಷಿಣ ಕೊರಿಯಾದ ರಾಜತಾಂತ್ರಿಕ ಅಧಿಕಾರಿಯೊಬ್ಬರು ಹೇಳಿದ ಕೆಲವೇ ದಿನಗಳಲ್ಲಿ ಉತ್ತರ ಕೊರಿಯಾದ ಆಡಳಿತ ಅವರ ಚಿತ್ರಗಳನ್ನು ಬಿಡುಗಡೆಗೊಳಿಸಿದೆ. ತಮ್ಮ ವರ್ಕರ್ಸ್ ಪಾರ್ಟಿಯ ಉನ್ನತ ಸಭೆಯೊಂದರಲ್ಲಿ ಕಿಮ್ ಜೊಂಗ್ ಉನ್ ಭಾಗವಹಿಸಿದ ಚಿತ್ರಗಳು ಇವಾಗಿವೆ ಎಂದು ಅಲ್ಲಿನ ಸರಕಾರಿ ನಿಯಂತ್ರಿತ ಕೊರಿಯನ್ ಸೆಂಟ್ರಲ್ ನ್ಯೂಸ್ ಏಜನ್ಸಿ ತಿಳಿಸಿದೆ.
ಸಭೆಯಲ್ಲಿ ಅವರು ಕೊರೋನವೈರಸ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಹಾಗೂ ಚಂಡಮಾರುತ ಸಂಬಂಧ ಸೂಕ್ತ ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದರು ಎಂದು ಆ ಸುದ್ದಿ ಸಂಸ್ಥೆ ವರದಿ ಮಾಡಿದೆ. ಆದರೆ ಈ ಚಿತ್ರಗಳನ್ನು ಯಾವಾಗ ತೆಗೆಯಲಾಗಿದೆ ಎಂಬ ಕುರಿತು ಸ್ಪಷ್ಟತೆಯಿಲ್ಲ.
ಕಿಮ್ ಅವರು ಎಪ್ರಿಲ್ ತಿಂಗಳಿನಿಂದ ಕೋಮಾದಲ್ಲಿದ್ದಾರೆಂದು ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷ ಕಿಮ್ ಡೇ-ಜುಂಗ್ ಅವರ ಮಾಜಿ ಸಹಾಯಕ ಚಂಗ್ ಸೊಂಗ್ ಮಿನ್ ಅವರು ಹೇಳಿದ ಎರಡೇ ದಿನದಲ್ಲಿ ಈ ಚಿತ್ರಗಳು ಬಿಡುಗಡೆಗೊಂಡಿವೆ.
ಆದರೆ ಚಂಗ್ ಅವರು ತಮ್ಮ ಫೇಸ್ ಬುಕ್ ಪುಟದಲ್ಲಿ ``ಕಿಮ್ ಕೋಮಾದಲ್ಲಿದ್ದಾರೆ ಆದರೆ ಇನ್ನೂ ಬದುಕಿದ್ದಾರೆ, ನಕಲಿ ಚಿತ್ರಗಳನ್ನು ಬಿಡುಗಡೆಗೊಳಿಸಲಾಗುತ್ತಿದೆ, ಅವರಿಗೆ ಯಾರು ಉತ್ತರಾಧಿಕಾರಿ ಎಂಬ ಕುರಿತು ಸ್ಪಷ್ಟತೆಯಿಲ್ಲದೇ ಇರುವುದರಿಂದ ಹಾಗೂ ಹೆಚ್ಚು ಕಾಲ ಈ ರೀತಿ ರಹಸ್ಯ ಕಾಪಾಡಲು ಸಾಧ್ಯವಿಲ್ಲದೇ ಇರುವುದರಿಂದ ಅವರ ಸೋದರಿ ಕಿಮ್-ಯೊ-ಜುಂಗ್ ಅವರನ್ನು ಪ್ರಧಾನ ವೇದಿಕೆಗೆ ತರುವ ಯತ್ನಗಳು ನಡೆಯುತ್ತಿವೆ,'' ಎಂದು ಬರೆದಿದ್ದರು.
ಮೂಲಗಳ ಪ್ರಕಾರ ಕಿಮ್ ಜೊಂಗ್-ಉನ್ ಅವರು ತಮ್ಮ ಬಾಡಿ-ಡಬಲ್ ಬಳಸುತ್ತಿರಬಹುದು ಏಕೆಂದರೆ ಇತ್ತೀಚೆಗೆ ಬಿಡುಗಡೆಗೊಳಿಸಲಾದ ಹಲವು ಚಿತ್ರಗಳಿಗೂ ಅವರ ಮೂಲ ಚಿತ್ರಗಳಿಗೂ ವ್ಯತ್ಯಾಸ ಕಾಣುತ್ತಿವೆ ಎಂದು ಹೇಳಲಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm