ಬ್ರೇಕಿಂಗ್ ನ್ಯೂಸ್
04-05-21 04:10 pm Headline Karnataka News Network ದೇಶ - ವಿದೇಶ
Photo credits : 9news
ಮೆಕ್ಸಿಕೊ, ಮೇ 4 : ಜನನಿಬಿಡ ರಸ್ತೆಯ ಮೇಲೆ ಮೆಟ್ರೋ ಮೇಲ್ಸೇತುವೆ ಕುಸಿದು 23 ಮಂದಿ ಮೃತಪಟ್ಟು 700ಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿರುವ ಘಟನೆ ಮೆಕ್ಸಿಕೋ ಸಿಟಿಯಲ್ಲಿ ನಡೆದಿದೆ.


ಸೋಮವಾರ ರಾತ್ರಿ ಮೆಟ್ರೋ ರೈಲು ಸಂಚಾರ ಮಾಡುತ್ತಿದ್ದ ವೇಳೆಯಲ್ಲಿ ಈ ದುರಂತ ನಡೆದಿದ್ದು, ಮೇಲ್ಸೇತುವೆ ಕುಸಿಯುತ್ತಿದ್ದಂತೆ ರೈಲು ಕೆಳಗೆ ಬಿದ್ದಿದೆ. ಅಪಘಾತ ನಡೆದ ಕೆಲವೇ ಹೊತ್ತಲ್ಲಿ ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಿಬ್ಬಂದಿ ಹಲವರನ್ನು ಕಾಪಾಡಿದ್ದಾರೆ. ಹಾಗೇ, ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನೂ ಹೊರತೆಗೆದಿದ್ದಾರೆ. ಮೊದಲು ಸುಮಾರು 13 ಮೃತದೇಹಗಳು ಸಿಕ್ಕಿದ್ದವು. ಇದೀಗ ಸಾವಿನ ಸಂಖ್ಯೆ ಹೆಚ್ಚಾಗಿದೆ.


ಇನ್ನು ಮೇಲ್ಸೇತುವೆ ಮತ್ತು ಆ ಸಮಯದಲ್ಲಿ ಅದರ ಮೇಲೆ ಸಂಚರಿಸುತ್ತಿದ್ದ ರೈಲು ಕೆಳಗೆ ರಸ್ತೆಯ ಮೇಲೆ ಹೋಗುತ್ತಿರುವ ಕಾರುಗಳು, ವಾಹನಗಳ ಮೇಲೆ ಬಿದ್ದ ದೃಶ್ಯವನ್ನು ಅಲ್ಲಿನ ಚಾನಲ್ವೊಂದು ತೋರಿಸಿದ್ದು, ವಿಡಿಯೋ ಭೀಕರವಾಗಿದೆ.

ಇನ್ನು ರಕ್ಷಣಾ ಕಾರ್ಯಾಚರಣೆಯೂ ಸಹ ಕಷ್ಟಕರವಾಗಿಯೇ ಇತ್ತು. ಘಟನಾ ಸ್ಥಳವನ್ನು ಪರಿಶೀಲಿಸಿದ ಮೆಕ್ಸಿಕೋ ಸಿಟಿಯ ಮೇಯರ್ ಕ್ಲೌಡಿಯಾ ಶೀನ್ಬಾಮ್, ಮೇಲ್ಸೇತುವ ಕುಸಿದಾಗ ರೈಲು ಅರ್ಧ ಕುಸಿದಿದೆ. ಹಾಗಾಗಿ ರಕ್ಷಣಾ ಕಾರ್ಯಾಚರಣೆ ಕಷ್ಟವಾಯಿತು. ನಂತರ ಸ್ಥಳಕ್ಕೆ ಕ್ರೇನ್ ಕಳಿಸಲಾಯಿತು ಎಂದು ತಿಳಿಸಿದ್ದಾರೆ. ಇನ್ನು ಆಸ್ಪತ್ರೆಗೆ ದಾಖಲಾದವರ ಸ್ಥಿತಿ ಕೂಡ ತುಂಬ ಗಂಭೀರವಾಗಿದೆ. ಕೆಲವರಿಗೆ ಸರ್ಜರಿ ನಡೆಸಲಾಗಿದೆ ಎಂದು ಹೇಳಿದ್ದಾರೆ.
at least 13 dead and 70 injured after a metro train cars collapsed from overpass in mexico city #MetroCDMX #CDMX pic.twitter.com/EvjTUt2BVx
— QCON (@sam23858402) May 4, 2021
05-12-25 07:26 pm
HK News Desk
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm