ಬ್ರೇಕಿಂಗ್ ನ್ಯೂಸ್
05-05-21 05:30 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 5: ಕೊರೊನಾ ಲಸಿಕೆ ವ್ಯರ್ಥವಾಗುವುದನ್ನು ತಪ್ಪಿಸುವಲ್ಲಿ ಕೇರಳದ ಆರೋಗ್ಯ ಕಾರ್ಯಕರ್ತರು ಹಾಗೂ ದಾದಿಯರ ಪರಿಶ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಇಂಥ ಬಿಕ್ಕಟ್ಟಿನ ಸಂದರ್ಭದಲ್ಲಿ ಕೊರೊನಾ ಲಸಿಕೆಗಳು ಅನಗತ್ಯವಾಗಿ ವ್ಯರ್ಥವಾಗುವುದನ್ನು ತಪ್ಪಿಸುವುದು ಕೊರೊನಾ ವಿರುದ್ಧದ ಭಾರತದ ಹೋರಾಟಕ್ಕೆ ಬಲ ತುಂಬಿದಂತೆ ಎಂದು ಹೇಳಿದ್ದಾರೆ.
ತಮ್ಮ ರಾಜ್ಯದಲ್ಲಿ ಕೊರೊನಾ ಲಸಿಕೆಗಳನ್ನು ಹೇಗೆ ಸದ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬುದರ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರಧಾನಿ ಪ್ರತಿಕ್ರಿಯಿಸಿ, ಲಸಿಕೆ ವಿಚಾರದಲ್ಲಿ ಕೇರಳ ಸರ್ಕಾರ ನಡೆ ಮಾದರಿ ಎಂದು ಶ್ಲಾಘಿಸಿದ್ದಾರೆ.
ಕೇರಳಕ್ಕೆ ಕೇಂದ್ರ ಸರ್ಕಾರದಿಂದ 73,38,806 ಡೋಸ್ ಲಸಿಕೆಗಳು ಲಭ್ಯವಾಗಿವೆ. ಒಬ್ಬರಿಗೆ ಲಸಿಕೆ ನೀಡಿದ ನಂತರ ಉಳಿಯುವ, ವ್ಯರ್ಥವಾಗಬಹುದಾದ ಲಸಿಕೆಯನ್ನು ಬಳಸಿಕೊಂಡು ನಾವು 74,26,164 ಡೋಸ್ ಲಸಿಕೆ ನೀಡಿದ್ದೇವೆ. ನಮ್ಮ ಆರೋಗ್ಯ ಕಾರ್ಯಕರ್ತರು, ದಾದಿಯರು ಈ ನಿಟ್ಟಿನಲ್ಲಿ ದಕ್ಷತೆಯಿಂದ ಕೆಲಸ ಮಾಡಿದ್ದಾರೆ. ಮೆಚ್ಚುಗೆಗೆ ಅವರು ಅರ್ಹರು ಎಂದು ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದರು.
ಲಸಿಕೆಯು ವ್ಯರ್ಥವಾಗುವುದನ್ನು ತಪ್ಪಿಸುವ ಮೂಲಕ ನಮ್ಮ ಆರೋಗ್ಯ ಕಾರ್ಯಕರ್ತರು ಹಾಗೂ ದಾದಿಯರು ಮಾದರಿ ಎನಿಸಿಕೊಂಡಿದ್ದಾರೆ. ಇದು ಕೊರೊನಾ ವಿರುದ್ಧದ ಹೋರಾಟಕ್ಕೆ ಬಲ ನೀಡಲಿದೆ ಎಂದು ಮೋದಿ ಹೇಳಿದ್ದಾರೆ.
ಲಸಿಕೆ ವ್ಯರ್ಥ ಮಾಡುವ ವಿಚಾರದಲ್ಲಿ ಕೇರಳದ್ದು ಅತಿ ಕಡಿಮೆ ಪ್ರಮಾಣವಿದೆ. ಮೇಘಾಲಯ, ನಾಗಾಲ್ಯಾಂಡ್, ಬಿಹಾರ್, ಪಂಜಾಬ್, ದಾದ್ರಾ, ನಗರ್ ಹವೇಲಿ, ಹರಿಯಾಣ, ಮಣಿಪುರ, ಅಸ್ಸಾಂ, ತಮಿಳುನಾಡು, ಲಕ್ಷದ್ವೀಪದಲ್ಲಿ 4.01% ರಿಂದ 9.76%ವರೆಗೂ ಲಸಿಕೆ ವ್ಯರ್ಥವಾಗಿರುವ ವರದಿಯಾಗಿದೆ.
Good to see our healthcare workers and nurses set an example in reducing vaccine wastage.
— Narendra Modi (@narendramodi) May 5, 2021
Reducing vaccine wastage is important in strengthening the fight against COVID-19. https://t.co/xod0lomGDb
Prime Minister Narendra Modi on Wednesday praised the Kerala government's efforts in reducing vaccine wastage and said that it is important in strengthening the fight against COVID-19.
06-05-24 03:38 pm
Bangalore Correspondent
DK Shivakumar Slaps Congress Worker, haveri:...
06-05-24 01:51 pm
R Ashok, Revanna, Prajwal: ರೇವಣ್ಣನನ್ನ ಬಂಧಿಸಿರ...
05-05-24 10:54 pm
Sex Scandal, H D Revanna: ಷಡ್ಯಂತ್ರ ಮಾಡಿ ನನ್ನನ...
05-05-24 09:54 pm
Blue corner notice, Prajwal Revanna: ಪ್ರಜ್ವಲ್...
05-05-24 08:46 pm
06-05-24 12:23 pm
HK News Desk
Accident in Rajasthan: ದೇವರ ದರ್ಶನಕ್ಕೆ ತೆರಳುತ್...
05-05-24 11:51 am
Priyanka Gandhi, Narendra modi, Rahul Gandi:...
04-05-24 03:41 pm
Puri Lok Sabha: ಸೂರತ್, ಇಂದೋರ್ ಬಳಿಕ ಒಡಿಶಾದ ಪುರ...
04-05-24 03:27 pm
ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ...
04-05-24 01:50 pm
06-05-24 04:54 pm
Giridhar Shetty, Mangaluru Correspondent
Prajwal Revanna sex, Congress Shalet Pinto Ma...
06-05-24 02:51 pm
Ksrtc Mangalore, crime: ಸೈಡ್ ಕೊಟ್ಟಿಲ್ಲ ಎಂಬ ಕಾ...
06-05-24 02:14 pm
Konkani writer Ronald Sequeira mangalore: ಹಿರ...
06-05-24 01:30 pm
Mangalore Kondana temple, Kotekar: ಕೋಟೆಕಾರು ವ...
05-05-24 08:53 pm
05-05-24 02:44 pm
HK News Desk
K P K Jeyakumar Dhanasingh: ತಿರುನಲ್ವೇಲಿ ಜಿಲ್ಲ...
04-05-24 11:03 pm
Hubballi Crime Rape Minor, Arrest; ಹುಬ್ಬಳ್ಳಿ...
04-05-24 12:23 pm
Mangalore Fake CBI Call, Crime, Online fraud:...
03-05-24 09:57 pm
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm