ಬ್ರೇಕಿಂಗ್ ನ್ಯೂಸ್
05-05-21 05:45 pm Headline Karnataka News Network ದೇಶ - ವಿದೇಶ
Photo credits : ANI @ ANI
ಹೈದರಾಬಾದ್, ಮೇ 5: ನಗರದ ನೆಹರೂ ಜೈವಿಕ ಪಾರ್ಕ್ನಲ್ಲಿರುವ ಎಂಟು ಏಷ್ಯಾ ತಳಿಯ ಸಿಂಹಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇಷ್ಟು ದಿನ ಬೇರೆ ದೇಶಗಳಲ್ಲಿ ಪ್ರಾಣಿಗಳಿಗೂ ಕೊರೊನಾ ಸೋಂಕು ತಗುಲಿದ್ದ ಬಗ್ಗೆ ವರದಿಗಳಾಗಿದ್ದವು. ಆದರೆ ನಮ್ಮ ದೇಶದಲ್ಲಿ ಇಂಥ ಪ್ರಕರಣಗಳು ಕಂಡುಬಂದಿರಲಿಲ್ಲ.
ಇದೇ ಮೊದಲ ಬಾರಿಗೆ ಹೈದರಾಬಾದ್ನಲ್ಲಿ ಸಿಂಹಗಳಲ್ಲಿ ಕೊವಿಡ್-19 ಸೋಂಕು ಕಾಣಿಸಿಕೊಂಡಿದೆ. ಸೋಂಕಿತ ಸಿಂಹಗಳಲ್ಲಿ ಉಸಿರಾಟ ಸಮಸ್ಯೆ ಕೂಡ ಕಾಣಿಸಿಕೊಂಡಿದೆ. ಇದನ್ನು ಮುಂಚಿತವಾಗಿಯೇ ಗಮನಿಸಿದ ಮೃಗಾಲಯದ ಅಧಿಕಾರಿಗಳು ಏ.29ರಂದು ಸಿಂಹಗಳ ಗಂಟಲು ದ್ರವದ ಮಾದರಿ ಸಂಗ್ರಹಿಸಿ, ಆರ್ಟಿ-ಪಿಸಿಆರ್ ಪರೀಕ್ಷೆ ಮಾಡಿಸಿದ್ದರು. ಅದರ ವರದಿ ಈಗ ಬಂದಿದ್ದು ಎಲ್ಲ ಸಿಂಹಗಳಲ್ಲೂ ಕೊರೊನಾ ವೈರಾಣು ಇರುವುದು ದೃಢಪಟ್ಟಿದೆ.

ಸೋಂಕಿತ ಸಿಂಹಗಳನ್ನು ಐಸೋಲೇಟ್ ಮಾಡಲಾಗಿದ್ದು, ರೋಗ ಲಕ್ಷಣಗಳಿಗೆ ತಕ್ಕಂತೆ ದಿನೇದಿನೆ ವಿವಿಧ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೆ ಸಿಂಹಗಳು ಸದ್ಯಕ್ಕೆ ಚೆನ್ನಾಗಿ ಸ್ಪಂದಿಸುತ್ತಿವೆ. ಪಾರ್ಕ್ನಲ್ಲಿ ಇತರ ಪ್ರಾಣಿಗಳು, ಅಧಿಕಾರಿಗಳು, ಸಿಬ್ಬಂದಿಗೆ ಕೊರೊನಾ ತಗುಲುವ ಆತಂಕ ನಿರ್ಮಾಣವಾಗಿದ್ದು, ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಸ್ಯಾನಿಟೈಸ್ ಮಾಡಿಸುವುದು, ಕಡ್ಡಾಯ ಮಾಸ್ಕ್ ಧಾರಣೆಯನ್ನು ತಪ್ಪದೇ ಪಾಲಿಸಲಾಗುತ್ತಿದೆ.
ಸಾರ್ವಜನಿಕರ ವೀಕ್ಷಣೆಗೆ ಹಲವು ದಿನಗಳಿಂದ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗಿದೆ. ಮೃಗಾಲಯದ ಸಿಬ್ಬಂದಿ ಸಿಂಹಗಳ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಿದ್ದಾರೆ. ಮಾಂಸಾಹಾರಗಳನ್ನು ಶುದ್ಧೀಕರಿಸಿ, ಸೂಕ್ಷಾತ್ರ್ಮಣು ಜೀವಿಗಳ ಉಪಸ್ಥಿತಿಯ ಬಗ್ಗೆ ಕೂಲಂಕಷ ಪರಿಶೀಲನೆ ನಡೆಸಿಯೇ ನೀಡಲಾಗುತ್ತಿದೆ.
ಕಳೆದ ಏಪ್ರಿಲ್ನಲ್ಲಿ ನ್ಯೂಯಾರ್ಕ್ ನಗರದ ಮೃಗಾಲಯದಲ್ಲಿನ ಹುಲಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಮನುಷ್ಯನ ಮೂಲಕ ಪ್ರಾಣಿಗಳಿಗೆ ಕೊರೊನಾ ಸೋಂಕು ತಗುಲುತ್ತದೆ ಎಂದು ವನ್ಯಜೀವಿ ತಜ್ಞರು ಈಗಾಗಲೇ ಹಲವು ಬಾರಿ ಎಚ್ಚರಿಸಿದ್ದಾರೆ. ಕೊರೊನಾ ಸೋಂಕು ಇದ್ದರೂ ಕೆಲವರಲ್ಲಿಅದರ ಲಕ್ಷಣಗಳು ಗೋಚರಿಸುವುದಿಲ್ಲ. ಅಂಥವರಿಂದಲೇ ಪ್ರಾಣಿಗಳಿಗೆ ಕೊರೊನಾ ಶೀಘ್ರವಾಗಿ ತಗುಲುತ್ತದೆ ಎನ್ನಲಾಗಿದೆ.
Eight Asiatic lions at Hyderabad's Nehru Zoological Park have tested positive for Covid-19. This is the first case of lions or any other animals testing positive in an Indian zoo.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm