ಬ್ರೇಕಿಂಗ್ ನ್ಯೂಸ್
11-05-21 12:12 pm Headline Karnataka News Network ದೇಶ - ವಿದೇಶ
Photo credits : Representative Image
ತಿರುಪತಿ, ಮೇ 11: ವೈದ್ಯಕೀಯ ಆಮ್ಲಜನಕ ಪೂರೈಕೆಯಲ್ಲಿ ಆಗಿರುವ ವಿಳಂಬದಿಂದ 11 ಮಂದಿ ಕೊರೊನಾವೈರಸ್ ಸೋಂಕಿತರು ಪ್ರಾಣ ಬಿಟ್ಟಿರುವ ಘಟನೆ ಆಂಧ್ರ ಪ್ರದೇಶ ಚಿತ್ತೋರ್ ಜಿಲ್ಲೆಯ ತಿರುಪತಿಯಲ್ಲಿ ಇರುವ ಆಸ್ಪತ್ರೆಯಲ್ಲಿ ನಡೆದಿದೆ.
ತಿರುಪತಿಯ ರುಯಾ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ತುರ್ತು ನಿಗಾ ಘಟಕದಲ್ಲಿ ದಾಖಲಾದ ಕೊವಿಡ್-19 ರೋಗಿಗಳಿಗೆ ಸೂಕ್ತ ಸಮಯದಲ್ಲಿ ವೈದ್ಯಕೀಯ ಆಕ್ಸಿಜನ್ ಪೂರೈಸಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆ 11 ರೋಗಿಗಳು ಚಿಕಿತ್ಸೆ ಸಿಗದೇ ಪ್ರಾಣ ಬಿಟ್ಟಿದ್ದಾರೆ ಎಂದು ಚಿತ್ತೂರ್ ಜಿಲ್ಲಾಧಿಕಾರಿ ಎಂ ಹರಿ ನಾರಾಯಣ್ ತಿಳಿಸಿದ್ದಾರೆ.
ವೈದ್ಯಕೀಯ ಆಮ್ಲಜನಕದ ಸಿಲಿಂಡರ್ ಅನ್ನು ರಿ-ಲೋಡ್ ಮಾಡುವ ಸಂದರ್ಭದಲ್ಲಿ 5 ನಿಮಿಷಗಳ ಕಾಲ ವಿಳಂಬವಾಗಿದೆ. ಈ ವೇಳೆ ಒತ್ತಡ ಹೆಚ್ಚಾದ ಹಿನ್ನೆಲೆ ಸಾವು ಸಂಭವಿಸಿದೆ. ಈ ಹಿನ್ನೆಲೆ ಹೆಚ್ಚಿನ ಅಪಾಯವನ್ನು ತಪ್ಪಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗಿದೆ. ಪ್ರಸ್ತುತ ಐದು ನಿಮಿಷಗಳಲ್ಲೇ ಆಕ್ಸಿಜನ್ ಸಿಲಿಂಡರ್ ರಿ-ಲೋಡ್ ಮಾಡಲಾಗುತ್ತಿದ್ದು, ಪರಿಸ್ಥಿತಿ ಹತೋಟಿಗೆ ಬಂದಿದೆ. ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ವೈದ್ಯಕೀಯ ಆಮ್ಲಜನಕ ಪೂರೈಕೆ ವಿಳಂಬದಿಂದ 11 ಮಂದಿ ಮೃತಪಡುತ್ತಿದ್ದಂತೆ ವೈದ್ಯರು ಎಚ್ಚೆತ್ತುಕೊಂಡಿದ್ದಾರೆ. ತುರ್ತು ನಿಗಾ ಘಟಕದ ರೋಗಿಗಳ ಚಿಕಿತ್ಸೆಗೆ ಏಕಕಾಲದಲ್ಲಿ 30ಕ್ಕೂ ಹೆಚ್ಚು ವೈದ್ಯರು ಧಾವಿಸಿದ್ದಾರೆ. ರುಯಾ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ, ಸೂಕ್ತ ಸಮಯದಲ್ಲಿ ಎಲ್ಲವೂ ಸರಬರಾಜು ಆಗುತ್ತಿದೆ. ಇದೇ ಆಸ್ಪತ್ರೆಯ ಐಸಿಯು ಮತ್ತು ಆಮ್ಲಜನಕ ಸಹಿತ ಹಾಸಿಗೆಗಳಲ್ಲಿ 700 ಕೊವಿಡ್-19 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, 300 ಸೋಂಕಿತರಿಗೆ ಸಾಮಾನ್ಯ ವಾರ್ಡ್ ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ ಹರಿ ನಾರಾಯಣ್ ಹೇಳಿದ್ದಾರೆ.
ತಿರುಪತಿಯ ರುಯಾ ಆಸ್ಪತ್ರೆಯಲ್ಲಿ ನಡೆದ 11 ಕೊವಿಡ್-19 ರೋಗಿಗಳ ಸಾವಿನ ಸಿಎಂ ಜಗನ್ ಮೋಹನ್ ರೆಡ್ಡಿ ಸಂತಾಪ ಸೂಚಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸಂಪೂರ್ಣ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿರುವ ಮುಖ್ಯಮಂತ್ರಿ ಜಗನ್, ಇಂಥ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
Eleven Covid patients who were in the ICU died at a government hospital in Andhra Pradesh's Tirupati on Monday evening after the supply of medical oxygen was disrupted. The deaths have been reported at a time when India is fighting a deadly second Covid wave and shortage of medical oxygen has emerged as a key challenge.
09-09-25 09:14 pm
Bangalore Correspondent
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
09-09-25 09:38 pm
HK News Desk
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
09-09-25 08:01 pm
Mangalore Correspondent
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm