ಬ್ರೇಕಿಂಗ್ ನ್ಯೂಸ್
11-05-21 12:12 pm Headline Karnataka News Network ದೇಶ - ವಿದೇಶ
Photo credits : Representative Image
ತಿರುಪತಿ, ಮೇ 11: ವೈದ್ಯಕೀಯ ಆಮ್ಲಜನಕ ಪೂರೈಕೆಯಲ್ಲಿ ಆಗಿರುವ ವಿಳಂಬದಿಂದ 11 ಮಂದಿ ಕೊರೊನಾವೈರಸ್ ಸೋಂಕಿತರು ಪ್ರಾಣ ಬಿಟ್ಟಿರುವ ಘಟನೆ ಆಂಧ್ರ ಪ್ರದೇಶ ಚಿತ್ತೋರ್ ಜಿಲ್ಲೆಯ ತಿರುಪತಿಯಲ್ಲಿ ಇರುವ ಆಸ್ಪತ್ರೆಯಲ್ಲಿ ನಡೆದಿದೆ.
ತಿರುಪತಿಯ ರುಯಾ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ತುರ್ತು ನಿಗಾ ಘಟಕದಲ್ಲಿ ದಾಖಲಾದ ಕೊವಿಡ್-19 ರೋಗಿಗಳಿಗೆ ಸೂಕ್ತ ಸಮಯದಲ್ಲಿ ವೈದ್ಯಕೀಯ ಆಕ್ಸಿಜನ್ ಪೂರೈಸಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆ 11 ರೋಗಿಗಳು ಚಿಕಿತ್ಸೆ ಸಿಗದೇ ಪ್ರಾಣ ಬಿಟ್ಟಿದ್ದಾರೆ ಎಂದು ಚಿತ್ತೂರ್ ಜಿಲ್ಲಾಧಿಕಾರಿ ಎಂ ಹರಿ ನಾರಾಯಣ್ ತಿಳಿಸಿದ್ದಾರೆ.

ವೈದ್ಯಕೀಯ ಆಮ್ಲಜನಕದ ಸಿಲಿಂಡರ್ ಅನ್ನು ರಿ-ಲೋಡ್ ಮಾಡುವ ಸಂದರ್ಭದಲ್ಲಿ 5 ನಿಮಿಷಗಳ ಕಾಲ ವಿಳಂಬವಾಗಿದೆ. ಈ ವೇಳೆ ಒತ್ತಡ ಹೆಚ್ಚಾದ ಹಿನ್ನೆಲೆ ಸಾವು ಸಂಭವಿಸಿದೆ. ಈ ಹಿನ್ನೆಲೆ ಹೆಚ್ಚಿನ ಅಪಾಯವನ್ನು ತಪ್ಪಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗಿದೆ. ಪ್ರಸ್ತುತ ಐದು ನಿಮಿಷಗಳಲ್ಲೇ ಆಕ್ಸಿಜನ್ ಸಿಲಿಂಡರ್ ರಿ-ಲೋಡ್ ಮಾಡಲಾಗುತ್ತಿದ್ದು, ಪರಿಸ್ಥಿತಿ ಹತೋಟಿಗೆ ಬಂದಿದೆ. ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ವೈದ್ಯಕೀಯ ಆಮ್ಲಜನಕ ಪೂರೈಕೆ ವಿಳಂಬದಿಂದ 11 ಮಂದಿ ಮೃತಪಡುತ್ತಿದ್ದಂತೆ ವೈದ್ಯರು ಎಚ್ಚೆತ್ತುಕೊಂಡಿದ್ದಾರೆ. ತುರ್ತು ನಿಗಾ ಘಟಕದ ರೋಗಿಗಳ ಚಿಕಿತ್ಸೆಗೆ ಏಕಕಾಲದಲ್ಲಿ 30ಕ್ಕೂ ಹೆಚ್ಚು ವೈದ್ಯರು ಧಾವಿಸಿದ್ದಾರೆ. ರುಯಾ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ, ಸೂಕ್ತ ಸಮಯದಲ್ಲಿ ಎಲ್ಲವೂ ಸರಬರಾಜು ಆಗುತ್ತಿದೆ. ಇದೇ ಆಸ್ಪತ್ರೆಯ ಐಸಿಯು ಮತ್ತು ಆಮ್ಲಜನಕ ಸಹಿತ ಹಾಸಿಗೆಗಳಲ್ಲಿ 700 ಕೊವಿಡ್-19 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, 300 ಸೋಂಕಿತರಿಗೆ ಸಾಮಾನ್ಯ ವಾರ್ಡ್ ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ ಹರಿ ನಾರಾಯಣ್ ಹೇಳಿದ್ದಾರೆ.
ತಿರುಪತಿಯ ರುಯಾ ಆಸ್ಪತ್ರೆಯಲ್ಲಿ ನಡೆದ 11 ಕೊವಿಡ್-19 ರೋಗಿಗಳ ಸಾವಿನ ಸಿಎಂ ಜಗನ್ ಮೋಹನ್ ರೆಡ್ಡಿ ಸಂತಾಪ ಸೂಚಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸಂಪೂರ್ಣ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿರುವ ಮುಖ್ಯಮಂತ್ರಿ ಜಗನ್, ಇಂಥ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
Eleven Covid patients who were in the ICU died at a government hospital in Andhra Pradesh's Tirupati on Monday evening after the supply of medical oxygen was disrupted. The deaths have been reported at a time when India is fighting a deadly second Covid wave and shortage of medical oxygen has emerged as a key challenge.
05-12-25 07:26 pm
HK News Desk
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm