ಬ್ರೇಕಿಂಗ್ ನ್ಯೂಸ್
11-05-21 09:28 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 11: ಭಾರತದಲ್ಲಿ ಕಂಡುಬಂದಿರುವ ಕೊರೊನಾ ರೂಪಾಂತರಿ ವೈರಸ್ ಅತಿ ವೇಗವಾಗಿ ಹರಡುತ್ತಿದ್ದು, ಈಗಾಗ್ಲೇ 30ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕಂಡುಬಂದಿದೆ. ಹೀಗಾಗಿ ಬಿ 1617 ಮಾದರಿಯ ಈ ವೈರಸನ್ನು ಜಗತ್ತಿನಲ್ಲಿ ಕಳವಳ ಮೂಡಿಸಿದ ರೂಪಾಂತರಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಣೆ ಮಾಡಿದೆ.
ಭಾರತದ ಹಲವೆಡೆ ಕಂಡುಬಂದಿರುವ ಬಿ1617 ಹೆಸರಿನ ವೈರಸ್, ಮೂಲ ವೈರಸಿಗಿಂತ ತುಂಬ ವೇಗವಾಗಿ ಮತ್ತು ಸುಲಭದಲ್ಲಿ ಹರಡುತ್ತಿದೆ. 30ಕ್ಕೂ ಹೆಚ್ಚು ದೇಶಗಳಿಗೆ ಈಗಾಗ್ಲೇ ಈ ವೈರಸ್ ಹರಡಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳು ಹೇಳಿದ್ದಾರೆ.
ಈಗಾಗ್ಲೇ ಡಬ್ಲ್ಯುಎಚ್ ಓ, ಯುಕೆಯಲ್ಲಿ (ಬಿ117), ದಕ್ಷಿಣ ಆಫ್ರಿಕಾ (ಬಿ1351), ಬ್ರಿಜಿಲ್ (ಪಿ1) ದೇಶಗಳಲ್ಲಿ ಕೊರೊನಾ ವೈರಸಿನ ರೂಪಾಂತರಿಗಳನ್ನು ಪತ್ತೆ ಮಾಡಿದ್ದು ಅವುಗಳಿಗೆ ಪ್ರತ್ಯೇಕ ಹೆಸರನ್ನೂ ಇಟ್ಟಿದೆ. ಭಾರತದಲ್ಲಿ ಕಂಡುಬಂದಿರುವ ಪ್ರಭೇದ ವಿಭಿನ್ನವಾಗಿದ್ದು, ಸುಲಭದಲ್ಲಿ ಹರಡುವುದು, ಗಂಭೀರ ಪರಿಣಾಮಗಳಿಗೆ ಕಾರಣವಾಗುವುದು, ರೋಗ ನಿರೋಧಕ ಶಕ್ತಿಯನ್ನು ನಾಶ ಮಾಡುವುದು, ಚಿಕಿತ್ಸೆ ಅಥವಾ ಲಸಿಕೆಯ ಪರಿಣಾಮಗಳನ್ನು ಕುಂಠಿತಗೊಳಿಸುವುದನ್ನು ಪತ್ತೆ ಮಾಡಲಾಗಿದೆ. ಇವೆಲ್ಲ ಕಾರಣಗಳಿಂದಾಗಿ ಜಾಗತಿಕ ಮಟ್ಟದಲ್ಲಿ ತುಂಬ ವಿಭಿನ್ನ ತಳಿಯೆಂದು ಗುರುತಿಸಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಕೋವಿಡ್ 19 ಟೆಕ್ನಿಕಲ್ ಮುಖ್ಯಸ್ಥೆ ಮರಿಯಾ ವೆನ್ ಕೆರ್ಕೋವ್ ಹೇಳಿದ್ದಾರೆ.
ಹಾಗಿದ್ದರೂ, ಈಗ ಲಭ್ಯವಿರುವ ಲಸಿಕೆಗಳು ಹೊಸ ಮಾದರಿಯ ವೈರಸ್ ದಾಳಿಯ ಪರಿಣಾಮಗಳಿಂದ ಮತ್ತು ಅದರಿಂದ ಸಾವು ಸಂಭವಿಸುವುದನ್ನು ತಪ್ಪಿಸುವಷ್ಟು ಶಕ್ತವಾಗಿದೆ ಎಂದಿದ್ದಾರೆ. ಜಗತ್ತಿನಲ್ಲೀಗ ಕೋವಿಡ್ 19 ವೈರಸ್ಸಿನ ಹತ್ತು ರೂಪಾಂತರಿ ವೈರಸ್ ಗಳನ್ನು ಪತ್ತೆ ಮಾಡಲಾಗಿದೆ. ಅದರಲ್ಲಿ ಬಿ1617 ಮಾದರಿಯ ವೈರಸ್ ವಿಭಿನ್ನವಾಗಿರುವುದು ಕಂಡುಬಂದಿದೆ. ಇದರ ಬಗ್ಗೆ ಅರಿತುಕೊಳ್ಳಲು ಇನ್ನಷ್ಟು ಸಂಶೋಧನೆ ಅಗತ್ಯವಿದೆ ಎಂದಿದ್ದಾರೆ.
A World Health Organization official said Monday it is reclassifying the highly contagious triple-mutant Covid variant spreading in India as a “variant of concern,” indicating that it’s become a global health threat.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm