ಬ್ರೇಕಿಂಗ್ ನ್ಯೂಸ್
12-05-21 01:53 pm Headline Karnataka News Network ದೇಶ - ವಿದೇಶ
Photo credits : newsyolo
ಜೆರುಸಲೇಂ,,ಮೇ 12: ಪ್ಯಾಲೇಸ್ತೀನ್ದಲ್ಲಿನ ಗಾಜಾ ಮೂಲದ ಭಯೋತ್ಪಾದಕ ಸಂಘಟನೆಯು ನಡೆಸಿದ ರಾಕೆಟ್ ದಾಳಿಯಲ್ಲಿ ಇಸ್ರೇಲ್ನಲ್ಲಿ ಕೆಲಸ ಮಾಡುತ್ತಿದ್ದ 30 ವರ್ಷದ ಭಾರತೀಯ ಮಹಿಳೆ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಕೇರಳದ ಇಡುಕ್ಕಿ ಜಿಲ್ಲೆಯ ಸೌಮ್ಯ ಸಂತೋಷ್, ದಕ್ಷಿಣ ಇಸ್ರೇಲ್ನ ಕರಾವಳಿ ನಗರವಾದ ಅಶ್ಕೆಲೋನ್ನ ಮನೆಯೊಂದರಲ್ಲಿ ವೃದ್ಧರೊಬ್ಬರಿಗೆ ಆರೈಕೆ ಮಾಡುವ ಕೆಲಸ ಮಾಡುತ್ತಿದ್ದರು.
ಗಾಜಾ ಮೂಲದ ಉಗ್ರರು ಸೋಮವಾರ ಸಂಜೆಯಿಂದ ಇಸ್ರೇಲ್ ಮೇಲೆ ನೂರಾರು ರಾಕೆಟ್ ದಾಳಿ ನಡೆಸಿದ್ದು, ಮಂಗಳವಾರ ರಾತ್ರಿ 9 ಗಂಟೆಯ ವರೆಗೆ ದಾಳಿಯಲ್ಲಿ 31 ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ.
ಇದಕ್ಕೆ ಪ್ರತಿಯಾಗಿ ಹಮಾಸ್ ಹಾಗೂ ಇಸ್ಲಾಮಿಕ್ ಜಿಹಾದಿ ಉಗ್ರರ ನೆಲೆ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅರಬ್-ಯಹೂದಿ ದೇಶಗಳಲ್ಲಿ ಭಾರಿ ಹಿಂಸಾಚಾರ ಹಾಗೂ ಉದ್ವಿಗ್ನತೆ ಹೆಚ್ಚಿದ ಹಿನ್ನೆಲೆಯಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಲಾಡ್ ಪ್ರದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.
ಭಾರತೀಯ ಮೂಲದ ಮಹಿಳೆ ಕಳೆದ ಏಳು ವರ್ಷಗಳಿಂದ ಇಸ್ರೇಲ್ನಲ್ಲಿ ವಾಸಿಸುತ್ತಿದ್ದರು ಎಂದು ಹೇಳಲಾಗಿದೆ. ಕೇರಳದಲ್ಲಿರುವ ಪತಿ ಹಾಗೂ ಏಳು ವರ್ಷದ ಮಗನನ್ನು ಅಗಲಿದ್ದಾರೆ.
ಉಗ್ರರು ನಡೆಸಿದ ರಾಕೆಟ್ ದಾಳಿಯು ನೇರವಾಗಿ ವೃದ್ಧೆಯ ಮನೆಗೆ ಅಪ್ಪಳಿಸಿತ್ತು. ಈ ವೇಳೆ 80 ವರ್ಷದ ವೃದ್ಧೆಯ ಆರೈಕೆ ಮಾಡುತ್ತಿದ್ದ ಕೇರಳ ಮೂಲದ ಮಹಿಳೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆಗೆ ಸ್ಪಂದಿಸಿದೇ ಕೊನೆಯುಸಿರೆಳೆದಿದ್ದಾರೆ.
ಘಟನೆ ಸಂಭವಿಸಿದಾಗ ಸೌಮ್ಯ ತನ್ನ ಪತಿ ಸಂತೋಷ್ ಅವರೊಂದಿಗೆ ವಿಡಿಯೊ ಕರೆ ಮೂಲಕ ಮಾತನಾಡುತ್ತಿದ್ದರು ಎಂದು ಕೇರಳದಲ್ಲಿರುವ ಕುಟುಂಬ ಮೂಲಗಳು ತಿಳಿಸಿವೆ.
ಕೇರಳದ ಪಾಲಾ ಕ್ಷೇತ್ರದ ಶಾಸಕ ಮಾಣಿ ಸಿ ಕಾಪ್ಪನ್, ಘಟನೆಯನ್ನು ಖಂಡಿಸಿದ್ದು, ಇಸ್ರೇಲ್ನಲ್ಲಿ ಕೆಲಸ ಮಾಡುತ್ತಿರುವ ಸಾವಿರಾರು ಮಲಯಾಳಿಗರ ರಕ್ಷಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತುರ್ತಾಗಿ ನೆರವಾಗಬೇಕು ಎಂದು ಆಗ್ರಹಿಸಿದ್ದಾರೆ.
ಅತ್ತ ಭಾರತದ ಇಸ್ರೇಲ್ ರಾಯಭಾರಿ ರಾನ್ ಮಲ್ಕಾ, ಮಹಿಳೆಯ ಸಾವಿಗೆ ಸಂತಾಪವನ್ನು ಸೂಚಿಸಿದ್ದಾರೆ.
A Kerala woman working in Israel was killed allegedly in a Palestinian rocket strike on Tuesday, her family members said. They said the rocket fell on the residence of 31-year old Soumya in the city of Ashkelon while she was talking to her husband Santhosh, who is in Kerala, over a video call in the evening.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm