ಬ್ರೇಕಿಂಗ್ ನ್ಯೂಸ್
12-05-21 01:53 pm Headline Karnataka News Network ದೇಶ - ವಿದೇಶ
Photo credits : newsyolo
ಜೆರುಸಲೇಂ,,ಮೇ 12: ಪ್ಯಾಲೇಸ್ತೀನ್ದಲ್ಲಿನ ಗಾಜಾ ಮೂಲದ ಭಯೋತ್ಪಾದಕ ಸಂಘಟನೆಯು ನಡೆಸಿದ ರಾಕೆಟ್ ದಾಳಿಯಲ್ಲಿ ಇಸ್ರೇಲ್ನಲ್ಲಿ ಕೆಲಸ ಮಾಡುತ್ತಿದ್ದ 30 ವರ್ಷದ ಭಾರತೀಯ ಮಹಿಳೆ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಕೇರಳದ ಇಡುಕ್ಕಿ ಜಿಲ್ಲೆಯ ಸೌಮ್ಯ ಸಂತೋಷ್, ದಕ್ಷಿಣ ಇಸ್ರೇಲ್ನ ಕರಾವಳಿ ನಗರವಾದ ಅಶ್ಕೆಲೋನ್ನ ಮನೆಯೊಂದರಲ್ಲಿ ವೃದ್ಧರೊಬ್ಬರಿಗೆ ಆರೈಕೆ ಮಾಡುವ ಕೆಲಸ ಮಾಡುತ್ತಿದ್ದರು.
ಗಾಜಾ ಮೂಲದ ಉಗ್ರರು ಸೋಮವಾರ ಸಂಜೆಯಿಂದ ಇಸ್ರೇಲ್ ಮೇಲೆ ನೂರಾರು ರಾಕೆಟ್ ದಾಳಿ ನಡೆಸಿದ್ದು, ಮಂಗಳವಾರ ರಾತ್ರಿ 9 ಗಂಟೆಯ ವರೆಗೆ ದಾಳಿಯಲ್ಲಿ 31 ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ.

ಇದಕ್ಕೆ ಪ್ರತಿಯಾಗಿ ಹಮಾಸ್ ಹಾಗೂ ಇಸ್ಲಾಮಿಕ್ ಜಿಹಾದಿ ಉಗ್ರರ ನೆಲೆ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅರಬ್-ಯಹೂದಿ ದೇಶಗಳಲ್ಲಿ ಭಾರಿ ಹಿಂಸಾಚಾರ ಹಾಗೂ ಉದ್ವಿಗ್ನತೆ ಹೆಚ್ಚಿದ ಹಿನ್ನೆಲೆಯಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಲಾಡ್ ಪ್ರದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.
ಭಾರತೀಯ ಮೂಲದ ಮಹಿಳೆ ಕಳೆದ ಏಳು ವರ್ಷಗಳಿಂದ ಇಸ್ರೇಲ್ನಲ್ಲಿ ವಾಸಿಸುತ್ತಿದ್ದರು ಎಂದು ಹೇಳಲಾಗಿದೆ. ಕೇರಳದಲ್ಲಿರುವ ಪತಿ ಹಾಗೂ ಏಳು ವರ್ಷದ ಮಗನನ್ನು ಅಗಲಿದ್ದಾರೆ.

ಉಗ್ರರು ನಡೆಸಿದ ರಾಕೆಟ್ ದಾಳಿಯು ನೇರವಾಗಿ ವೃದ್ಧೆಯ ಮನೆಗೆ ಅಪ್ಪಳಿಸಿತ್ತು. ಈ ವೇಳೆ 80 ವರ್ಷದ ವೃದ್ಧೆಯ ಆರೈಕೆ ಮಾಡುತ್ತಿದ್ದ ಕೇರಳ ಮೂಲದ ಮಹಿಳೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆಗೆ ಸ್ಪಂದಿಸಿದೇ ಕೊನೆಯುಸಿರೆಳೆದಿದ್ದಾರೆ.
ಘಟನೆ ಸಂಭವಿಸಿದಾಗ ಸೌಮ್ಯ ತನ್ನ ಪತಿ ಸಂತೋಷ್ ಅವರೊಂದಿಗೆ ವಿಡಿಯೊ ಕರೆ ಮೂಲಕ ಮಾತನಾಡುತ್ತಿದ್ದರು ಎಂದು ಕೇರಳದಲ್ಲಿರುವ ಕುಟುಂಬ ಮೂಲಗಳು ತಿಳಿಸಿವೆ.
ಕೇರಳದ ಪಾಲಾ ಕ್ಷೇತ್ರದ ಶಾಸಕ ಮಾಣಿ ಸಿ ಕಾಪ್ಪನ್, ಘಟನೆಯನ್ನು ಖಂಡಿಸಿದ್ದು, ಇಸ್ರೇಲ್ನಲ್ಲಿ ಕೆಲಸ ಮಾಡುತ್ತಿರುವ ಸಾವಿರಾರು ಮಲಯಾಳಿಗರ ರಕ್ಷಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತುರ್ತಾಗಿ ನೆರವಾಗಬೇಕು ಎಂದು ಆಗ್ರಹಿಸಿದ್ದಾರೆ.
ಅತ್ತ ಭಾರತದ ಇಸ್ರೇಲ್ ರಾಯಭಾರಿ ರಾನ್ ಮಲ್ಕಾ, ಮಹಿಳೆಯ ಸಾವಿಗೆ ಸಂತಾಪವನ್ನು ಸೂಚಿಸಿದ್ದಾರೆ.
A Kerala woman working in Israel was killed allegedly in a Palestinian rocket strike on Tuesday, her family members said. They said the rocket fell on the residence of 31-year old Soumya in the city of Ashkelon while she was talking to her husband Santhosh, who is in Kerala, over a video call in the evening.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm