ಬ್ರೇಕಿಂಗ್ ನ್ಯೂಸ್
27-08-20 09:47 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 27: ಕೊರೋನಾ ವೈರಸ್ ಬಿಕ್ಕಟ್ಟು ಸೃಷ್ಟಿಯಾದ ಹಿನ್ನೆಲೆಯಲ್ಲಿ ದೇಶಾದ್ಯಂತ ಜಿಎಸ್ಟಿ ತೆರಿಗೆ ಸಂಗ್ರಹದ ಮೇಲೆ ಪರಿಣಾಮ ಬಿದ್ದಿದ್ದು, ರಾಜ್ಯಗಳಿಗೆ ಹೆಚ್ಚಿನ ಜಿಎಸ್ಟಿ ಪರಿಹಾರ ಒದಗಿಸಲು ಸಾಧ್ಯವಾಗುವುದಿಲ್ಲ ಎಂದು ಕೇಂದ್ರ ಹಣಕಾಸು ಕಾರ್ಯದರ್ಶಿ ತಿಳಿಸಿದ್ದಾರೆ. ಇಂದು ಆನ್ಲೈನ್ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆದ 41ನೇ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಈ ಮಾಹಿತಿ ನೀಡಲಾಯಿತು.
2019-20ನೇ ಹಣಕಾಸು ವರ್ಷದಲ್ಲಿ ರಾಜ್ಯಗಳಿಗೆ ಈಗಾಗಲೇ 1.65 ಲಕ್ಷ ಕೋಟಿಗೂ ಹೆಚ್ಚು ಜಿಎಸ್ಟಿ ಪರಿಹಾರ ಹಣ ನೀಡಲಾಗಿದೆ. 97 ಸಾವಿರ ಕೋಟಿ ರೂ ಪರಿಹಾರ ಹಣದ ಕೊರತೆ ಬೀಳುವ ಅಂದಾಜು ಇದೆ ಎಂದು ಕೇಂದ್ರ ಹಣಕಾಸು ಇಲಾಖೆಯ ಅಧಿಕಾರಿಗಳು ತಿಳಿಸಿದರು.
ಕೇಂದ್ರ ಸರ್ಕಾರದ ಪ್ರಕಾರ ಈ ವರ್ಷ ಜಿಎಸ್ಟಿ ಸಂಗ್ರಹದಲ್ಲಿ 2.35 ಲಕ್ಷ ಕೋಟಿ ಕೊರತೆ ಬೀಳುತ್ತಿದೆ. ಜಿಎಸ್ಟಿ ಸಂಗ್ರಹದಲ್ಲಿ ವ್ಯತ್ಯವಾದರೆ ಸರ್ಕಾರವೇ ಭರ್ತಿ ಮಾಡಬೇಕೆಂದು ಬಿಜೆಪಿಯೇತರ ಪಕ್ಷಗಳ ಆಡಳಿತ ಇರುವ ರಾಜ್ಯಗಳು ಈ ಸಂದರ್ಭದಲ್ಲಿ ಒತ್ತಾಯಿಸಿದವು. ಆದರೆ, ಬಿಕ್ಕಟ್ಟಿನಿಂದ ಜಿಎಸ್ಟಿ ಸಂಗ್ರಹಕ್ಕೆ ಧಕ್ಕೆಯಾಗಿದ್ದರೆ ರಾಜ್ಯಗಳಿಗೆ ಪೂರ್ಣ ಜಿಎಸ್ಟಿ ಪಾಲು ಕೊಡಬೇಕೆಂಬ ನಿಯಮ ಇಲ್ಲವೆಂದು ಕೇಂದ್ರ ಸರ್ಕಾರ ಕಾನೂನು ಉಲ್ಲೇಖಿಸಿ ಸಭೆಯಲ್ಲಿ ಸ್ಪಷ್ಟಪಡಿಸಿತು.
ಎಲ್ಲಾ ರಾಜ್ಯಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದ ಈ ಜಿಎಸ್ಟಿ ಸಭೆಯಲ್ಲಿ ಆದಾಯ ಕೊರತೆ ನೀಗಿಸುವ ನಿಟ್ಟಿನಲ್ಲಿ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚೆ ಮಾಡಲಾಯಿತು. ತೆರಿಗೆ ಸಂಗ್ರಹದಲ್ಲಿ ಕೊರತೆಯಾಗಿದ್ದರೆ ರಾಜ್ಯ ಸರ್ಕಾರಗಳು ಹಣವನ್ನು ಸಾಲವಾಗಿ ಪಡೆಯಬಹುದು, ಸೆಸ್ ಮೊದಲಾದ ತೆರಿಗೆ ದರ ಏರಿಸಿ ಆದಾಯ ಮಾಡಬಹುದು ಎಂಬಿತ್ಯಾದಿ ಸಲಹೆಗಳು ಕೆಲ ರಾಜ್ಯಗಳಿಂದ ವ್ಯಕ್ತವಾದವು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm