ಬ್ರೇಕಿಂಗ್ ನ್ಯೂಸ್
14-05-21 10:35 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಮೇ 14: ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಮೇ 23ರವರೆಗೆ ಲಾಕ್ಡೌನ್ ವಿಸ್ತರಿಸಲಾಗಿದೆ.
ಈ ಕುರಿತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಘೋಷಿಸಿದ್ದಾರೆ. ಕೇರಳದಲ್ಲಿ ಕಳೆದ ಕೆಲವು ವಾರಗಳಿಂದ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ. ಗುರುವಾರ ಅಲ್ಲಿ 39,955 ಹೊಸ ಪ್ರಕರಣಗಳು ದಾಖಲಾಗಿದ್ದು, 97 ಮಂದಿ ಮೃತಪಟ್ಟಿದ್ದರು.
ಕೊರೊನಾ ಬಿಕ್ಕಟ್ಟು ಉಲ್ಬಣಿಸಿದ್ದು, ರಾಜ್ಯದ ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ ಕೊರತೆ ಎದುರಾಗಿರುವುದಾಗಿ ಇತ್ತೀಚೆಗಷ್ಟೇ ವರದಿಯಾಗಿತ್ತು.ಈ ಹಿಂದೆ ಮೇ 8 ರಿಂದ ಮೇ 16ರವರೆಗೆ ಲಾಕ್ಡೌನ್ ಘೋಷಿಸಲಾಗಿತ್ತು ಅದನ್ನು 23ರವರೆಗೆ ವಿಸ್ತರಿಸಲಾಗಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,43,144 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 4,000 ಮಂದಿ ಕೊವಿಡ್-19 ಸೋಂಕಿತರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದು, 3,44,776 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು2,40,46,809 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,00,79,599 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಈವರೆಗೂ 2,62,317 ಜನರು ಬಲಿಯಾಗಿದ್ದಾರೆ. ಇದರ ಹೊರತಾಗಿ 37,04,893 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
Kerala has extended the COVID-19 lockdown by a week till May 23, with four districts to be put under a "triple lockdown" with more stringent restrictions than the other 10. These districts are Thiruvananthapuram, Thrissur, Ernakulam, and Malappuram.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm