ಬ್ರೇಕಿಂಗ್ ನ್ಯೂಸ್
14-05-21 10:35 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಮೇ 14: ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಮೇ 23ರವರೆಗೆ ಲಾಕ್ಡೌನ್ ವಿಸ್ತರಿಸಲಾಗಿದೆ.
ಈ ಕುರಿತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಘೋಷಿಸಿದ್ದಾರೆ. ಕೇರಳದಲ್ಲಿ ಕಳೆದ ಕೆಲವು ವಾರಗಳಿಂದ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ. ಗುರುವಾರ ಅಲ್ಲಿ 39,955 ಹೊಸ ಪ್ರಕರಣಗಳು ದಾಖಲಾಗಿದ್ದು, 97 ಮಂದಿ ಮೃತಪಟ್ಟಿದ್ದರು.
ಕೊರೊನಾ ಬಿಕ್ಕಟ್ಟು ಉಲ್ಬಣಿಸಿದ್ದು, ರಾಜ್ಯದ ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ ಕೊರತೆ ಎದುರಾಗಿರುವುದಾಗಿ ಇತ್ತೀಚೆಗಷ್ಟೇ ವರದಿಯಾಗಿತ್ತು.ಈ ಹಿಂದೆ ಮೇ 8 ರಿಂದ ಮೇ 16ರವರೆಗೆ ಲಾಕ್ಡೌನ್ ಘೋಷಿಸಲಾಗಿತ್ತು ಅದನ್ನು 23ರವರೆಗೆ ವಿಸ್ತರಿಸಲಾಗಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,43,144 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 4,000 ಮಂದಿ ಕೊವಿಡ್-19 ಸೋಂಕಿತರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದು, 3,44,776 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು2,40,46,809 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,00,79,599 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಈವರೆಗೂ 2,62,317 ಜನರು ಬಲಿಯಾಗಿದ್ದಾರೆ. ಇದರ ಹೊರತಾಗಿ 37,04,893 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
Kerala has extended the COVID-19 lockdown by a week till May 23, with four districts to be put under a "triple lockdown" with more stringent restrictions than the other 10. These districts are Thiruvananthapuram, Thrissur, Ernakulam, and Malappuram.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm