ಬ್ರೇಕಿಂಗ್ ನ್ಯೂಸ್
14-05-21 10:35 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಮೇ 14: ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಮೇ 23ರವರೆಗೆ ಲಾಕ್ಡೌನ್ ವಿಸ್ತರಿಸಲಾಗಿದೆ.
ಈ ಕುರಿತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಘೋಷಿಸಿದ್ದಾರೆ. ಕೇರಳದಲ್ಲಿ ಕಳೆದ ಕೆಲವು ವಾರಗಳಿಂದ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ. ಗುರುವಾರ ಅಲ್ಲಿ 39,955 ಹೊಸ ಪ್ರಕರಣಗಳು ದಾಖಲಾಗಿದ್ದು, 97 ಮಂದಿ ಮೃತಪಟ್ಟಿದ್ದರು.
ಕೊರೊನಾ ಬಿಕ್ಕಟ್ಟು ಉಲ್ಬಣಿಸಿದ್ದು, ರಾಜ್ಯದ ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ ಕೊರತೆ ಎದುರಾಗಿರುವುದಾಗಿ ಇತ್ತೀಚೆಗಷ್ಟೇ ವರದಿಯಾಗಿತ್ತು.ಈ ಹಿಂದೆ ಮೇ 8 ರಿಂದ ಮೇ 16ರವರೆಗೆ ಲಾಕ್ಡೌನ್ ಘೋಷಿಸಲಾಗಿತ್ತು ಅದನ್ನು 23ರವರೆಗೆ ವಿಸ್ತರಿಸಲಾಗಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,43,144 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 4,000 ಮಂದಿ ಕೊವಿಡ್-19 ಸೋಂಕಿತರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದು, 3,44,776 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು2,40,46,809 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,00,79,599 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಈವರೆಗೂ 2,62,317 ಜನರು ಬಲಿಯಾಗಿದ್ದಾರೆ. ಇದರ ಹೊರತಾಗಿ 37,04,893 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
Kerala has extended the COVID-19 lockdown by a week till May 23, with four districts to be put under a "triple lockdown" with more stringent restrictions than the other 10. These districts are Thiruvananthapuram, Thrissur, Ernakulam, and Malappuram.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm