ಬ್ರೇಕಿಂಗ್ ನ್ಯೂಸ್
15-05-21 12:24 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಮೇ 15: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ 'ತೌಕ್ತೆ' ಚಂಡಮಾರುತ ರಚನೆ ಆಗಿದ್ದು, ಇದರ ಚಲನೆ ಕೇರಳದ ಕರಾವಳಿಗೆ ಸಮಾನಾಂತರವಾಗಿ ಉತ್ತರದ ಕಡೆಗೆ ಬೀಸುತ್ತಿದೆ.
ಉತ್ತರ ಕೇರಳ ಮತ್ತು ಉತ್ತರ ಕರ್ನಾಟಕದ ನಡುವೆ ತಲುಪುವಾಗ ಸೈಕ್ಲೋನ್ ಚಂಡಮಾರುತವಾಗಿ ಬದಲಾಗಳಿದ್ದು, ಸಮುದ್ರ ಪರಿಸ್ಥಿತಿಗಳನ್ನು ಪರಿಗಣಿಸಿ ಕೇರಳ ಕರಾವಳಿಯ ಎಲ್ಲ ಮೀನುಗಾರಿಕೆ ಚಟುವಟಿಕೆಗಳನ್ನು ಕೇರಳ ಸರ್ಕಾರ ನಿಲ್ಲಿಸಿದೆ.
ಕೇರಳವು ಚಂಡಮಾರುತದ ನೇರ ಪಥದಲ್ಲಿ ಬರದಿದ್ದರೂ, ಕೇರಳದ ಮೇಲೆ ಇದು ಹೆಚ್ಚು ಪರಿಣಾಮ ಬೀರಲಿದೆ. ಕೇರಳದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆ ವಿವಿಧ ಜಿಲ್ಲೆಗಳಲ್ಲಿ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.




ಚಂಡಮಾರುತ ತೀವ್ರಗೊಂಡ ನಂತರ ಗುಜರಾತ್ ಕಡೆಗೆ ಸಾಗುವಾಗ ಚಂಡಮಾರುತದ ಪಥವು ಕೇರಳ ಕರಾವಳಿಗೆ ಸಮಾನಾಂತರವಾಗಲಿದೆ. ಇನ್ನು ಈ ಚಂಡಮಾರುತದಿಂದ 24 ಗಂಟೆಗಳಲ್ಲಿ 204 ಮಿ.ಮೀ ಮಳೆಯಾಗುವ ನಿರೀಕ್ಷೆಯಿದೆ. ಕೇರಳದ ಒಂಬತ್ತು ಜಿಲ್ಲೆಗಳಲ್ಲಿ ಸಹ ಭಾರೀ ಗಾಳಿ ಬೀಸಲಿದೆ ಎಂದು ಐಎಂಡಿ ತಿಳಿಸಿದೆ. ಗಂಟೆಗೆ 60-70 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯು ತಿರುವನಂತಪುರಂ, ಕೊಲ್ಲಂ, ಪಥನಮತ್ತಟ್ಟ, ಆಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್ ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ಅಪ್ಪಳಿಸಬಹುದು ಎಂದು ತಿಳಿಸಲಾಗಿದೆ.
ತಿರುವನಂತಪುರಂ, ಕೊಲ್ಲಂ, ಇಡುಕ್ಕಿ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ಈವರೆಗೆ 87 ಜನರನ್ನು ಸ್ಥಳಾಂತರಿಸಿ ರಾಜ್ಯದ ನಾಲ್ಕು ಶಿಬಿರಗಳಲ್ಲಿ ಇರಿಸಲಾಗಿದೆ ಎಂದು ಭೂ ಕಂದಾಯ ಆಯುಕ್ತರು ಮಾಹಿತಿ ನೀಡಿದ್ದಾರೆ. ತಿರುವನಂತಪುರಂನಲ್ಲಿ 51 ಜನರನ್ನು ಸ್ಥಳಾಂತರಿಸಿ ಶಿಬಿರದಲ್ಲಿ ವಸತಿ ಕಲ್ಪಿಸಲಾಗಿದ್ದು, ಕೊಲ್ಲಂ ಶಿಬಿರದಲ್ಲಿ 24 ಜನರಿದ್ದಾರೆ. ಇಡುಕ್ಕಿಯಲ್ಲಿ ನಾಲ್ಕು ಮತ್ತು ಎರ್ನಾಕುಲಂ ವಿಪತ್ತು ಪರಿಹಾರ ಶಿಬಿರಗಳಲ್ಲಿ ಎಂಟು ಜನರಿದ್ದಾರೆ. ಇನ್ನು ಕರ್ನಾಟಕದ ಕರಾವಳಿ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲೂ ಈ ಚಂಡಮಾರುತ ತನ್ನ ಪ್ರಭಾವ ಬೀರಲಿದ್ದು, ಎರಡೂ ಸರ್ಕಾರಗಳು ಕೂಡ ಮುನ್ನೆಚ್ಚರಿಕೆ ನೀಡಿದೆ.
The Arabian sea depression is very likely to intensify into a “very severe cyclonic storm” with a wind speed of 150-160 kilometres per hour gusting up to 175 kmph, Cyclone Warning Division of the IMD said. It is likely to reach Gujarat coast by the morning of May 18.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm