ಬ್ರೇಕಿಂಗ್ ನ್ಯೂಸ್
16-05-21 09:14 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 16: ಫೇಸ್ಬುಕ್ ನಲ್ಲಿ ಪರಿಚಯವಾಗಿದ್ದ ಯುವಕನ ಪ್ರೇಮ ಪಾಶಕ್ಕೆ ಸಿಲುಕಿದ ಯುವತಿ, ಆತ ಸೇರಿದಂತೆ 25 ಮಂದಿಯಿಂದ ಸರಣಿ ಅತ್ಯಾಚಾರಕ್ಕೀಡಾದ ಘಟನೆ ರಾಜಧಾನಿ ದೆಹಲಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ದೆಹಲಿಯಲ್ಲಿ ಡಾಮೆಸ್ಟಿಕ್ ಕೇರಿಯರ್ ನಲ್ಲಿ ಉದ್ಯೋಗದಲ್ಲಿದ್ದ ಯುವತಿಗೆ ಕಳೆದ ಜನವರಿಯಲ್ಲಿ 23 ವರ್ಷದ ಸಾಗರ್ ಎನ್ನುವ ಯುವಕ ಫೇಸ್ಬುಕ್ ನಲ್ಲಿ ಪರಿಚಯ ಆಗಿದ್ದ. ಪರಿಚಯ ಸ್ನೇಹಕ್ಕೆ ತಿರುಗಿ ಇಬ್ಬರೂ ಫೋನಲ್ಲಿ ಸಂಭಾಷಣೆ ನಡೆಸುತ್ತಿದ್ದರು. ಈ ವೇಳೆ ಸಾಗರ್ ಯುವತಿಯನ್ನು ಮದುವೆಯಾಗುವ ಪ್ರಸ್ತಾಪ ಇಟ್ಟಿದ್ದು , ತನ್ನ ಹೆತ್ತವರಿಗೆ ಪರಿಚಯ ಮಾಡುವುದಾಗಿ ಹೇಳಿ ಮನೆಗೆ ಬರಲು ಹೇಳಿದ್ದಾನೆ.
ಹೀಗಾಗಿ ಕಳೆದ ಮೇ 3ರಂದು ಯುವತಿ ಆತ ಹೇಳಿದ್ದ ವಿಳಾಸದ ಹೋದಾಲ್ ನಲ್ಲಿರುವ ರಾಮಗರ್ ಎಂಬಲ್ಲಿಗೆ ತೆರಳಿದ್ದಳು. ರಾಮಗರ್ ಗ್ರಾಮದಲ್ಲಿ ಸಾಗರ್ ಭೇಟಿಯಾಗಿದ್ದು, ಅಲ್ಲಿನ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಆತನ ಸೋದರರು ಮತ್ತು ಇತರ ಕೆಲವರು ಸೇರಿ ಗುಂಪಾಗಿ ಮದ್ಯ ಸೇವನೆ ಮಾಡುತ್ತಿದ್ದರು. ಬಳಿಕ ಸಾಗರ್ ಯುವತಿ ವಿರುದ್ಧ ತಿರುಗಿ ಬಿದ್ದಿದ್ದು ಅವರೆದುರಲ್ಲೇ ಅತ್ಯಾಚಾರ ನಡೆಸಿದ್ದಾನೆ. ಇತರ ಕೆಲವರು ಕೂಡ ಸರಣಿಯಾಗಿ ಅತ್ಯಾಚಾರ ನಡೆಸಿದ್ದಾರೆ.
ಮರುದಿನದ ವರೆಗೂ ಆಕೆಯನ್ನು ಅಲ್ಲಿ ಕೂಡಿ ಹಾಕಿದ್ದು, ಬಳಿಕ ಆಕಾಶ್ ಎನ್ನುವ ಗುಜರಿ ವ್ಯಾಪಾರಿ ಬಳಿ ಕರೆದೊಯ್ದಿದ್ದಾನೆ. ಅಲ್ಲಿಯೂ ಐದಾರು ಮಂದಿ ಸೇರಿ ಯುವತಿಯನ್ನು ಭೋಗಿಸಿದ್ದಾರೆ. ಸರಣಿ ಅತ್ಯಾಚಾರದಿಂದ ಯುವತಿಯ ಆರೋಗ್ಯ ಹದಗೆಟ್ಟಿದ್ದು, ಬಳಿಕ ಐವರು ಸೇರಿ ಆಕೆಯನ್ನು ರಸ್ತೆ ಬದಿ ಎಸೆದು ಹೋಗಿದ್ದರು.
ತೀವ್ರ ಬಳಲಿದ್ದ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿದ ಬಳಿಕ ಹಸನ್ಪುರ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾಳೆ. ದೂರು ನೀಡುವಾಗ ಇಷ್ಟು ತಡವಾಗಿದ್ದು ಯಾಕೆಂದು ಪೊಲೀಸರು ಕೇಳಿದ್ದಕ್ಕೆ, ನಡೆದ ಕತೆಯನ್ನು ವಿವರಿಸಿದ್ದಾಳೆ. ಆರೋಗ್ಯ ಹದಗೆಟ್ಟಿದ್ದರಿಂದ ದೂರು ಕೊಡಲು ಸಾಧ್ಯವಾಗಲಿಲ್ಲ ಎಂದಿದ್ದಾಳೆ. ದೂರು ಸ್ವೀಕರಿಸಿದ ಹಸನ್ ಪುರ ಠಾಣೆಯ ಪೊಲೀಸರು ಆರೋಪಿ ಸಾಗರ್ ನನ್ನು ಬಂಧಿಸಿದ್ದಾರೆ. ಇತರ ಆರೋಪಿಗಳನ್ನು ಬಂಧಿಸಲು ಬಲೆ ಬೀಸಿದ್ದಾರೆ.
A woman from Delhi was allegedly lured into a forest by her Facebook friend and was gang-raped by 25 men through the night and morning on May 3. The woman approached the cops 9 days after the incident took place when she eventually gathered the strength to narrate her ordeal.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm