ಬ್ರೇಕಿಂಗ್ ನ್ಯೂಸ್
18-05-21 10:58 am Headline Karnataka News Network ದೇಶ - ವಿದೇಶ
Photo credits : Public TV
ನವದೆಹಲಿ, ಮೇ 18: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ವೈದ್ಯಕೀಯ ಸಂಘದ(ಐಎಂಎ) ಮಾಜಿ ರಾಷ್ಟ್ರೀಯ ಅಧ್ಯಕ್ಷ ಡಾ.ಕೆ.ಕೆ ಅಗರ್ವಾಲ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ 11.30ಕ್ಕೆ ಡಾ.ಕೆ.ಕೆ ಅಗರ್ವಾಲ್ ಕೊನೆಯುಸಿರೆಳೆದಿದ್ದಾರೆ.
ಕೊರೊನಾ ಪಾಸಿಟಿವ್ ಆಗಿದ್ದ ಡಾ.ಕೆ.ಕೆ ಅಗರ್ವಾಲ್(62) ಕಳೆದ ಕೆಲವು ದಿನಗಳಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೆಂಟಿಲೇಟರ್ ಅಳವಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಸೋಮವಾರ ರಾತ್ರಿ ನಿಧನರಾಗಿದ್ದಾರೆ.
ಡಾ.ಕೆ.ಕೆ ಅಗರ್ವಾಲ್ ವೈದ್ಯರಾಗಿದ್ದಾಗಿನಿಂದಲೂ ತಮ್ಮ ಜೀವನವನ್ನು ಸಾರ್ವಜನಿಕರ ಹಿತಕ್ಕಾಗಿ ಮೀಸಲಿಟ್ಟಿದ್ದರು. ಸಾಮಾನ್ಯ ಜನರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ ಜನ ಸಾಮಾನ್ಯರಿಗೆ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ನಿರಂತರ ಪ್ರಯತ್ನಗಳನ್ನು ಮಾಡುತ್ತಿದ್ದರು. ಇದಕ್ಕಾಗಿ ಹಲವಾರು ವೀಡಿಯೋ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದರು. ಜಾಲತಾಣದ ಮೂಲಕ 100 ಮಿಲಿಯನ್ ಜನರನ್ನು ತಲುಪಿದ್ದಲ್ಲದೆ, ತಮ್ಮ ಹೆಸರನ್ನು ಭಾರತ ಮಾತ್ರವಲ್ಲದೆ ಜಗದಗಲ ವ್ಯಾಪಿಸಿದ್ದರು.
ಖ್ಯಾತ ಹೃದಯ ತಜ್ಞರಾಗಿದ್ದ ಅಗರ್ವಾಲ್ ಹಾರ್ಟ್ ಕೇರ್ ಫೌಂಡೇಶನ್ ಅಧ್ಯಕ್ಷರಾಗಿದ್ದರು. 2010 ರಲ್ಲಿ ಅಗರ್ವಾಲ್ ಅವರನ್ನು ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಲಾಗಿತ್ತು.
KK Aggarwal, a former president of the Indian Medical Association and a prominent face of the medical fraternity in the country, died last night of Covid. The Padma Shri award winner had been on ventilator support at Delhi's AIIMS hospital for the past few days, according to his family.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm