ಬ್ರೇಕಿಂಗ್ ನ್ಯೂಸ್
18-05-21 03:17 pm Headline Karnataka News Network ದೇಶ - ವಿದೇಶ
Photo credits : The Indian Express
ಚಂಡೀಗಢ, ಮೇ 18: ಲೀವಿಂಗ್ ರಿಲೇಶನ್ ಸಂಬಂಧಗಳು ನೈತಿಕವಾಗಿ ಮತ್ತು ಸಾಮಾಜಿಕ ನೆಲೆಯಲ್ಲಿ ಒಪ್ಪತಕ್ಕದ್ದಲ್ಲ ಮತ್ತು ಸ್ವೀಕಾರಾರ್ಹವೂ ಅಲ್ಲ ಎಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಹುಡುಗ- ಹುಡುಗಿ ಮನೆ ಬಿಟ್ಟು ಓಡಿ ಹೋಗಿದ್ದಲ್ಲದೆ, ಮದುವೆಯಾಗುವ ಮುನ್ನ ಜೊತೆಗೆ ಬಾಳುವುದಕ್ಕೆ ಅನುಮತಿ ನೀಡಬೇಕೆಂದು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಈ ರೀತಿಯ ತೀರ್ಪು ನೀಡಿದೆ. ದೇಶದಲ್ಲಿ ಲೀವಿಂಗ್ ರಿಲೇಶನ್ ಸಂಬಂಧಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಹೈಕೋರ್ಟ್ ಇಂತಹ ಅಭಿಪ್ರಾಯ ವ್ಯಕ್ತಪಡಿಸಿದ್ದು ಮಹತ್ವ ಪಡೆದುಕೊಂಡಿದೆ.
ಪಂಜಾಬ್ ಪ್ರಾಂತ್ಯದ ಗುಲ್ಝಾ ಕುಮಾರಿ (19) ಮತ್ತು ಗುರ್ವಿಂದರ್ ಸಿಂಗ್ (22) ಎಂಬ ಇಬ್ಬರು ಮನೆ ಬಿಟ್ಟು ಓಡಿ ಬಂದಿದ್ದು ನಾವು ಸದ್ಯದಲ್ಲೇ ಮದುವೆಯಾಗುತ್ತೇವೆ. ಅಲ್ಲೀವರೆಗೆ ಜೊತೆಯಾಗಿರಲು ಅನುಮತಿ ನೀಡಬೇಕು ಎಂದು ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಅರ್ಜಿದಾರರು ಲೀವಿಂಗ್ ರಿಲೇಶನ್ ಶಿಪ್ ಹೊಂದಲು ಬಯಸಿದ್ದಾರೆ. ಆದರೆ, ಈ ರೀತಿಯ ಸಂಬಂಧಗಳು ಸಮಾಜದಲ್ಲಿ ಸ್ವೀಕಾರಾರ್ಹವಲ್ಲ. ಒಪ್ಪುವಂಥದ್ದೂ ಅಲ್ಲ. ಹೀಗಾಗಿ ಈ ರೀತಿಯ ಸಂಬಂಧಗಳ ಬಗ್ಗೆ ಯಾವುದೇ ರೀತಿಯ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.
ಅಲ್ಲದೆ, ಯುವಜೋಡಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಮಾಹಿತಿ ಪ್ರಕಾರ, ಹುಡುಗಿಯ ಮದುವೆಗೆ ಆಕೆಯ ಹೆತ್ತವರು ಒಪ್ಪಿಗೆ ನೀಡಿಲ್ಲ. ಹೆತ್ತವರ ವಿರೋಧದ ಮಧ್ಯೆ ಲೂಧಿಯಾನದಿಂದ ಹುಡುಗಿಯನ್ನು ತಾರನ್ ಜಿಲ್ಲೆಗೆ ಹುಡುಗ ಕರೆದೊಯ್ದು ಜೊತೆಗೆ ವಾಸ ಮಾಡಲಾರಂಭಿಸಿದ್ದ. ಆಕೆಯ ವಯಸ್ಸು ಭರ್ತಿಯಾಗಿರುವ ಬಗ್ಗೆ ದಾಖಲೆ ಪತ್ರಗಳು ಲಭ್ಯವಿಲ್ಲದ ಕಾರಣ ಹುಡುಗಿಯನ್ನು ಮದುವೆಯಾಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಹುಡುಗಿ ಮನೆಯವರ ಭಯದಿಂದ ಪೊಲೀಸರ ರಕ್ಷಣೆ ಬೇಕೆಂದು ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.
The Punjab and Haryana high court has made it clear that the “live-in-relationship is morally or socially not acceptable.” Justice H S Madaan passed these orders while dismissing the petition filed by a runaway couple from Punjab’s Tarn Taran district seeking protection of their life and liberty. The couple, in this case, was in a “live-in” relationship.
15-07-25 10:35 am
Bangalore Correspondent
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm