ಬ್ರೇಕಿಂಗ್ ನ್ಯೂಸ್
18-05-21 04:34 pm Headline Karnataka News Network ದೇಶ - ವಿದೇಶ
Photo credits : Representative Image
ನವದೆಹಲಿ, ಮೇ 18: ಕೊರೊನಾ ಸೋಂಕು ಏನೆಲ್ಲಾ ವಿಚಿತ್ರಗಳಿಗೆ ಸಾಕ್ಷಿಯಾಗುತ್ತಿದೆ ಅನ್ನೋದನ್ನು ಊಹಿಸುವಂತಿಲ್ಲ. ಉತ್ತರ ಪ್ರದೇಶದ ಬಾರಾಮತಿ ಜಿಲ್ಲೆಯಲ್ಲಿ ಕುಟುಂಬವೊಂದು 76 ವರ್ಷದ ಅಜ್ಜಿ ಕೊರೊನಾ ಸೋಂಕಿನಿಂದ ಸತ್ತಿದ್ದಾರೆಂದು ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿತ್ತು. ಆದರೆ, ಇನ್ನೇನು ಅಂತ್ಯವಿಧಿ ಮುಗಿಸಬೇಕು ಎನ್ನುವಷ್ಟರಲ್ಲಿ ಅಜ್ಜಿ ಕಣ್ಣು ಬಿಟ್ಟುಕೊಂಡು ಅಳಲು ಆರಂಭಿಸಿದ್ದಾರೆ. ಅಲ್ಲಿ ಸೇರಿದ್ದ ಕುಟುಂಬಸ್ಥರು ಅಚ್ಚರಿಯಿಂದ ಗಲಿಬಿಲಿಗೊಂಡಿದ್ದಾರೆ.
ಬಾರಾಮತಿ ಜಿಲ್ಲೆಯ ಮುಧಾಳೆ ಎಂಬ ಗ್ರಾಮದಲ್ಲಿ ಈ ರೀತಿಯ ಘಟನೆ ನಡೆದಿದೆ. ಹೀಗೆ ಸತ್ತು ಬದುಕಿದ ವೃದ್ಧ ಮಹಿಳೆಯನ್ನು 76 ವರ್ಷದ ಶಕುಂತಳಾ ಗಾಯಕ್ವಾಡ್ ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಕೋವಿಡ್ ಪಾಸಿಟಿವ್ ಆಗಿದ್ದ ಮಹಿಳೆಯನ್ನು ಮನೆಯಲ್ಲೇ ಐಸೋಲೇಶನ್ ಮಾಡಲಾಗಿತ್ತು. ಆದರೆ, ವೃದ್ಧೆಯಾಗಿದ್ದರಿಂದ ಮಹಿಳೆಯ ದೇಹಸ್ಥಿತಿ ಬಿಗಡಾಯಿಸಿತ್ತು. ಹೀಗಾಗಿ ವೃದ್ಧೆಯನ್ನು ಮೇ 10ರಂದು ಬಾರಾಮತಿಯ ಖಾಸಗಿ ಆಸ್ಪತ್ರೆ ಒಂದಕ್ಕೆ ಒಯ್ಯಲಾಯಿತು.

ಕುಟುಂಬಸ್ಥರು ಆಸ್ಪತ್ರೆಯಲ್ಲಿ ವಿಚಾರಿಸಿದಾಗ, ಬೆಡ್ ಸಿಗಲಿಲ್ಲ. ಹೊರಗೆ ಕಾರಿನಲ್ಲಿ ಮಲಗಿದ್ದ ಅಜ್ಜಿ ಕೋಮಾಕ್ಕೆ ಜಾರಿದ್ದಲ್ಲದೆ, ನಿಶ್ಚಲವಾಗಿ ಬಿದ್ದುಕೊಂಡಿದ್ದರು. ಇದನ್ನು ಕಂಡ ಕುಟುಂಬಸ್ಥರು ಅಜ್ಜಿ ಮೃತಪಟ್ಟಿದ್ದಾಗಿ ನಂಬಿ ನೇರವಾಗಿ ಮನೆಗೆ ತಂದಿದ್ದಾರೆ. ಇತರೇ ಕುಟುಂಬಸ್ಥರಿಗೂ ಈ ಬಗ್ಗೆ ತಿಳಿಸಿದ್ದು, ಎಲ್ಲರೂ ಅಜ್ಜಿಯನ್ನು ಕೊನೆಯ ಬಾರಿಗೆ ನೋಡಲು ಮನೆಗೆ ಆಗಮಿಸಿದ್ದರು. ಜೊತೆಗೆ ಅಂತ್ಯಕ್ರಿಯೆ ನಡೆಸುವುದಕ್ಕೂ ತಯಾರಿ ನಡೆಸಿದ್ದರು.
ಅತ್ತ ಅಂತ್ಯವಿಧಿಗಳನ್ನು ನಡೆಸಲು ಮನೆಯಲ್ಲಿ ಸಿದ್ಥತೆ ನಡೆಸುತ್ತಿರುವಾಗಲೇ ಅಜ್ಜಿ ಬಾಯಿ ತೆರೆದುಕೊಂಡಿದ್ದು, ಅಳುವುದನ್ನು ಆರಂಭಿಸಿದ್ದಾಳೆ. ಕಣ್ಣು ಬಿಟ್ಟುಕೊಂಡು ಎಲ್ಲರೂ ಸೇರಿದ್ದನ್ನು ನೋಡಿ, ದಂಗಾಗಿದ್ದಾರೆ. ಕೂಡಲೇ ಮನೆಯವರು ಆಕೆಯನ್ನು ಮತ್ತೊಂದು ಆಸ್ಪತ್ರೆಗೆ ಒಯ್ದಿದ್ದು, ದಾಖಲು ಮಾಡಿದ್ದಾರೆ. ಈ ಬಗ್ಗೆ ಪೊಲೀಸರಿಗೂ ಸುದ್ದಿ ಮುಟ್ಟಿದ್ದು ಮನೆಗೆ ತೆರಳಿ ಎಡವಟ್ಟು ಆಗಿರುವುದನ್ನು ದೃಢಪಡಿಸಿದ್ದಾರೆ. ಅಜ್ಜಿಗೇನೋ ಆಯುಷ್ಯ ಇತ್ತು. ಸ್ವಲ್ಪ ಹೊತ್ತು ಕಳೆಯುತ್ತಿದ್ದರೆ, ದೇಹ ಚಿತೆಗೆ ಬಿದ್ದು ಅಂತಿಮ ಯಾನ ಕೈಗೊಳ್ಳುತ್ತಿದ್ದರು.
In a bizarre incident, a 76-year-old woman who was believed to be dead came to life moments before she was to be cremated as her family members prepared for her last rites, at Mudhale village in Baramati.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 06:56 pm
HK News Staffer
ಪುತ್ತೂರು ; ಪತಿ - ಪತ್ನಿ ಜಗಳ ಕೊಲೆಯಲ್ಲಿ ಅವಸಾನ, ಪ...
20-03-26 03:39 pm
ದ.ಕ. ಜಿಲ್ಲೆಯಲ್ಲಿ ಮಾರ್ಚ್ 20ರಂದೇ ಈದುಲ್ ಫಿತರ್ ಹಬ...
19-03-26 11:30 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm