ಬ್ರೇಕಿಂಗ್ ನ್ಯೂಸ್
21-05-21 11:42 am Headline Karnataka News Network ದೇಶ - ವಿದೇಶ
Photo credits : Times Now
ನವದೆಹಲಿ, ಮೇ 21: ಪಶ್ಚಿಮ ಕರಾವಳಿಯಲ್ಲಿ ಈಗಾಗ್ಲೇ ತೌಕ್ತೆ ಚಂಡಮಾರುತದ ಹೊಡೆತದಿಂದಾಗಿ ಗಾಳಿ ಮಳೆಯ ಜೊತೆ ಸಮುದ್ರ ಉಕ್ಕೇರಿದ್ದರಿಂದ ಹಲವು ಕಡೆಗಳಲ್ಲಿ ನಾಶ- ನಷ್ಟಗಳಾಗಿದ್ದವು. ಸಮುದ್ರದಲ್ಲಿ ಬೋಟ್ ಸಿಕ್ಕಿಬಿದ್ದು ದುರಂತವೂ ಎದುರಾಗಿತ್ತು. ಇದೀಗ ದೇಶದ ಪೂರ್ವ ಕರಾವಳಿಯಲ್ಲಿ ಮತ್ತೊಂದು ಚಂಡಮಾರುತ ಎದ್ದಿದ್ದು, ಬಂಗಾಶ ಕೊಲ್ಲಿಯ ಕರಾವಳಿಗೆ ಅಪ್ಪಳಿಸಲು ರೆಡಿಯಾಗುತ್ತಿದೆ. ಮೇ 25-26ರ ವೇಳೆಗೆ ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಯಾಸ್ ಹೆಸರಿನ ಚಂಡಮಾರುತ ಅಪ್ಪಳಿಸಲಿದೆ.
ಬಂಗಾಳ ಕೊಲ್ಲಿ ಭಾಗದಲ್ಲಿ ಮೀನುಗಾರರಿಗೆ ಹವಾಮಾನ ಇಲಾಖೆ ಮತ್ತು ಕೋಸ್ಟ್ ಗಾರ್ಡ್ ಪಡೆಯಿಂದ ಎಚ್ಚರಿಕೆ ನೀಡಲಾಗುತ್ತಿದ್ದು ಸಮುದ್ರಕ್ಕೆ ತೆರಳಿದ್ದವರು ಕೂಡಲೇ ಹಿಂತಿರುಗುವಂತೆ ಸೂಚನೆ ನೀಡಲಾಗುತ್ತಿದೆ. ಅಂಡಮಾನ್ ದ್ವೀಪದ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಕಾಣಿಸಿಕೊಂಡಿದ್ದು ಮೇ 22ರ ವೇಳೆಗೆ ಇದು ಚಂಡಮಾರುತದ ರೂಪ ಪಡೆಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.



ಉತ್ತರದಿಂದ ಪಶ್ಚಿಮಕ್ಕೆ ಯಾಸ್ ಚಂಡಮಾರುತ ಬೀಸಲಿದ್ದು, ಮೇ 26ರ ವೇಳೆಗೆ ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿರುಗಾಳಿ ಮತ್ತು ಭಾರೀ ಮಳೆಯಾಗಲಿದೆ. ಇದರ ಪರಿಣಾಮ ಆಂಧ್ರಪ್ರದೇಶ, ಅಸ್ಸಾಂ, ಮೇಘಾಲಯ ಸೇರಿದಂತೆ ಆಸುಪಾಸಿನ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ತೌಕ್ತೆ ಚಂಡಮಾರುತದ ಕಾರಣ ಕೇರಳ, ಕರ್ನಾಟಕ, ಮಹಾರಾಷ್ಟ್ರ ಮತ್ತು ಗುಜರಾತ್ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿತ್ತು. ಕಳೆದ ಬಾರಿಯೂ 2020ರ ಮೇ ತಿಂಗಳಲ್ಲಿ ಇದೇ ರೀತಿ ಪೂರ್ವ ಮತ್ತು ಪಶ್ಚಿಮ ಭಾಗದಲ್ಲಿ ಪ್ರತ್ಯೇಕ ಎರಡು ಚಂಡಮಾರುತ ಕಾಣಿಸಿಕೊಂಡಿತ್ತು. ಪೂರ್ವದಲ್ಲಿ ಅಂಫಾನ್ ಮತ್ತು ದೇಶದ ಪಶ್ಚಿಮ ಭಾಗದಲ್ಲಿ ನಿಸರ್ಗದ ಹಾವಳಿಗೆ ಮುಂಗಾರು ಮಳೆಯನ್ನು ಹೊತ್ತು ತಂದಿದ್ದಲ್ಲದೆ, ಭಾರೀ ಮಳೆಯಾಗಿ ಆರಂಭದಲ್ಲೇ ಕೆಲವು ಕಡೆ ಆಸ್ತಿಪಾಸ್ತಿ ನಷ್ಟಗಳಾಗಿದ್ದವು.
ಈ ಬಾರಿಯೂ ಅದೇ ರೀತಿಯ ಪರಿಸರ ಬದಲಾವಣೆ ಪುನರಾವರ್ತನೆಯಾಗಿದೆ. ತೌಕ್ತೆ ಮತ್ತು ಯಾಸ್ ಹೆಸರಿನ ಚಂಡಮಾರುತ ದೇಶದ ಸುದೀರ್ಘ ಕರಾವಳಿಯಲ್ಲಿ ಗಾಳಿ ಮಳೆಯ ಪ್ರಕೋಪ ತಂದಿತ್ತಿದೆ.
After Cyclone Tauktae battered the states along the west coast, another cyclone is likely to make landfall on the Odisha-West Bengal coast around May 26 morning.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm