ಬ್ರೇಕಿಂಗ್ ನ್ಯೂಸ್
21-05-21 03:43 pm Headline Karnataka News Network ದೇಶ - ವಿದೇಶ
ಕಲಬುರ್ಗಿ, ಮೇ 21 : ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಲು ಕಾಂಗ್ರೆಸ್ಸಿಗರ ನೀಚ ರಾಜಕೀಯವೇ ಕಾರಣ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪುನರುಚ್ಚರಿಸಿದ್ದಾರೆ.
ಇಲ್ಲಿನ ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆಗೆ ಅವರು ಮಾತನಾಡಿದರು. ದೇಶದ ಲಸಿಕೆ ಬಗ್ಗೆ ಆರಂಭದಲ್ಲಿ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡಿದರು. ಲಸಿಕೆ ಪರಿಣಾಮಕಾರಿ ಅಲ್ಲ, ಇದರಿಂದ ಪುರುಷತ್ವ ಕಡಿಮೆ ಆಗುತ್ತದೆ ಎಂದೆಲ್ಲ ಸುಳ್ಳು ಸುದ್ದಿ ಹರಡಿದರು. ಇದರಿಂದಾಗಿ ಲಸಿಕೆ ಪಡೆಯಲು ಹಲವರು ಹಿಂಜರಿದಿದ್ದರಿಂದ ಈಗ ಸೋಂಕು ಹೆಚ್ಚುವಂತಾಗಿದೆ. ಸೋಂಕಿನ ಕಾರಣ ಸಾವಿನ ಪ್ರಮಾಣವೂ ಹೆಚ್ಚಾಗಿದೆ ಎಂದು ದೂರಿದರು.
ಲಸಿಕೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಅವರೂ ಹೇಳಿದ್ದಾರೆ. ಅವರ ಹೇಳಿಕೆ ಸತ್ಯವಾಗಿದೆ. ವ್ಯಾಕ್ಸಿನ್ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ ವ್ಯವಸ್ಥಿತವಾಗಿ ಮಾಡಿದೆ ಎಂದು ನಳಿನ್ ಆರೋಪಿಸಿದರು.
ಫೆಬ್ರುವರಿಯಲ್ಲಿ ಸ್ವತಃ ಪ್ರಧಾನಿ ಮೋದಿ ಅವರೇ ಲಸಿಕೆ ಪಡೆದುಕೊಂಡು ಜನರಿಗೆ ಲಸಿಕೆ ಪಡೆಯಲು ಪ್ರೇರಣೆ ನೀಡಿದರು. ಆದರೂ ಜನ ಮೇ ವರೆಗೂ ಲಸಿಕೆಗಾಗಿ ಮುಂದೆ ಬರಲಿಲ್ಲ. ಈಗ ಅದೇ ಕಾಂಗ್ರೆಸ್ಸಿಗರು ಲಸಿಕೆ ಇಲ್ಲ ಎಂದು ಕಣ್ಣೀರು ಹಾಕುತ್ತಿದ್ದಾರೆ ಎಂದರು.
ಸಿದ್ದರಾಮಯ್ಯ ಕೂಡ ಈ ರೀತಿಯ ಆರೋಪಗಳಿಂದ ಹೊರತಾಗಿಲ್ಲ. ಕಾಂಗ್ರೆಸ್ ಹೈಕಮಾಂಡ್ ಏನು ಮಾಡುತ್ತದೋ ಸಿದ್ದರಾಮಯ್ಯ ಸಹ ಅದನ್ನೇ ಮಾಡುತ್ತಾರೆ. ಅಧಿಕಾರಕ್ಕಾಗಿ ಕಾಂಗ್ರೆಸಿಗರು ಮಾಡುತ್ತಿರುವ ಈ ರೀತಿಯ ವರ್ತನೆಯನ್ನು ಜನ ಸಹಿಸುವುದಿಲ್ಲ. ಅದಕ್ಕಾಗಿಯೇ ಜನ ಅವರನ್ನು ವರುಣಾ ಕ್ಷೇತ್ರದಿಂದ ಓಡಿಸಿದ್ದಾರೆ. ಇದೇ ರೀತಿ ಮಾಡಿದರೆ ಬಾದಾಮಿಯಿಂದಲೂ ಓಡಿಸುತ್ತಾರೆ ಎಂದು ನಳಿನ್ ಕುಮಾರ್ ಕಟೀಲ್ ಮೂದಲಿಸಿದರು.
The dirty politics of Congress is the reason for the widespread of Coronavirus in India mocks Naleen Kumar Kateel during a BJP led program in Kalaburgi
12-05-24 10:51 am
HK News Desk
ಪರಿಷತ್ ಚುನಾವಣೆ ; ಒಂದು ಸ್ಥಾನ ಬಿಟ್ಟು ಐದು ಸ್ಥಾನಗ...
11-05-24 11:20 pm
SP Dinesh, Ayanur Manjunath, Congress: ನೈರುತ್...
11-05-24 09:46 pm
KAS officer shivakumar wife Chaitra suicide:...
11-05-24 07:25 pm
Chikkaballapur, Police constable protest, SP...
11-05-24 06:57 pm
11-05-24 09:43 pm
HK News Desk
Kareena Kapoor, Bible Book, court: “ಪ್ರೆಗ್ನೆನ...
11-05-24 03:13 pm
Ram Mandir, Nana Patole, Nrendra modi: ಮೋದಿಯಿ...
10-05-24 10:05 pm
Arvind Kejriwal, Supreme court: ಸಿಎಂ ಕೇಜ್ರಿವಾ...
10-05-24 03:46 pm
Kerala Arali Flower death: ಮೊಬೈಲ್ ನಲ್ಲಿ ಮಾತನಾ...
10-05-24 10:06 am
12-05-24 10:45 am
Mangalore Correspondent
Mangalore airport, cash missing: ಹಜ್ ಯಾತ್ರೆ ತ...
11-05-24 10:54 pm
Mangalore Alvas pragathi job fair: ಜೂನ್ 7-8 ;...
11-05-24 06:48 pm
Udupi news, body in car: ಟೂರಿಸ್ಟ್ ಕಾರು ಇರೋದು...
11-05-24 01:33 pm
Thumbe reservoir, Mangalore: ತುಂಬೆ ಡ್ಯಾಮಿನಲ್ಲ...
11-05-24 12:25 pm
12-05-24 01:53 pm
Mangalore Correspondent
Mangalore Crime, Sexual Assult: ಅನ್ಯಕೋಮಿನ ಬಾಲ...
11-05-24 10:18 pm
Bangalore Crime, Cyber, Roopa Iyer: ಸೆಲೆಬ್ರಿಟ...
10-05-24 05:04 pm
Kalaburgi youth murdered: ಕಲಬುರಗಿ ; ಕಾಂಗ್ರೆಸ್...
10-05-24 02:04 pm
Cyber fraud Kodagu, Kerala, Sim card: ಸೈಬರ್ ವ...
10-05-24 12:44 pm