ಬ್ರೇಕಿಂಗ್ ನ್ಯೂಸ್
21-05-21 03:43 pm Headline Karnataka News Network ದೇಶ - ವಿದೇಶ
ಕಲಬುರ್ಗಿ, ಮೇ 21 : ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಲು ಕಾಂಗ್ರೆಸ್ಸಿಗರ ನೀಚ ರಾಜಕೀಯವೇ ಕಾರಣ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪುನರುಚ್ಚರಿಸಿದ್ದಾರೆ.
ಇಲ್ಲಿನ ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆಗೆ ಅವರು ಮಾತನಾಡಿದರು. ದೇಶದ ಲಸಿಕೆ ಬಗ್ಗೆ ಆರಂಭದಲ್ಲಿ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡಿದರು. ಲಸಿಕೆ ಪರಿಣಾಮಕಾರಿ ಅಲ್ಲ, ಇದರಿಂದ ಪುರುಷತ್ವ ಕಡಿಮೆ ಆಗುತ್ತದೆ ಎಂದೆಲ್ಲ ಸುಳ್ಳು ಸುದ್ದಿ ಹರಡಿದರು. ಇದರಿಂದಾಗಿ ಲಸಿಕೆ ಪಡೆಯಲು ಹಲವರು ಹಿಂಜರಿದಿದ್ದರಿಂದ ಈಗ ಸೋಂಕು ಹೆಚ್ಚುವಂತಾಗಿದೆ. ಸೋಂಕಿನ ಕಾರಣ ಸಾವಿನ ಪ್ರಮಾಣವೂ ಹೆಚ್ಚಾಗಿದೆ ಎಂದು ದೂರಿದರು.


ಲಸಿಕೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಅವರೂ ಹೇಳಿದ್ದಾರೆ. ಅವರ ಹೇಳಿಕೆ ಸತ್ಯವಾಗಿದೆ. ವ್ಯಾಕ್ಸಿನ್ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ ವ್ಯವಸ್ಥಿತವಾಗಿ ಮಾಡಿದೆ ಎಂದು ನಳಿನ್ ಆರೋಪಿಸಿದರು.

ಫೆಬ್ರುವರಿಯಲ್ಲಿ ಸ್ವತಃ ಪ್ರಧಾನಿ ಮೋದಿ ಅವರೇ ಲಸಿಕೆ ಪಡೆದುಕೊಂಡು ಜನರಿಗೆ ಲಸಿಕೆ ಪಡೆಯಲು ಪ್ರೇರಣೆ ನೀಡಿದರು. ಆದರೂ ಜನ ಮೇ ವರೆಗೂ ಲಸಿಕೆಗಾಗಿ ಮುಂದೆ ಬರಲಿಲ್ಲ. ಈಗ ಅದೇ ಕಾಂಗ್ರೆಸ್ಸಿಗರು ಲಸಿಕೆ ಇಲ್ಲ ಎಂದು ಕಣ್ಣೀರು ಹಾಕುತ್ತಿದ್ದಾರೆ ಎಂದರು.
ಸಿದ್ದರಾಮಯ್ಯ ಕೂಡ ಈ ರೀತಿಯ ಆರೋಪಗಳಿಂದ ಹೊರತಾಗಿಲ್ಲ. ಕಾಂಗ್ರೆಸ್ ಹೈಕಮಾಂಡ್ ಏನು ಮಾಡುತ್ತದೋ ಸಿದ್ದರಾಮಯ್ಯ ಸಹ ಅದನ್ನೇ ಮಾಡುತ್ತಾರೆ. ಅಧಿಕಾರಕ್ಕಾಗಿ ಕಾಂಗ್ರೆಸಿಗರು ಮಾಡುತ್ತಿರುವ ಈ ರೀತಿಯ ವರ್ತನೆಯನ್ನು ಜನ ಸಹಿಸುವುದಿಲ್ಲ. ಅದಕ್ಕಾಗಿಯೇ ಜನ ಅವರನ್ನು ವರುಣಾ ಕ್ಷೇತ್ರದಿಂದ ಓಡಿಸಿದ್ದಾರೆ. ಇದೇ ರೀತಿ ಮಾಡಿದರೆ ಬಾದಾಮಿಯಿಂದಲೂ ಓಡಿಸುತ್ತಾರೆ ಎಂದು ನಳಿನ್ ಕುಮಾರ್ ಕಟೀಲ್ ಮೂದಲಿಸಿದರು.
The dirty politics of Congress is the reason for the widespread of Coronavirus in India mocks Naleen Kumar Kateel during a BJP led program in Kalaburgi
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 06:56 pm
HK News Staffer
ಪುತ್ತೂರು ; ಪತಿ - ಪತ್ನಿ ಜಗಳ ಕೊಲೆಯಲ್ಲಿ ಅವಸಾನ, ಪ...
20-03-26 03:39 pm
ದ.ಕ. ಜಿಲ್ಲೆಯಲ್ಲಿ ಮಾರ್ಚ್ 20ರಂದೇ ಈದುಲ್ ಫಿತರ್ ಹಬ...
19-03-26 11:30 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm