ಬ್ರೇಕಿಂಗ್ ನ್ಯೂಸ್
25-05-21 12:45 pm Headline Karnataka News Network ದೇಶ - ವಿದೇಶ
ಚೆನ್ನೈ, ಮೇ 24 : ಕೊರೊನಾ ಲಾಕ್ಡೌನ್ ನಡುವೆ ಯುವ ಜೋಡಿ ವಿಮಾನದಲ್ಲಿ ಮದುವೆಯಾಗಿರುವುದು ಈಗ ವಿಮಾನ ಕಂಪನಿಯ ಕುತ್ತಿಗೆ ಹಿಡಿಯುವಂತಾಗಿದೆ. ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ವಿಮಾನ ಹಾರಾಟದ ವೇಳೆ ಜೋಡಿ ಮದುವೆಯಾಗಿರುವ ವಿಚಾರದಲ್ಲಿ ಸ್ಪೈಸ್ ಜೆಟ್ ಚಾರ್ಟರ್ಡ್ ವಿಮಾನ ಸಿಬ್ಬಂದಿಯನ್ನು ಡಿಜಿಸಿಎ ಕರ್ತವ್ಯದಿಂದ ಅಮಾನತುಗೊಳಿಸಿದೆ.
ಮೇ 23ರಂದು ಮಧುರೈನ ರಾಕೇಶ್ ಹಾಗೂ ದಕ್ಷಿಣಾ ಜೋಡಿ ಮಧುರೈ- ಬೆಂಗಳೂರು ವಿಮಾನವನ್ನು ಬುಕ್ ಮಾಡಿ, ಆತ್ಮೀಯ ಸ್ನೇಹಿತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಮದುವೆಯಾಗಿದ್ದರು. ಸುಮಾರು 160 ಜನ ವಿಮಾನದಲ್ಲಿದ್ದರು ಎನ್ನಲಾಗಿದ್ದು, ಮದುವೆಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.
ವಿಮಾನದಲ್ಲಿ ಪ್ರಯಾಣಿಕರು ಕೋವಿಡ್ ನಿಯಮ ಉಲ್ಲಂಘನೆ ಮಾಡಲು ಕಾರಣವಾದ ವಿಮಾನ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಪ್ರಯಾಣಿಕರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ನಾಗರೀಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.
ಮಧುರೈನ ಟ್ರಾವಲ್ ಏಜೆಂಟ್ ಒಬ್ಬರ ಮೂಲಕ ಮೇ 23ರಂದು ಸ್ಪೈಸ್ ಜೆಟ್ ಬೋಯಿಂಗ್ 737 ಚಾರ್ಟರ್ಡ್ ವಿಮಾನವನ್ನು ಬುಕ್ ಮಾಡಲಾಗಿತ್ತು. ವಿವಾಹದ ನಂತರ ಜಾಲಿ ರೈಡ್ಗೆ ವಿಮಾನ ಬುಕ್ ಮಾಡಲಾಗಿತ್ತು ಎಂದು ತಿಳಿದುಬಂದಿದೆ. ವಿಮಾನದಲ್ಲಿ ಪ್ರಯಾಣಿಸುವವರಿಗೆ ಕೊರೊನಾ ಮಾರ್ಗಸೂಚಿ ಕುರಿತು ವಿವರಿಸಿದ್ದೆವು. ಫೋಟೊ, ವಿಡಿಯೊ ಚಿತ್ರೀಕರಣ ಮಾಡಬಾರದು ಎಂದು ಕೂಡ ತಿಳಿಸಿದ್ದೆವು. ಆದರೂ ನಿಯಮಗಳನ್ನು ಪಾಲಿಸಿಲ್ಲ. ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪೈಸ್ ಜೆಟ್ ತಿಳಿಸಿದೆ.
Read: ಲಾಕ್ಡೌನ್ ಭಯ ; ವಿಮಾನದಲ್ಲಿ ಹಾರಾಡುತ್ತಲೇ ಯುವ ಜೋಡಿಯ ಕಲ್ಯಾಣೋತ್ಸವ !
A wedding on a chartered flight has won full marks for ingenuity but is under investigation over the violation of Covid-safety rules. The aviation regulator has asked for a report and the crew of the SpiceJet flight has been taken off duty for the inquiry, according to ANI. The bride, groom, and their families may face action as SpiceJet says passengers did not follow rules despite repeated requests.
24-04-25 10:13 pm
HK News Desk
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
Kalaburagi Accident: ಕಲಬುರಗಿ; ನಾಯಿಯ ಪ್ರಾಣ ಕಾಪ...
24-04-25 04:56 pm
CM Siddaramaiah, DK Shivakumar, Threat Mail:...
23-04-25 10:49 pm
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
24-04-25 09:00 pm
HK News Desk
ಭಯೋತ್ಪಾದನೆ ಕ್ಯಾನ್ಸರ್ ಇದ್ದಂತೆ, ಇಸ್ಲಾಮಿಗೆ ವಿರುದ...
24-04-25 04:59 pm
Pahalgam terror attack: ಉಗ್ರರು ಕನಸಿನಲ್ಲೂ ಊಹಿಸ...
24-04-25 04:21 pm
Robert Vadra, Pahalgam terror attack: ಸರ್ಕಾರ...
24-04-25 01:58 pm
India Pak News: ಭಾರತ- ಪಾಕ್ ಸಂಬಂಧಕ್ಕೆ ಬ್ರೇಕ್ ;...
24-04-25 12:46 pm
24-04-25 11:08 pm
Mangalore Correspondent
Pahalgam terror attack, udupi Vishwaprasanna...
23-04-25 10:23 pm
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm