ಬ್ರೇಕಿಂಗ್ ನ್ಯೂಸ್
26-05-21 08:57 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 26: ಅಲೋಪತಿ ವೈದ್ಯಕೀಯವೇ ಸುಳ್ಳು, ಮೂರ್ಖ ವಿಜ್ಞಾನ ಎಂದು ಹೇಳಿಕೆ ನೀಡಿದ್ದ ಪತಂಜಲಿ ಗುರು ಬಾಬಾ ರಾಮದೇವ್ ವಿರುದ್ಧ ಐಎಂಎ ಒಂದು ಸಾವಿರ ಕೋಟಿ ರೂ. ಪರಿಹಾರ ಕೇಳಿ ಮಾನನಷ್ಟ ಮೊಕದ್ದಮೆ ಹೂಡುವ ಬೆದರಿಕೆ ಹಾಕಿದೆ. ತಮ್ಮ ಹೇಳಿಕೆಯ ಬಗ್ಗೆ 15 ದಿನಗಳಲ್ಲಿ ಬಹಿರಂಗ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಈ ಬಗ್ಗೆ ಸಾವಿರ ಕೋಟಿ ಪರಿಹಾರಕ್ಕಾಗಿ ಪ್ರಕರಣ ದಾಖಲಿಸುತ್ತೇವೆ ಎಂದು ಉತ್ತರಾಖಂಡ ರಾಜ್ಯ ಐಎಂಎ ಘಟಕ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಬಾಬಾ ರಾಮದೇವ್ ವಿರುದ್ಧ ಆರು ಪುಟಗಳ ನೋಟೀಸ್ ನೀಡಿರುವ ಉತ್ತರಾಖಂಡ ಐಎಂಎ ಘಟಕದ ಕಾರ್ಯದರ್ಶಿ ಅಜಯ್ ಖನ್ನಾ, ರಾಮದೇವ್ ಅಲೋಪತಿ ವೈದ್ಯರನ್ನು ಅವಮಾನಿಸಿದ್ದಾರೆ. ನಮ್ಮ ಘಟಕದ ಎರಡು ಸಾವಿರ ಮಂದಿ ಸದಸ್ಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಹೇಳಿದ್ದಾರೆ.
15 ದಿನಗಳಲ್ಲಿ ಲಿಖಿತ ರೂಪದಲ್ಲಿ ಕ್ಷಮೆ ಯಾಚಿಸದಿದ್ದರೆ ಯೋಗಗುರು ವಿರುದ್ಧ ಸೆಕ್ಷನ್ 499 ಪ್ರಕಾರ ಕ್ರಿಮಿನಲ್ ಕೇಸು ದಾಖಲು ಮಾಡುತ್ತೇವೆ. ಪ್ರತೀ ಸದಸ್ಯನಿಗೆ 50 ಲಕ್ಷ ರೂ.ನಂತೆ ಒಂದು ಸಾವಿರ ಕೋಟಿ ರೂಪಾಯಿ ಪರಿಹಾರ ಕೇಳಿ ಮಾನನಷ್ಟ ಮೊಕದ್ದಮೆ ದಾಖಲು ಮಾಡುತ್ತೇವೆ ಎಂದು ವಕೀಲರ ಮೂಲಕ ಹೇಳಿದ್ದಾರೆ.
ಇದೇ ವೇಳೆ, ಪತಂಜಲಿಯಿಂದ ನೀಡಲಾಗುತ್ತಿರುವ ಕೊರೊನಿಲ್ ಕಿಟ್ ಬಗ್ಗೆಯೂ ಐಎಂಎ ಆಕ್ಷೇಪ ಎತ್ತಿದೆ. ಕೊರೊನಾಗೆ ಔಷಧಿ ಎನ್ನುವ ರೀತಿ ಬಿಂಬಿಸಿ ಜಾಹೀರಾತು ನೀಡಲಾಗಿದೆ. ಅದನ್ನೂ ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಅದರ ವಿರುದ್ಧವೂ ಎಫ್ಐಆರ್ ದಾಖಲು ಮಾಡುತ್ತೀವಿ ಎಂದು ಎಚ್ಚರಿಸಲಾಗಿದೆ.
ಅಲೋಪತಿ ವೈದ್ಯರು ಮತ್ತು ಫಾರ್ಮಾ ಕಂಪನಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಬಾಬಾ ರಾಮದೇವ್, 25 ಪ್ರಶ್ನೆಗಳನ್ನು ಮುಂದಿಟ್ಟು ಅಲೋಪತಿ ವೈದ್ಯಕೀಯ ವಿಜ್ಞಾನವನ್ನೇ ಅಣಕಿಸಿದ್ದಾರೆ. ಅಲೋಪತಿಯಲ್ಲಿ ಮಧುಮೇಹ, ಬಿಪಿಗಳಿಗೆ ಶಾಶ್ವತ ಪರಿಹಾರ ಇದೆಯೇ, ಸಂಧಿವಾತ, ಥೈರಾಯ್ಡ್, ಅಸ್ತಮಾಗೆ ಶಾಶ್ವತ ಚಿಕಿತ್ಸೆ ಇದೆಯೇ, ಹೆಪಟೈಟಿಸ್, ಪಿತ್ತ ಜನಕಾಂಗದ ಸಿರೋಸಿಸ್ ಗುಣಪಡಿಸುವ ಚಿಕಿತ್ಸೆ ಇದೆಯೇ, ತಲೆನೋವು, ಮೈಗ್ರೇನ್ ಗೆ ಶಾಶ್ವತ ಪರಿಹಾರ ಇದೆಯೇ, ಪಾರ್ಕಿನ್ಸನ್ ಕಾಯಿಲೆಗೆ ಶಾಶ್ವತ ಚಿಕಿತ್ಸೆ ಇದೆಯೇ ಇತ್ಯಾದಿ 25 ಪ್ರಶ್ನೆಗಳನ್ನು ಕೇಳಿ ಫಾರ್ಮಾ ಸಂಸ್ಥೆಗಳನ್ನೇ ದಂಗು ಬಡಿಸಿದ್ದಾರೆ.
Yoga guru Ramdev has been served a defamation notice by the Indian Medical Association’s (IMA’s) Uttarakhand division for his recent statements questioning the efficacy of allopathy medicines.
24-04-25 10:13 pm
HK News Desk
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
Kalaburagi Accident: ಕಲಬುರಗಿ; ನಾಯಿಯ ಪ್ರಾಣ ಕಾಪ...
24-04-25 04:56 pm
CM Siddaramaiah, DK Shivakumar, Threat Mail:...
23-04-25 10:49 pm
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
24-04-25 09:00 pm
HK News Desk
ಭಯೋತ್ಪಾದನೆ ಕ್ಯಾನ್ಸರ್ ಇದ್ದಂತೆ, ಇಸ್ಲಾಮಿಗೆ ವಿರುದ...
24-04-25 04:59 pm
Pahalgam terror attack: ಉಗ್ರರು ಕನಸಿನಲ್ಲೂ ಊಹಿಸ...
24-04-25 04:21 pm
Robert Vadra, Pahalgam terror attack: ಸರ್ಕಾರ...
24-04-25 01:58 pm
India Pak News: ಭಾರತ- ಪಾಕ್ ಸಂಬಂಧಕ್ಕೆ ಬ್ರೇಕ್ ;...
24-04-25 12:46 pm
24-04-25 11:08 pm
Mangalore Correspondent
Pahalgam terror attack, udupi Vishwaprasanna...
23-04-25 10:23 pm
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm