ಬ್ರೇಕಿಂಗ್ ನ್ಯೂಸ್
01-06-21 11:25 am Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 1 : ಕೊರೋನಾ ವೈರಸ್ ನಿಯಂತ್ರಣ ವಿಚಾರದಲ್ಲಿ ಅಲೋಪತಿ ವೈದ್ಯ ವಿಜ್ಞಾನದ ವಿರುದ್ಧವೇ ಸಿಡಿದಿರುವ ಯೋಗಗುರು ಬಾಬಾ ರಾಮದೇವ್, ಅಲೋಪತಿ ವೈದ್ಯರ ಆಕ್ರೋಶದ ಮಧ್ಯೆಯೇ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಒಂದು ವರ್ಷದಲ್ಲಿ 1,000 ಅಲೋಪತಿ ವೈದ್ಯರನ್ನು ಆಯುರ್ವೇದಿಕ್ ವೈದ್ಯರನ್ನಾಗಿ ಪರಿವರ್ತಿಸುತ್ತೇನೆ ಎಂದು ಹೇಳಿಕೆ ನೀಡಿ ಅಚ್ಚರಿ ಸೃಷ್ಟಿಸಿದ್ದಾರೆ.
ಎಂಬಿಬಿಎಸ್ ಮತ್ತು ಎಂಡಿ ಪದವಿಗಳನ್ನು ಪಡೆದಿರುವ ಹಲವಾರು ಅಲೋಪತಿ ವೈದ್ಯರು, ಆರೋಗ್ಯ ಸಿಬ್ಬಂದಿಗಳು ಯೋಗ ಶಿಬಿರದಲ್ಲಿ ಭಾಗವಹಿಸುತ್ತಿದ್ದಾರೆ. ಈ ವರ್ಷದೊಳಗೆ ಸಾವಿರಕ್ಕೂ ಹೆಚ್ಚು ಅಲೋಪಥಿ ವೈದ್ಯರನ್ನು ಆಯುರ್ವೇದಕ್ಕೆ ಕರೆತರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಲೋಪತಿ ಔಷಧಿಗಳಿಂದ ಸ್ವತಃ ವೈದ್ಯರೇ ಅಡ್ಡ ಪರಿಣಾಮ ಎದುರಿಸಿದ್ದಾರೆ. ಹೀಗಾಗಿ ಯೋಗ, ಆಯುರ್ವೇದದತ್ತ ಆಕರ್ಷಿತರಾಗಿ ಗುಣಮುಖರಾಗಿದ್ದಾರೆ. ಜೀವನದಲ್ಲಿ ನೆಮ್ಮದಿ ಕಂಡುಕೊಂಡಿದ್ದಾರೆ. ಈಗಾಗಲೇ ಹಲವು ಅಲೋಪಥಿ ವೈದ್ಯರು ತಮ್ಮ ಯೋಗ, ಆಯುರ್ವೇದತ್ತ ಹೊರಳುತ್ತಿದ್ದಾರೆ ಎಂದು ರಾಮದೇವ್ ಹೇಳಿದ್ದಾರೆ.
ಅಲ್ಲದೆ, ಮುಂದಿನ ಒಂದು ವರ್ಷದಲ್ಲಿ ಸಾವಿರಕ್ಕೂ ಹೆಚ್ಚು ಅಲೋಪತಿ ವೈದ್ಯರನ್ನು ಪ್ರಕೃತಿ ಚಿಕಿತ್ಸಾ ವೈದ್ಯರನ್ನಾಗಿ ಪರಿವರ್ತಿಸುವ ಗುರಿ ಇಟ್ಟುಕೊಂಡಿದ್ದೇನೆ ಎಂದು ರಾಮ್ದೇವ್ ಹೇಳಿದರು.
ಆಲೋಪಥಿ ಮೂರ್ಖರ ವಿಜ್ಞಾನ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಾಬಾ ರಾಮ್ದೇವ್ ವಿರುದ್ಧ ವೈದ್ಯರ ಫೆಡರೇಶನ್, ಭಾರತೀಯ ವೈದ್ಯಕೀಯ ಸಂಘ ಸೇರಿದಂತೆ ಅಲೋಪತಿ ವೈದ್ಯರು ಜೂನ್ 1 ರಂದು ದೇಶಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಪಟ್ಟು ಹಿಡಿದಿರುವಾಗಲೇ ರಾಮದೇವ್ ಮತ್ತೊಂದು ಸವಾಲು ಹಾಕಿದ್ದಾರೆ.
As the controversy over his comments against allopathic medicines and doctors is drawing severe ire, yoga guru Baba Ramdev said during a yoga session that he has a target of converting 1,000 allopathic doctors to Ayurveda in a year's time.
24-04-25 10:13 pm
HK News Desk
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
Kalaburagi Accident: ಕಲಬುರಗಿ; ನಾಯಿಯ ಪ್ರಾಣ ಕಾಪ...
24-04-25 04:56 pm
CM Siddaramaiah, DK Shivakumar, Threat Mail:...
23-04-25 10:49 pm
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
24-04-25 09:00 pm
HK News Desk
ಭಯೋತ್ಪಾದನೆ ಕ್ಯಾನ್ಸರ್ ಇದ್ದಂತೆ, ಇಸ್ಲಾಮಿಗೆ ವಿರುದ...
24-04-25 04:59 pm
Pahalgam terror attack: ಉಗ್ರರು ಕನಸಿನಲ್ಲೂ ಊಹಿಸ...
24-04-25 04:21 pm
Robert Vadra, Pahalgam terror attack: ಸರ್ಕಾರ...
24-04-25 01:58 pm
India Pak News: ಭಾರತ- ಪಾಕ್ ಸಂಬಂಧಕ್ಕೆ ಬ್ರೇಕ್ ;...
24-04-25 12:46 pm
24-04-25 11:08 pm
Mangalore Correspondent
Pahalgam terror attack, udupi Vishwaprasanna...
23-04-25 10:23 pm
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm