ಬ್ರೇಕಿಂಗ್ ನ್ಯೂಸ್
01-06-21 12:40 pm Headline Karnataka News Network ದೇಶ - ವಿದೇಶ
ಮುಂಬೈ, ಜೂನ್ 01: ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಹಾರಾಷ್ಟ್ರದಿಂದ ಬಂದಿಳಿಯುವ ದೇಶೀಯ ವಿಮಾನ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ಪರೀಕ್ಷೆಗೆ ಒಳಗಾಗಬೇಕಿಲ್ಲ ಎಂದು ಬೃಹನ್ ಮುಂಬೈ ಕಾರ್ಪೊರೇಷನ್ ಹೇಳಿದೆ.
ಈ ಕುರಿತು ಬೃಹನ್ ಮುಂಬೈ ಕಾರ್ಪೊರೇಷನ್ ಮಾಹಿತಿ ನೀಡಿದ್ದು, ಮಹಾರಾಷ್ಟ್ರದೊಳಗಿನ ವಿಮಾನ ನಿಲ್ದಾಣಗಳಿಂದ ಮುಂಬೈಗೆ ಬರುವ ಎಲ್ಲಾ ದೇಶೀಯ ವಾಯು ಪ್ರಯಾಣಿಕರಿಗೆ ಮುಂಬೈಗೆ ಬಂದಿಳಿದ ನಂತರ ಆರ್ಟಿ-ಪಿಸಿಆರ್ ಪರೀಕ್ಷಾ ಅವಶ್ಯಕತೆಯಿಂದ ವಿನಾಯಿತಿ ನೀಡಲಾಗಿದೆ.
ಮುಂಬೈ ವಿಮಾನ ನಿಲ್ದಾಣದಿಂದ ಮಹಾರಾಷ್ಟ್ರ ವಿಮಾನ ನಿಲ್ದಾಣಗಳಿಗೆ ಪ್ರಯಾಣಿಸುವ ಎಲ್ಲಾ ದೇಶೀಯ ವಿಮಾನ ಪ್ರಯಾಣಿಕರಿಗೆ , ವಿಮಾನ ನಿಲ್ದಾಣ ಆಯೋಜಕರು, ವಿಮಾನ ಸಂಸ್ಥೆಗಳು ಆರ್ಟಿಪಿಸಿಆರ್ ಪರೀಕ್ಷೆಗೆ ಒತ್ತಾಯಿಸಬಾರದು ಎಂದು ಹೇಳಲಾಗಿದೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದೆ.

ಇದಲ್ಲದೆ ಮುಂದಿನ 15 ದಿನಗಳವರೆಗೆ ಸೋಮವಾರದಿಂದ ಶುಕ್ರವಾರದವರೆಗೆ ಪರ್ಯಾಯ ದಿನಗಳಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ 2ರವರೆಗೆ ಅಗತ್ಯವಿಲ್ಲದ ಅಂಗಡಿಗಳಿಗೂ ಕೂಡ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟಿದೆ.'
ಪ್ರಸ್ತುತ ಬೆಳಗ್ಗೆ 7 ರಿಂದ 11ರವರೆಗೆ ಕಾರ್ಯ ನಿರ್ವಹಿಸಲು ಅನುಮತಿ ಹೊಂದಿರುವ ಅಗತ್ಯ ಸವ್ತುಗಳ ಮಾರಾಟ ಮಾಡುವ ಅಂಗಡಿಗಳಿಗೆ ಬೆಳಗ್ಗೆ 7 ರಿಂದ ಮಧ್ಯಾಹ್ನ 2ರವರೆಗೆ ಎಲ್ಲಾ ದಿನಗಳಲ್ಲೂ ತೆರೆಯಲು ಅವಕಾಶ ಮಾಡಿಕೊಡಲಾಗಿದೆ.

ಮುಂದಿನ ವಾರ ರಸ್ತೆಯ ಎಡ ಭಾಗದಲ್ಲಿರುವ ಅಂಗಡಿಗಳು ಸೋಮವಾರ, ಬುಧವಾರ ಮತ್ತು ಶುಕ್ರವಾರ ತೆರೆದಿರುತ್ತದೆ, ಬಲಭಾಗದಲ್ಲಿರುವ ಅಂಗಡಿಗಳು ಮಂಗಳವಾರ, ಗುರುವಾರ ತೆರೆದಿರುತ್ತವೆ ಎಂದು ಮಾಹಿತಿ ನೀಡಿದ್ದಾರೆ.
ಬ್ರೇಕ್ ದಿ ಚೈನ್ ಅಡಿಯಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ನಿರ್ದೇಶನಗಳು ಜಾರಿಯಲ್ಲಿರುವವರೆಗೂ ಈ ಆದೇಶಗಳು ಅನ್ವಯವಾಗುತ್ತವೆ ಎಂದು ಬಿಎಂಸಿ ಹೇಳಿದೆ. ಕಾಲಕಾಲಕ್ಕೆ ಸರ್ಕಾರ ಘೋಷಿಸಿದಂತೆ ಎಲ್ಲಾ ವಾಣಿಜ್ಯ ಸಂಸ್ಥೆಗಳು ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮತ್ತು ಇತರೆ ಕ್ರಮವನ್ನು ಅನುಸರಿಸುವುದು ಕಡ್ಡಾಯವಾಗಿದೆ.
Domestic passengers arriving at Mumbai’s Chhatrapati Shivaji Maharaj International Airport from airports within Maharashtra have been exempted from the RT-PCR test upon landing in the city.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 07:54 pm
Udupi Staffer
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
ಪುತ್ತೂರು ; ಪತಿ - ಪತ್ನಿ ಜಗಳ ಕೊಲೆಯಲ್ಲಿ ಅವಸಾನ, ಪ...
20-03-26 03:39 pm
ದ.ಕ. ಜಿಲ್ಲೆಯಲ್ಲಿ ಮಾರ್ಚ್ 20ರಂದೇ ಈದುಲ್ ಫಿತರ್ ಹಬ...
19-03-26 11:30 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm