ಬ್ರೇಕಿಂಗ್ ನ್ಯೂಸ್
01-06-21 12:40 pm Headline Karnataka News Network ದೇಶ - ವಿದೇಶ
ಮುಂಬೈ, ಜೂನ್ 01: ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಹಾರಾಷ್ಟ್ರದಿಂದ ಬಂದಿಳಿಯುವ ದೇಶೀಯ ವಿಮಾನ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ಪರೀಕ್ಷೆಗೆ ಒಳಗಾಗಬೇಕಿಲ್ಲ ಎಂದು ಬೃಹನ್ ಮುಂಬೈ ಕಾರ್ಪೊರೇಷನ್ ಹೇಳಿದೆ.
ಈ ಕುರಿತು ಬೃಹನ್ ಮುಂಬೈ ಕಾರ್ಪೊರೇಷನ್ ಮಾಹಿತಿ ನೀಡಿದ್ದು, ಮಹಾರಾಷ್ಟ್ರದೊಳಗಿನ ವಿಮಾನ ನಿಲ್ದಾಣಗಳಿಂದ ಮುಂಬೈಗೆ ಬರುವ ಎಲ್ಲಾ ದೇಶೀಯ ವಾಯು ಪ್ರಯಾಣಿಕರಿಗೆ ಮುಂಬೈಗೆ ಬಂದಿಳಿದ ನಂತರ ಆರ್ಟಿ-ಪಿಸಿಆರ್ ಪರೀಕ್ಷಾ ಅವಶ್ಯಕತೆಯಿಂದ ವಿನಾಯಿತಿ ನೀಡಲಾಗಿದೆ.
ಮುಂಬೈ ವಿಮಾನ ನಿಲ್ದಾಣದಿಂದ ಮಹಾರಾಷ್ಟ್ರ ವಿಮಾನ ನಿಲ್ದಾಣಗಳಿಗೆ ಪ್ರಯಾಣಿಸುವ ಎಲ್ಲಾ ದೇಶೀಯ ವಿಮಾನ ಪ್ರಯಾಣಿಕರಿಗೆ , ವಿಮಾನ ನಿಲ್ದಾಣ ಆಯೋಜಕರು, ವಿಮಾನ ಸಂಸ್ಥೆಗಳು ಆರ್ಟಿಪಿಸಿಆರ್ ಪರೀಕ್ಷೆಗೆ ಒತ್ತಾಯಿಸಬಾರದು ಎಂದು ಹೇಳಲಾಗಿದೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದೆ.

ಇದಲ್ಲದೆ ಮುಂದಿನ 15 ದಿನಗಳವರೆಗೆ ಸೋಮವಾರದಿಂದ ಶುಕ್ರವಾರದವರೆಗೆ ಪರ್ಯಾಯ ದಿನಗಳಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ 2ರವರೆಗೆ ಅಗತ್ಯವಿಲ್ಲದ ಅಂಗಡಿಗಳಿಗೂ ಕೂಡ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟಿದೆ.'
ಪ್ರಸ್ತುತ ಬೆಳಗ್ಗೆ 7 ರಿಂದ 11ರವರೆಗೆ ಕಾರ್ಯ ನಿರ್ವಹಿಸಲು ಅನುಮತಿ ಹೊಂದಿರುವ ಅಗತ್ಯ ಸವ್ತುಗಳ ಮಾರಾಟ ಮಾಡುವ ಅಂಗಡಿಗಳಿಗೆ ಬೆಳಗ್ಗೆ 7 ರಿಂದ ಮಧ್ಯಾಹ್ನ 2ರವರೆಗೆ ಎಲ್ಲಾ ದಿನಗಳಲ್ಲೂ ತೆರೆಯಲು ಅವಕಾಶ ಮಾಡಿಕೊಡಲಾಗಿದೆ.

ಮುಂದಿನ ವಾರ ರಸ್ತೆಯ ಎಡ ಭಾಗದಲ್ಲಿರುವ ಅಂಗಡಿಗಳು ಸೋಮವಾರ, ಬುಧವಾರ ಮತ್ತು ಶುಕ್ರವಾರ ತೆರೆದಿರುತ್ತದೆ, ಬಲಭಾಗದಲ್ಲಿರುವ ಅಂಗಡಿಗಳು ಮಂಗಳವಾರ, ಗುರುವಾರ ತೆರೆದಿರುತ್ತವೆ ಎಂದು ಮಾಹಿತಿ ನೀಡಿದ್ದಾರೆ.
ಬ್ರೇಕ್ ದಿ ಚೈನ್ ಅಡಿಯಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ನಿರ್ದೇಶನಗಳು ಜಾರಿಯಲ್ಲಿರುವವರೆಗೂ ಈ ಆದೇಶಗಳು ಅನ್ವಯವಾಗುತ್ತವೆ ಎಂದು ಬಿಎಂಸಿ ಹೇಳಿದೆ. ಕಾಲಕಾಲಕ್ಕೆ ಸರ್ಕಾರ ಘೋಷಿಸಿದಂತೆ ಎಲ್ಲಾ ವಾಣಿಜ್ಯ ಸಂಸ್ಥೆಗಳು ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮತ್ತು ಇತರೆ ಕ್ರಮವನ್ನು ಅನುಸರಿಸುವುದು ಕಡ್ಡಾಯವಾಗಿದೆ.
Domestic passengers arriving at Mumbai’s Chhatrapati Shivaji Maharaj International Airport from airports within Maharashtra have been exempted from the RT-PCR test upon landing in the city.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm