ಬ್ರೇಕಿಂಗ್ ನ್ಯೂಸ್
01-06-21 04:21 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 1: ದೇಶದ ಹಲವು ರಾಜ್ಯಗಳಲ್ಲಿ ಪೂರ್ತಿಯಾಗಿ ಲಾಕ್ಡೌನ್ ಇದ್ದರೂ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮಾತ್ರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಮುಂಬೈ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್ ದರ ನೂರರ ಗಡಿದಾಟಿದ್ದು ಇತಿಹಾಸದಲ್ಲೇ ಅತ್ಯಂತ ಗರಿಷ್ಠ ದರಕ್ಕೆ ತಲುಪಿದೆ.
ಪೆಟ್ರೋಲ್ ಮತ್ತು ಡೀಸೆಲ್ ಗೆ ಇಂದು ಕ್ರಮವಾಗಿ 26 ಮತ್ತು 23 ಪೈಸೆ ಏರಿಕೆಯಾಗಿದ್ದು, ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ರೂ. 94.49 ಹಾಗೂ ಡೀಸೆಲ್ ಬೆಲೆ ರೂ. 85.38 ಆಗಿದೆ. ಸ್ವಲ್ಪ ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದ್ದ ತೈಲ ಬೆಲೆಯನ್ನು ಎರಡು ದಿನಗಳಲ್ಲಿ ದಿನವೂ ಏರಿಸಲಾಗಿದೆ. ಸೋಮವಾರ 29 ಪೈಸೆ ಏರಿಕೆಯಾಗಿದ್ದರೆ, ಇಂದು ಮತ್ತೆ ದರ ಏರಿದ್ದು ಸಾರ್ವಕಾಲಿಕ ದಾಖಲೆಯನ್ನು ದಾಟಿ ಮುನ್ನುಗ್ಗಿದೆ.


ಮುಂಬೈ ಮಹಾನಗರದಲ್ಲಿ ಇಂದು ಪೆಟ್ರೋಲ್ ದರ 100.72 ರೂ. ಆಗಿದ್ದರೆ, ಡೀಸೆಲ್ ಬೆಲೆ ಲೀಟರಿಗೆ 92.39 ರೂ.ಗೆ ಏರಿಕೆಯಾಗಿದೆ. ಡೀಸೆಲ್ ದರವೂ ದೇಶದಲ್ಲೇ ಅತಿ ಹೆಚ್ಚು ದರ ಮುಂಬೈನಲ್ಲಿ ದಾಖಲಾಗಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಅಬಕಾರಿ ಸುಂಕ ವ್ಯತ್ಯಾಸ ಇರುವುದರಿಂದ ತೈಲ ಬೆಲೆಯೂ ಆಯಾ ಭಾಗದ ತೆರಿಗೆಯನ್ನು ಹೊಂದಿಕೊಂಡು ಬೇರೆ ಬೇರೆಯಾಗಿದೆ. ಸ್ಥಳೀಯ ಸುಂಕ ಹೆಚ್ಚಿರುವ ಕಾರಣದಿಂದ ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ರಾಜಸ್ಥಾನದ ವಿವಿಧ ನಗರಗಳಲ್ಲಿ ವಾರದ ಹಿಂದೆಯೇ ಪೆಟ್ರೋಲ್ ದರ ನೂರು ರೂ. ದಾಟಿತ್ತು.


ಇದೀಗ ಸೋಮವಾರ ಮತ್ತು ಮಂಗಳವಾರ ಎರಡು ದಿನವೂ ತೈಲ ಬೆಲೆ 50 ಪೈಸೆ ಏರಿಕೆಯಾಗಿರುವುದರಿಂದ ಇತಿಹಾಸದಲ್ಲೇ ಅತಿ ಹೆಚ್ಚು ಬೆಲೆಗೆ ತಲುಪಿದೆ. ಮೇ 1ರಿಂದ 15 ದಿನಗಳ ಕಾಲ ತೈಲ ಬೆಲೆಯಲ್ಲಿ ಸ್ಥಿರತೆ ಇದ್ದು, ಯಾವುದೇ ಬದಲಾವಣೆ ಆಗಿರಲಿಲ್ಲ. ಆನಂತರ ಸರದಿಯಂತೆ ಏರಿಸಿಕೊಂಡು ಬರಲಾಗಿದ್ದು, ದೆಹಲಿಯಲ್ಲಿ ಪೆಟ್ರೋಲಿಗೆ 4.09 ರೂ. ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ 4.66 ರೂ. ಏರಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬ್ಯಾರಲಿಗೆ 70 ಡಾಲರ್ ಗೆ ತಲುಪಿದ್ದು ಇದರಿಂದಾಗಿ ತೈಲ ಕಂಪನಿಗಳು ಹೊರಗಿನ ಪೂರೈಕೆಗೆ ತಕ್ಕಂತೆ ದರವನ್ನೂ ಏರಿಕೆ ಮಾಡುತ್ತಿದ್ದು ಇದರ ನೇರ ಹೊರೆ ಜನರ ಮೇಲೆ ಬೀಳುತ್ತಿದೆ.
Petrol and diesel rates have been hiked for a second consecutive day. The fresh hike comes after consolidation in global crude oil rates, which also indicates that state-run oil companies may continue to hike fuel prices for a longer period.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 08:06 pm
HK News Desk
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am