ಬ್ರೇಕಿಂಗ್ ನ್ಯೂಸ್
01-06-21 04:21 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 1: ದೇಶದ ಹಲವು ರಾಜ್ಯಗಳಲ್ಲಿ ಪೂರ್ತಿಯಾಗಿ ಲಾಕ್ಡೌನ್ ಇದ್ದರೂ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮಾತ್ರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಮುಂಬೈ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್ ದರ ನೂರರ ಗಡಿದಾಟಿದ್ದು ಇತಿಹಾಸದಲ್ಲೇ ಅತ್ಯಂತ ಗರಿಷ್ಠ ದರಕ್ಕೆ ತಲುಪಿದೆ.
ಪೆಟ್ರೋಲ್ ಮತ್ತು ಡೀಸೆಲ್ ಗೆ ಇಂದು ಕ್ರಮವಾಗಿ 26 ಮತ್ತು 23 ಪೈಸೆ ಏರಿಕೆಯಾಗಿದ್ದು, ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ರೂ. 94.49 ಹಾಗೂ ಡೀಸೆಲ್ ಬೆಲೆ ರೂ. 85.38 ಆಗಿದೆ. ಸ್ವಲ್ಪ ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದ್ದ ತೈಲ ಬೆಲೆಯನ್ನು ಎರಡು ದಿನಗಳಲ್ಲಿ ದಿನವೂ ಏರಿಸಲಾಗಿದೆ. ಸೋಮವಾರ 29 ಪೈಸೆ ಏರಿಕೆಯಾಗಿದ್ದರೆ, ಇಂದು ಮತ್ತೆ ದರ ಏರಿದ್ದು ಸಾರ್ವಕಾಲಿಕ ದಾಖಲೆಯನ್ನು ದಾಟಿ ಮುನ್ನುಗ್ಗಿದೆ.
ಮುಂಬೈ ಮಹಾನಗರದಲ್ಲಿ ಇಂದು ಪೆಟ್ರೋಲ್ ದರ 100.72 ರೂ. ಆಗಿದ್ದರೆ, ಡೀಸೆಲ್ ಬೆಲೆ ಲೀಟರಿಗೆ 92.39 ರೂ.ಗೆ ಏರಿಕೆಯಾಗಿದೆ. ಡೀಸೆಲ್ ದರವೂ ದೇಶದಲ್ಲೇ ಅತಿ ಹೆಚ್ಚು ದರ ಮುಂಬೈನಲ್ಲಿ ದಾಖಲಾಗಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಅಬಕಾರಿ ಸುಂಕ ವ್ಯತ್ಯಾಸ ಇರುವುದರಿಂದ ತೈಲ ಬೆಲೆಯೂ ಆಯಾ ಭಾಗದ ತೆರಿಗೆಯನ್ನು ಹೊಂದಿಕೊಂಡು ಬೇರೆ ಬೇರೆಯಾಗಿದೆ. ಸ್ಥಳೀಯ ಸುಂಕ ಹೆಚ್ಚಿರುವ ಕಾರಣದಿಂದ ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ರಾಜಸ್ಥಾನದ ವಿವಿಧ ನಗರಗಳಲ್ಲಿ ವಾರದ ಹಿಂದೆಯೇ ಪೆಟ್ರೋಲ್ ದರ ನೂರು ರೂ. ದಾಟಿತ್ತು.
ಇದೀಗ ಸೋಮವಾರ ಮತ್ತು ಮಂಗಳವಾರ ಎರಡು ದಿನವೂ ತೈಲ ಬೆಲೆ 50 ಪೈಸೆ ಏರಿಕೆಯಾಗಿರುವುದರಿಂದ ಇತಿಹಾಸದಲ್ಲೇ ಅತಿ ಹೆಚ್ಚು ಬೆಲೆಗೆ ತಲುಪಿದೆ. ಮೇ 1ರಿಂದ 15 ದಿನಗಳ ಕಾಲ ತೈಲ ಬೆಲೆಯಲ್ಲಿ ಸ್ಥಿರತೆ ಇದ್ದು, ಯಾವುದೇ ಬದಲಾವಣೆ ಆಗಿರಲಿಲ್ಲ. ಆನಂತರ ಸರದಿಯಂತೆ ಏರಿಸಿಕೊಂಡು ಬರಲಾಗಿದ್ದು, ದೆಹಲಿಯಲ್ಲಿ ಪೆಟ್ರೋಲಿಗೆ 4.09 ರೂ. ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ 4.66 ರೂ. ಏರಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬ್ಯಾರಲಿಗೆ 70 ಡಾಲರ್ ಗೆ ತಲುಪಿದ್ದು ಇದರಿಂದಾಗಿ ತೈಲ ಕಂಪನಿಗಳು ಹೊರಗಿನ ಪೂರೈಕೆಗೆ ತಕ್ಕಂತೆ ದರವನ್ನೂ ಏರಿಕೆ ಮಾಡುತ್ತಿದ್ದು ಇದರ ನೇರ ಹೊರೆ ಜನರ ಮೇಲೆ ಬೀಳುತ್ತಿದೆ.
Petrol and diesel rates have been hiked for a second consecutive day. The fresh hike comes after consolidation in global crude oil rates, which also indicates that state-run oil companies may continue to hike fuel prices for a longer period.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm