ಬ್ರೇಕಿಂಗ್ ನ್ಯೂಸ್
01-06-21 04:21 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 1: ದೇಶದ ಹಲವು ರಾಜ್ಯಗಳಲ್ಲಿ ಪೂರ್ತಿಯಾಗಿ ಲಾಕ್ಡೌನ್ ಇದ್ದರೂ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮಾತ್ರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಮುಂಬೈ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್ ದರ ನೂರರ ಗಡಿದಾಟಿದ್ದು ಇತಿಹಾಸದಲ್ಲೇ ಅತ್ಯಂತ ಗರಿಷ್ಠ ದರಕ್ಕೆ ತಲುಪಿದೆ.
ಪೆಟ್ರೋಲ್ ಮತ್ತು ಡೀಸೆಲ್ ಗೆ ಇಂದು ಕ್ರಮವಾಗಿ 26 ಮತ್ತು 23 ಪೈಸೆ ಏರಿಕೆಯಾಗಿದ್ದು, ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ರೂ. 94.49 ಹಾಗೂ ಡೀಸೆಲ್ ಬೆಲೆ ರೂ. 85.38 ಆಗಿದೆ. ಸ್ವಲ್ಪ ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದ್ದ ತೈಲ ಬೆಲೆಯನ್ನು ಎರಡು ದಿನಗಳಲ್ಲಿ ದಿನವೂ ಏರಿಸಲಾಗಿದೆ. ಸೋಮವಾರ 29 ಪೈಸೆ ಏರಿಕೆಯಾಗಿದ್ದರೆ, ಇಂದು ಮತ್ತೆ ದರ ಏರಿದ್ದು ಸಾರ್ವಕಾಲಿಕ ದಾಖಲೆಯನ್ನು ದಾಟಿ ಮುನ್ನುಗ್ಗಿದೆ.


ಮುಂಬೈ ಮಹಾನಗರದಲ್ಲಿ ಇಂದು ಪೆಟ್ರೋಲ್ ದರ 100.72 ರೂ. ಆಗಿದ್ದರೆ, ಡೀಸೆಲ್ ಬೆಲೆ ಲೀಟರಿಗೆ 92.39 ರೂ.ಗೆ ಏರಿಕೆಯಾಗಿದೆ. ಡೀಸೆಲ್ ದರವೂ ದೇಶದಲ್ಲೇ ಅತಿ ಹೆಚ್ಚು ದರ ಮುಂಬೈನಲ್ಲಿ ದಾಖಲಾಗಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಅಬಕಾರಿ ಸುಂಕ ವ್ಯತ್ಯಾಸ ಇರುವುದರಿಂದ ತೈಲ ಬೆಲೆಯೂ ಆಯಾ ಭಾಗದ ತೆರಿಗೆಯನ್ನು ಹೊಂದಿಕೊಂಡು ಬೇರೆ ಬೇರೆಯಾಗಿದೆ. ಸ್ಥಳೀಯ ಸುಂಕ ಹೆಚ್ಚಿರುವ ಕಾರಣದಿಂದ ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ರಾಜಸ್ಥಾನದ ವಿವಿಧ ನಗರಗಳಲ್ಲಿ ವಾರದ ಹಿಂದೆಯೇ ಪೆಟ್ರೋಲ್ ದರ ನೂರು ರೂ. ದಾಟಿತ್ತು.


ಇದೀಗ ಸೋಮವಾರ ಮತ್ತು ಮಂಗಳವಾರ ಎರಡು ದಿನವೂ ತೈಲ ಬೆಲೆ 50 ಪೈಸೆ ಏರಿಕೆಯಾಗಿರುವುದರಿಂದ ಇತಿಹಾಸದಲ್ಲೇ ಅತಿ ಹೆಚ್ಚು ಬೆಲೆಗೆ ತಲುಪಿದೆ. ಮೇ 1ರಿಂದ 15 ದಿನಗಳ ಕಾಲ ತೈಲ ಬೆಲೆಯಲ್ಲಿ ಸ್ಥಿರತೆ ಇದ್ದು, ಯಾವುದೇ ಬದಲಾವಣೆ ಆಗಿರಲಿಲ್ಲ. ಆನಂತರ ಸರದಿಯಂತೆ ಏರಿಸಿಕೊಂಡು ಬರಲಾಗಿದ್ದು, ದೆಹಲಿಯಲ್ಲಿ ಪೆಟ್ರೋಲಿಗೆ 4.09 ರೂ. ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ 4.66 ರೂ. ಏರಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬ್ಯಾರಲಿಗೆ 70 ಡಾಲರ್ ಗೆ ತಲುಪಿದ್ದು ಇದರಿಂದಾಗಿ ತೈಲ ಕಂಪನಿಗಳು ಹೊರಗಿನ ಪೂರೈಕೆಗೆ ತಕ್ಕಂತೆ ದರವನ್ನೂ ಏರಿಕೆ ಮಾಡುತ್ತಿದ್ದು ಇದರ ನೇರ ಹೊರೆ ಜನರ ಮೇಲೆ ಬೀಳುತ್ತಿದೆ.
Petrol and diesel rates have been hiked for a second consecutive day. The fresh hike comes after consolidation in global crude oil rates, which also indicates that state-run oil companies may continue to hike fuel prices for a longer period.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm