ಬ್ರೇಕಿಂಗ್ ನ್ಯೂಸ್
01-06-21 04:21 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 1: ದೇಶದ ಹಲವು ರಾಜ್ಯಗಳಲ್ಲಿ ಪೂರ್ತಿಯಾಗಿ ಲಾಕ್ಡೌನ್ ಇದ್ದರೂ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮಾತ್ರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಮುಂಬೈ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್ ದರ ನೂರರ ಗಡಿದಾಟಿದ್ದು ಇತಿಹಾಸದಲ್ಲೇ ಅತ್ಯಂತ ಗರಿಷ್ಠ ದರಕ್ಕೆ ತಲುಪಿದೆ.
ಪೆಟ್ರೋಲ್ ಮತ್ತು ಡೀಸೆಲ್ ಗೆ ಇಂದು ಕ್ರಮವಾಗಿ 26 ಮತ್ತು 23 ಪೈಸೆ ಏರಿಕೆಯಾಗಿದ್ದು, ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ರೂ. 94.49 ಹಾಗೂ ಡೀಸೆಲ್ ಬೆಲೆ ರೂ. 85.38 ಆಗಿದೆ. ಸ್ವಲ್ಪ ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದ್ದ ತೈಲ ಬೆಲೆಯನ್ನು ಎರಡು ದಿನಗಳಲ್ಲಿ ದಿನವೂ ಏರಿಸಲಾಗಿದೆ. ಸೋಮವಾರ 29 ಪೈಸೆ ಏರಿಕೆಯಾಗಿದ್ದರೆ, ಇಂದು ಮತ್ತೆ ದರ ಏರಿದ್ದು ಸಾರ್ವಕಾಲಿಕ ದಾಖಲೆಯನ್ನು ದಾಟಿ ಮುನ್ನುಗ್ಗಿದೆ.


ಮುಂಬೈ ಮಹಾನಗರದಲ್ಲಿ ಇಂದು ಪೆಟ್ರೋಲ್ ದರ 100.72 ರೂ. ಆಗಿದ್ದರೆ, ಡೀಸೆಲ್ ಬೆಲೆ ಲೀಟರಿಗೆ 92.39 ರೂ.ಗೆ ಏರಿಕೆಯಾಗಿದೆ. ಡೀಸೆಲ್ ದರವೂ ದೇಶದಲ್ಲೇ ಅತಿ ಹೆಚ್ಚು ದರ ಮುಂಬೈನಲ್ಲಿ ದಾಖಲಾಗಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಅಬಕಾರಿ ಸುಂಕ ವ್ಯತ್ಯಾಸ ಇರುವುದರಿಂದ ತೈಲ ಬೆಲೆಯೂ ಆಯಾ ಭಾಗದ ತೆರಿಗೆಯನ್ನು ಹೊಂದಿಕೊಂಡು ಬೇರೆ ಬೇರೆಯಾಗಿದೆ. ಸ್ಥಳೀಯ ಸುಂಕ ಹೆಚ್ಚಿರುವ ಕಾರಣದಿಂದ ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ರಾಜಸ್ಥಾನದ ವಿವಿಧ ನಗರಗಳಲ್ಲಿ ವಾರದ ಹಿಂದೆಯೇ ಪೆಟ್ರೋಲ್ ದರ ನೂರು ರೂ. ದಾಟಿತ್ತು.


ಇದೀಗ ಸೋಮವಾರ ಮತ್ತು ಮಂಗಳವಾರ ಎರಡು ದಿನವೂ ತೈಲ ಬೆಲೆ 50 ಪೈಸೆ ಏರಿಕೆಯಾಗಿರುವುದರಿಂದ ಇತಿಹಾಸದಲ್ಲೇ ಅತಿ ಹೆಚ್ಚು ಬೆಲೆಗೆ ತಲುಪಿದೆ. ಮೇ 1ರಿಂದ 15 ದಿನಗಳ ಕಾಲ ತೈಲ ಬೆಲೆಯಲ್ಲಿ ಸ್ಥಿರತೆ ಇದ್ದು, ಯಾವುದೇ ಬದಲಾವಣೆ ಆಗಿರಲಿಲ್ಲ. ಆನಂತರ ಸರದಿಯಂತೆ ಏರಿಸಿಕೊಂಡು ಬರಲಾಗಿದ್ದು, ದೆಹಲಿಯಲ್ಲಿ ಪೆಟ್ರೋಲಿಗೆ 4.09 ರೂ. ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ 4.66 ರೂ. ಏರಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬ್ಯಾರಲಿಗೆ 70 ಡಾಲರ್ ಗೆ ತಲುಪಿದ್ದು ಇದರಿಂದಾಗಿ ತೈಲ ಕಂಪನಿಗಳು ಹೊರಗಿನ ಪೂರೈಕೆಗೆ ತಕ್ಕಂತೆ ದರವನ್ನೂ ಏರಿಕೆ ಮಾಡುತ್ತಿದ್ದು ಇದರ ನೇರ ಹೊರೆ ಜನರ ಮೇಲೆ ಬೀಳುತ್ತಿದೆ.
Petrol and diesel rates have been hiked for a second consecutive day. The fresh hike comes after consolidation in global crude oil rates, which also indicates that state-run oil companies may continue to hike fuel prices for a longer period.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm