ಬ್ರೇಕಿಂಗ್ ನ್ಯೂಸ್
05-06-21 05:01 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 05: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರದಿಂದ ಹಂತ ಹಂತವಾಗಿ ಲಾಕ್ಡೌನ್ ತೆರವುಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶನಿವಾರ ತಿಳಿಸಿದರು.
ಆನ್ಲೈನ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರ್ಬಂಧ ಸಡಿಲಗೊಳಿಸಿ ಹೊರಡಿಸಿರುವ ಆದೇಶ ಸೋಮವಾರದಿಂದ ಜಾರಿಗೆ ಬರಲಿದೆ. ಆ ಪ್ರಕಾರ, ಶೇ 50ರ ಪ್ರಯಾಣಿಕರೊಂದಿಗೆ ಮೆಟ್ರೊ ರೈಲು ಸಂಚಾರ ಮಾಡಲಿದೆ. ಸರಿ–ಬೆಸ ಸಂಖ್ಯೆಯ ಆಧಾರದಲ್ಲಿ ಮಾರುಕಟ್ಟೆಗಳು ಮತ್ತು ಮಾಲ್ಗಳು ತೆರೆಯಬೇಕೆಂದು ನಿಬಂಧನೆ ವಿಧಿಸಲಾಗಿದೆ ಎಂದು ತಿಳಿಸಿದರು.
ಸೋಮವಾರ ಬೆಳಿಗ್ಗೆ 5 ಗಂಟೆಗೆ ಕೊನೆಗೊಳ್ಳಬೇಕಿದ್ದ ದೆಹಲಿಯ ಲಾಕ್ಡೌನ್ ಅನ್ನು ಕೆಲವೊಂದು ನಿಯಮಗಳನ್ನು ಸಡಿಸಲಿಸುವುದರೊಂದಿಗೆ ವಿಸ್ತರಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದರು.

ಶೇ. 50ರಷ್ಟು ಹಾಜರಾತಿಯೊಂದಿಗೆ ಸರ್ಕಾರಿ ಮತ್ತು ಖಾಸಗಿ ಕಚೇರಿಗಳನ್ನು ತೆರಯಲು ಅವಕಾಶ ನೀಡಲಾಗುವುದು. ಬೆಳಿಗ್ಗೆ 10 ರಿಂದ ರಾತ್ರಿ 8ರವರೆಗೆ ಬೆಸ-ಸಮ ಆಧಾರದಲ್ಲಿ ಮಾರುಕಟ್ಟೆಗಳು ಮತ್ತು ಮಾಲ್ಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಅವರು ವಿವರಿಸಿದರು.
ನಿತ್ಯ 37 ಸಾವಿರ ಪ್ರಕರಣಗಳು ದಾಖಲಾಗುತ್ತಿವೆ. ಜತೆಗೆ, ದೆಹಲಿಯ ಆಸ್ಪತ್ರೆಯಲ್ಲಿರುವ ಐಸಿಯುಗಳ ಲಭ್ಯತೆ ಮತ್ತು ಔಷಧಗಳ ವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಸರ್ಕಾರ ಕೊರೊನಾ ಮೂರನೇ ಅಲೆ ಎದುರಿಸಲು ದೆಹಲಿ ಸರ್ಕಾರ ಸಜ್ಜಾಗುತ್ತಿದೆ ಎಂದು ಹೇಳಿದರು.

‘ಮೂರನೇ ಅಲೆಯಲ್ಲಿ ಮಕ್ಕಳಿಗೆ ತೊಂದರೆಯಾಗಬಹುದೆಂಬ ತಜ್ಞರ ಹೇಳಿಕೆಗಳ ಹಿನ್ನೆಲೆಯಲ್ಲಿ, ಮಕ್ಕಳಿಗೆ ಅಗತ್ಯವಿರುವ ಹಾಸಿಗೆಗಳು, ಐಸಿಯು ಸೌಲಭ್ಯಗಳು ಮತ್ತು ಇತರ ಉಪಕರಣಗಳ ವ್ಯವಸ್ಥೆಗಾಗಿ ‘ಮಕ್ಕಳ ಕಾರ್ಯಪಡೆ‘ ರಚಿಸಲಾಗಿದೆ‘ ಎಂದು ಅವರು ಮಾಹಿತಿ ನೀಡಿದರು.
ದೆಹಲಿಯಲ್ಲಿ 450 ಮೆಟ್ರಿಕ್ ಟನ್ ಆಮ್ಲಜನಕ ಸಂಗ್ರಹಿವಷ್ಟು ಸಾಮರ್ಥ್ಯವನ್ನು ಹೆಚ್ಚಿಸಲಾಗುತ್ತಿದೆ. 25 ಆಮ್ಲಜನಕ ಟ್ಯಾಂಕರ್ಗಳನ್ನು ಸರ್ಕಾರ ಖರೀದಿಸುತ್ತಿದೆ. 64 ಸಣ್ಣ ಆಮ್ಲಜನಕ ಘಟಕಗಳನ್ನು ಸ್ಥಾಪಿಸುತ್ತಿದೆ. ಕೋವಿಡ್ಗೆ ಚಿಕಿತ್ಸೆಗೆ ಸಂಬಂಧಿಸಿದ ಔಷಧಿಗಳ ದಾಸ್ತಾನು ಮಾಡುವುದಕ್ಕೂ ಗಮನ ಹರಿಸಲಾಗುವುದು ಎಂದು ಅವರು ತಿಳಿಸಿದರು.
Delhi Chief Minister Arvind Kejriwal has announced further relaxations in lockdown. As per the announcement made on Saturday, markets will re-open in Delhi, and metro services will be resumed from June 7 with conditions.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm