ಬ್ರೇಕಿಂಗ್ ನ್ಯೂಸ್
05-06-21 05:42 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 05: ನೂತನ ಮಾಹಿತಿ ತಂತ್ರಜ್ಞಾನ ನಿಯಮ ಪಾಲಿಸದ ಟ್ವಿಟ್ಟರ್ ಇಂಡಿಯಾಗೆ ಕೇಂದ್ರ ಸರ್ಕಾರವು ಕೊನೆಯ ಎಚ್ಚರಿಕೆಯ ಸಂದೇಶವನ್ನು ಕಳುಹಿಸಿದೆ.
ಕೇಂದ್ರ ಸರ್ಕಾರವು ಮೇ 26ರಿಂದ ಅನ್ವಯವಾಗುವಂತೆ ರೂಪಿಸಿರುವ ನೂತನ ಐಟಿ ನೀತಿಯನ್ನು ಟ್ವಿಟ್ಟರ್ ಕೂಡಲೇ ಪಾಲಿಸಬೇಕು, ಇಲ್ಲವಾದಲ್ಲಿ ನೂತನ ಕಾಯ್ದೆ ಪ್ರಕಾರ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗಲಿದೆ ಎಂದು ಹೇಳಿದೆ.
ನೂತನ ಕಾಯ್ದೆಯ ಪ್ರಕಾರ ಟ್ವಿಟ್ಟರ್ ಸಂಸ್ಥೆಯು ನೂತನ ಅನುಸರಣ ಅಧಿಕಾರಿಯನ್ನು ನೇಮಿಸಬೇಕಿತ್ತು, ಆದರೆ ಟ್ವಿಟ್ಟರ್ ಉಲ್ಲೇಖಿಸಿರುವ ಮುಖ್ಯ ಅನುಸರಣ ಅಧಿಕಾರಿ ಸಂಸ್ಥೆಯ ಉದ್ಯೋಗಿಯೇ ಅಲ್ಲ. ಹಾಗೆಯೇ ಅವರು ಅಲ್ಲಿ ನೀಡಲಾಗಿರುವ ಕಚೇರಿ ವಿಳಾಸ ಕೂಡ ಟ್ವಿಟ್ಟರ್ ಸಂಸ್ಥೆಯದ್ದಲ್ಲ. ಇದು ಕಾಯ್ದೆಗೆ ವಿರುದ್ಧವಾಗಿದೆ.
ಟ್ವಿಟ್ಟರ್ ಸಂಸ್ಥೆ ಕಡ್ಡಾಯವಾಗಿ ಮುಖ್ಯ ಅನುಸರಿಣ ಅಧಿಕಾರಿಯನ್ನು ನೇಮಿಸಬೇಕು ಅದೂ ಟ್ವಿಟ್ಟರ್ ಉದ್ಯೋಗಿಯೇ ಆಗಿರಬೇಕು. ಕಳೆದ ಎರಡು ವಾರಗಳಿಂದ ಟ್ವಿಟ್ಟರ್ ಹಾಗೂ ಕೇಂದ್ರ ಸರ್ಕಾರದ ನಡುವೆ ಸಾಕಷ್ಟು ವಾದ-ವಿವಾದಗಳು ನಡೆಯುತ್ತಲೇ ಇದೆ. ಕೇಂದ್ರ ಸರ್ಕಾರದ ಈ ನೋಟಿಸ್ ಈ ವಿವಾದಕ್ಕೆ ತಾರ್ಕಿಕ ಅಂತ್ಯ ಹಾಡುವ ಲಕ್ಷಣ ಕಾಣಿಸುತ್ತಿದೆ.
ಈಗಾಗಲೇ ಈ ವಿಚಾರ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ನಿಯಮ ಪಾಲಿಸದ ಟ್ವಿಟ್ಟರ್ ವಿರುದ್ಧ ಹೈಕೋರ್ಟ್ನಿಂದಲೂ ನೋಟಿಸ್ ಜಾರಿಯಾಗಿದೆ, ಇನ್ನೊಂದೆಡೆ ಸರ್ಕಾರದ ವಿರುದ್ಧ ಟ್ವಿಟ್ಟರ್ ಕೂಡ ಕಾನೂನು ಸಮರ ಸಾರುವ ಸಾಧ್ಯತೆ ಇದೆ. ಈಗಾಗಲೇ ನೂತನ ಐಟಿ ನೀತಿ ವಿರುದ್ಧ ವಾಟ್ಸಾಪ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ.
Twitter has been given a final chance to appoint India-based officers following the country's new rules for social media companies, failing which it will face "consequences", the government said on Saturday amid an escalating standoff with the platform.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm