ಬ್ರೇಕಿಂಗ್ ನ್ಯೂಸ್
07-06-21 06:12 pm Headline Karnataka News Network ದೇಶ - ವಿದೇಶ
ನವದೆಹಲಿ: ದೇಶದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ(ಜೂನ್ 07) ಸಂಜೆ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದರು.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕೋವಿಡ್ 19 ಸೋಂಕು ತಡೆಗಟ್ಟಲು ಹಂತ, ಹಂತವಾಗಿ ಲಾಕ್ ಡೌನ್ ಸೇರಿದಂತೆ ಹಲವಾರು ನಿರ್ಬಂಧಗಳನ್ನು ಜಾರಿಗೊಳಿಸಿದ್ದವು.
ದೇಶದಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪುವವರ ಪ್ರಮಾಣ ಕೂಡಾ ಕಡಿಮೆಯಾಗಿದ್ದು, ಸಕ್ರಿಯ ಕೋವಿಡ್ 19 ಪ್ರಕರಣಗಳ ಸಂಖ್ಯೆ ಕೂಡಾ 14ಲಕ್ಷಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಪ್ರಧಾನಿ ನರೇಂದ್ರ ಭಾಷಣದ ಮುಖ್ಯಾಂಶಗಳು-ಭಯಂಕರ ಮಹಾಮಾರಿ ವಿರುದ್ಧ ಹೋರಾಡಲು ಸರ್ಕಾರವು ಹಲವು ಆಸ್ಪತ್ರೆಗಳನ್ನು ನಿರ್ಮಿಸಿದೆ. ಭಾರತದ ಇತಿಹಾಸದಲ್ಲಿ ಬಳಕೆ ಮಾಡದಷ್ಟು ಮೆಡಿಕಲ್ ಆಕ್ಸಿಜನ್ ಬಳಕೆಯಾಗಿದೆ. ಆಮ್ಲಜನಕ ಆಮದಿಗೆ ಭಾರತೀಯ ವಾಯು ಸೇನೆ, ನೌಕಾಪಡೆಯನ್ನು ಬಳಸಲಾಯಿತು.-ದೇಶದಲ್ಲಿ ವೈದ್ಯಕೀಯ ಆಮ್ಲಜನಕ ಉತ್ಪಾದನೆ ಶೇ.10ರಷ್ಟು ಹೆಚ್ಚಳ ಮಾಡಲಾಗಿದೆ.-ಕೊರೊನಾ ಎನ್ನುವ ಶತ್ರು ವಿರುದ್ಧ ಹೋರಾಡಲು ಮಾಸ್ಕ್, 2 ಮೀಟರ್ ಸಾಮಾಜಿಕ ಅಂತರವೇ ಮೊದಲ ಉಪಾಯವಾಗಿದೆ.- ಭಾರತದಂತಹ ವಿಶಾಲವಾದ ದೇಶದಲ್ಲಿ ಲಸಿಕೆ ಇರಲಿಲ್ಲ, ಒಂದೊಮ್ಮೆ ಭಾರತದಲ್ಲಿ ಲಸಿಕೆ ತಯಾರಿಸದಿದ್ದರೆ ಭಾರತದ ಪರಿಸ್ಥಿತಿ ಏನಾಗುತ್ತಿತ್ತು ಎಂಬುದನ್ನು ಗಮನಿಸಬೇಕಿದೆ.- ಭಾರತದಲ್ಲಿ ಮೊದಲು ವಿದೇಶದಿಂದ ಲಸಿಕೆ ಪಡೆಯಲು ಕನಿಷ್ಠವೆಂದರೂ 10 ವರ್ಷಗಳ ಕಾಲ ಬೇಕಾಗುತ್ತಿತ್ತು, ಮೊದಲು ಅಲ್ಲಿ ಲಸಿಕೆ ಉತ್ಪಾದನೆ ಕೆಲಸ ಶುರು ಮಾಡುತ್ತಿದ್ದರು, ಅವರು ಲಸಿಕೆ ಕೆಲಸವನ್ನು ಪೂರ್ಣಗೊಳಿಸಿದರೂ ಭಾರತದಲ್ಲಿ ಲಸಿಕೆ ಉತ್ಪಾದನೆ ಶುರುವಾಗುತ್ತಿರಲಿಲ್ಲ.-ಪೋಲಿಯೋ, ಹೆಪಟೈಸರ್ ಬಿ, ಸ್ಮಾಲ್ ಪಾಕ್ಸ್ ರೀತಿಯ ರೋಗಗಳಿಗೆ ಲಸಿಕೆ ಪಡೆಯಲು ನಮ್ಮ ದೇಶವು ಸಾಕಷ್ಟು ಕಷ್ಟಪಟ್ಟಿತ್ತು.
-ಗರೀಬ್ ಕಲ್ಯಾಣ ಯೋಜನೆ ನವೆಂಬರ್ ವರೆಗೂ ವಿಸ್ತರಣೆ ಮಾಡಲಾಗುತ್ತದೆ, ಯಾವ ಬಡವನೂ ಹಸಿವಿನಲ್ಲಿ ಬಳಲಲು ಸರ್ಕಾರ ಬಿಡುವುದಿಲ್ಲ-ದೇಶದ 80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯ ವಿತರಣೆ
-ನೇಸಲ್ ಕೋವಿಡ್ ಲಸಿಕೆ ಸಂಶೋಧನೆ ಪ್ರಗತಿಯಲ್ಲಿದೆ-ಎರಡು ದೇಶೀಯ ಕೋವಿಡ್ ಲಸಿಕೆ ಬಳಕೆ ಮಾಡಲಾಗುತ್ತಿದೆ, 23 ಕೋಟಿ ಲಸಿಕೆಯನ್ನು ಈಗಾಗಲೇ ನೀಡಲಾಗಿದೆ.
Free food grains will be available in fixed quantity every month for over 800 million citizens till Diwali.
03-05-24 10:19 pm
Bangalore Correspondent
Jai Shri Ram Congress leader Basheeruddin: ಜೈ...
03-05-24 09:43 pm
Prajwal Revanna, sex scandal, rape: ಗನ್ ತೋರಿಸ...
03-05-24 09:06 pm
AC blast in Kalyan jewellers Bellary: ಬಳ್ಳಾರಿ...
03-05-24 07:41 pm
Raju Gowda, Siddaramaiah, DK Shivakumar: ಡಿಕೆ...
03-05-24 05:15 pm
03-05-24 10:58 pm
HK News Desk
ಸಿಸೇರಿಯನ್ ಮಾಡುವಾಗ ಕೈಕೊಟ್ಟ ಕರೆಂಟ್ ; ಮೊಬೈಲ್ ಟಾ...
03-05-24 10:28 am
Dubai Rain: ದುಬೈನಲ್ಲಿ ಮತ್ತೆ ಭಾರಿ ಮಳೆ ; ಶಾಲೆ,...
03-05-24 10:20 am
Narendra Modi, Rahul Gandhi: ರಾಹುಲ್ ಬಗ್ಗೆ ಪಾಕ...
02-05-24 10:07 pm
Hindu Marriage, Supreme court: ಹಿಂದು ವಿವಾಹ ಎನ...
02-05-24 09:25 pm
03-05-24 08:32 pm
Mangalore Correspondent
Mullai Muhilan Dc Mangalore: ಕುಡಿಯುವ ನೀರು ಪೂರ...
03-05-24 06:31 pm
Lakshadweep to Mangalore Speed boat ship: ಲಕ್...
02-05-24 07:52 pm
Mangalore Yesuraj, AEO, Kukke Subrahmanya Tem...
02-05-24 02:24 pm
Mangalore News, Konaje, Baby: ಐದು ತಿಂಗಳ ಹಸುಗೂ...
01-05-24 08:55 pm
03-05-24 09:57 pm
Mangalore Correspondent
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm
Mumbai crime, Minor pregnant: ಮದುವೆ ಮುನ್ನವೇ 2...
03-05-24 10:24 am
Mangalore Crime, Drugs Arrest; ಕೋಟೆಕಾರ್ ಬೀರಿಯ...
01-05-24 10:18 pm
Mangalore crime, Court: ಮೆಲ್ಕಾರ್ ಬಳಿ ಕೋಮು ದ್ವ...
01-05-24 06:44 pm