ಬ್ರೇಕಿಂಗ್ ನ್ಯೂಸ್
01-08-20 06:55 am Headline Karnataka News Network ದೇಶ - ವಿದೇಶ
ಅಲಾಸ್ಕ, ಆ 01: ವಿಮಾನಗಳೆರಡರ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಶಾಸಕ ಸೇರಿ ಏಳು ಮಂದಿ ಮೃತಪಟ್ಟಿರುವ ಘಟನೆ ಶುಕ್ರವಾರ ಅಮೆರಿಕದ ಅಲಾಸ್ಕದ ಕೆನೈ ಪೆನಿನ್ಸುಲಾದ ಸೋಲ್ಡೊಟ್ನಾ ನಗರದ ವಿಮಾನ ನಿಲ್ದಾಣದ ಸಮೀಪದಲ್ಲಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿಮಾನ ಪತನದಲ್ಲಿ ಮೃತಪಟ್ಟವರನ್ನು ಶಾಸಕ ಗ್ಯಾರಿ ನೂಪ್, ಪೈಲಟ್ ಗ್ರೆಗೋರಿ ಬೆಲ್ (67), ಗೈಡ್ ಡೇವಿಡ್ ರೋಜರ್ಸ್ (40) ಮತ್ತು ಸೌಥ್ ಕರೊಲಿನಾ ಪ್ರವಾಸಿಗರಾದ ಕಲೆಬ್ ಹಸ್ಲಿ (26), ಹೆದರ್ ಹಸ್ಲಿ (25), ಮೆಕಾಯ್ ಹಸ್ಲಿ (24) ಮತ್ತು ಕ್ರಿಸ್ಟಿ ರೈಟ್ (23) ಎಂದು ಗುರುತಿಸಲಾಗಿದೆ.
ಎರಡು ವಿಮಾನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಯಾರೂ ಕೂಡಾ ಬದುಕುಳಿದಿಲ್ಲ. ಅಲಾಸ್ಕಾ ಪ್ರದೇಶವನ್ನು ಪ್ರತಿನಿಧಿಸುತ್ತಿದ್ದ ಶಾಸಕ ಗ್ಯಾರಿ ನೂಪ್ ವಿಮಾನವೊಂದರಲ್ಲಿ ಏಕಾಂಗಿಯಾಗಿ ವಾಪಾಸ್ಸಾಗುತ್ತಿದ್ದರು. ಇನ್ನೊಂದು ವಿಮಾನವು ಅಲಾಸ್ಕಾ ಕಡೆಗೆ ಸೌಥ್ ಕರೊನಾದಿಂದ ಬರುತ್ತಿದ್ದು, ಈ ವಿಮಾನದಲ್ಲಿ ನಾಲ್ಕು ಪ್ರವಾಸಿಗರು ಸೇರಿದಂತೆ ಓರ್ವ ಗೈಡ್ ಮತ್ತು ಪೈಲಟ್ ಇದ್ದರು.
ಮಾಯು ಮಾರ್ಗದ ನಡುವೆ ಎರಡು ವಿಮಾನಗಳ ಮುಖಾಮುಖಿ ಡಿಕ್ಕಿಯ ಪರಿಣಾಮ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದು, ಈ ಪೈಕಿ ಓರ್ವನನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಸಂದರ್ಭ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ.
ಮೃತ ಶಾಸಕ ಗ್ಯಾರಿ ನೂಪ್ ಅವರು ಓರ್ವ ರಿಪಬ್ಲಿಕನ್ ಹಾಗೂ ರಾಜ್ಯ ಸದನದ ಉಭಯ ಪಕ್ಷೀಯ ಬಹುಮತದ ಸದಸ್ಯರಾಗಿದ್ದರು. ಇವರ ಈ ದುರಂತ ಸಾವಿಗೆ ಹಲವಾರ ಸಹೋದ್ಯೋಗಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಇವರು ತಮ್ಮ ಪ್ರದೇಶದ ಅಭಿವೃದ್ದಿಗಾಗಿ ದುಡಿಯುತ್ತಿದ್ದು, ಇಂತಹ ನಾಯಕನನ್ನು ನಾವು ಕಳೆದುಕೊಂಡಿದ್ದೇವೆ ಎಂದು ಸಹೋದ್ಯೋಗಿಗಳು ದುಃಖಿತರಾಗಿದ್ದಾರೆ.
ಪ್ರಕರಣದ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ.
2019ರ ಮೇ ತಿಂಗಳಿನಲ್ಲಿ ಕೆಟ್ಟಿಕನ್ ಬಳಿ ವಿಮಾನಗಳ ಡಿಕ್ಕಿ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದು, 10 ಜನರು ಪ್ರಾಣಾಪಾಯದಿಂದ ಪಾರಾಗಿದ್ದರು.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm